AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಕ್​ ಫ್ರಂ ಹೋಮ್​ನಿಂದ ಮನಸ್ಸು ಭಾರವೆನಿಸಿರಬಹುದು! ಅನಗತ್ಯ ಚಿಂತೆ ಹೋಗಲಾಡಿಸಲು ಇಲ್ಲಿದೆ ಸಲಹೆಗಳು

ಕೆಲಸದಲ್ಲಿ ಕಾನ್ಫರೆನ್ಸ್​ ಕರೆಗಳು, ಮೀಟಿಂಗ್​ಗಳು ಇರಬಹುದು. ಹೀಗಿರುವಾಗ ಕುಳಿತಲ್ಲಿಯೇ ದೂರವಾಣಿ ಕರೆಯಲ್ಲಿ ಮಾತನಾಡುವುದರ ಬದಲಾಗಿ ಓಡಾಡುತ್ತಾ ಮಾತನಾಡುವ ಅಭ್ಯಾಸ ಮಾಡಿಕೊಳ್ಳಿ.

ವರ್ಕ್​ ಫ್ರಂ ಹೋಮ್​ನಿಂದ ಮನಸ್ಸು ಭಾರವೆನಿಸಿರಬಹುದು! ಅನಗತ್ಯ ಚಿಂತೆ ಹೋಗಲಾಡಿಸಲು ಇಲ್ಲಿದೆ ಸಲಹೆಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 19, 2021 | 7:28 AM

Share

ಕೊವಿಡ್​-19 ಸಾಂಕ್ರಾಮಿಕ ಖಾಯಿಲೆಯ ನಿಯಂತ್ರಣಕ್ಕಾಗಿ ಅದೆಷ್ಟೋ ಕ್ರಮಗಳನ್ನು ಜಾರಿಗೆ ತರಲಾಯಿತು. ಜನರೆಲ್ಲಾ ಮನೆಯಲ್ಲಿಯೇ ಕುಳಿತು ಕೆಲಸ ಮಾಡಬೇಕಾಯಿತು. ಹೀಗಿರುವಾಗ ಮನೆಯಿಂದ ಹೊರಬೀಳದೇ ಮನೆಯಲ್ಲಿ ಕೆಲಸ ಮಾಡುವುದು ಆರಾಮದಾಯಕ ಅನಿಸುತ್ತಿದೆಯೇ? ಅಧ್ಯಯನದ ಪ್ರಕಾರ ಮನೆಯಲ್ಲಿ ಕೆಲಸ ಮಾಡುವುದು ಮಾನಸಿಕ ಮತ್ತು ದೈಹಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಕಳೆದ ಒಂದು ವರ್ಷದಲ್ಲಿ ಮನೆಯಲ್ಲಿಯೇ ಕುಳಿತು ಕೆಲಸ ಮಾಡುವುದು ಒತ್ತಡ ಮತ್ತು ಆತಂಕವನ್ನು ಹೆಚ್ಚಿಸಿದೆ. 

ಸಾರ್ವಜನಿಕ ಸ್ಥಳಗಳಾದ ಕಡಲ ತೀರಗಳು, ಜಿಮ್​ಗಳು, ಉದ್ಯಾನವನಗಳನ್ನು ಮುಚ್ಚಿರುವುದು ಹಾಗೆಯೇ ವಾಕಿಂಗ್​ ಅಥವಾ ಸೈಕ್ಲಿಂಗ್​ ಇತರ ಹೊರಾಂಗಣ ಚಟುವಟಿಕೆಳು ಇಲ್ಲದಿರುವುದು ಜನರ ಆರೋಗ್ಯ ಸಮಸ್ಯೆಯನ್ನು ಇನ್ನಷ್ಟು ಹೆಚ್ಚಿಸಿದೆ. ಹಾಗಿರುವಾಗ ಮನೆಯಲ್ಲಿಯೇ ಇರುವ ಸಮಯವನ್ನು ವ್ಯರ್ಥ ಮಾಡದೇ ನಿಮ್ಮ ಆರೋಗ್ಯದ ಸುಧಾರಣೆಗೆ ಮಾಡುವ ಯೋಗ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳಿ.

ನಿಮ್ಮ ದಿನನಿತ್ಯದ ಕೆಲಸವನ್ನು ಪ್ರಾರಂಭಿಸುವ ಮೊದಲು ಪ್ರಾಣಾಯಾಮ, ಯೋಗಗಳನ್ನು ಅಭ್ಯಾಸದಲ್ಲಿಟ್ಟುಕೊಳ್ಳಿ. ಅನುಲೋಮ ವಿಲೋಮ ಪ್ರಾಣಾಯಾಮವನ್ನು ಮಾಡಿ. ಇದರಿಂದ ದೇಹವು ಸಡಿಲಗೊಳ್ಳುತ್ತದೆ.

ಕೆಲಸದಲ್ಲಿ ಕಾನ್ಫರೆನ್ಸ್​ ಕರೆಗಳು, ಮೀಟಿಂಗ್​ಗಳು ಇರಬಹುದು. ಹೀಗಿರುವಾಗ ಕುಳಿತಲ್ಲಿಯೇ ದೂರವಾಣಿ ಕರೆಯಲ್ಲಿ ಮಾತನಾಡುವುದರ ಬದಲಾಗಿ ಓಡಾಡುತ್ತಾ ಮಾತನಾಡುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ನಿಮ್ಮ ದೇಹಕ್ಕೆ ವ್ಯಾಯಾಮ ಸಿಗುತ್ತದೆ. ಸ್ನಾಯುಗಳು ಸಡಿಗೊಳ್ಳುವುದರಿಂದ ನಿಮ್ಮ ಆರೋಗ್ಯ ಸುಧಾರಿಸುತ್ತದೆ.

ದಿನಪೂರ್ತಿ ಲ್ಯಾಪ್​ಟಾಪ್ ಅಥವಾ ಕಂಪ್ಯೂಟರ್​ ನೋಡುತ್ತಿರುವದರಿಂದ ಕಣ್ಣು ಉರಿ ಬರಬಹುದು. ಕಣ್ಣಿಗೆ ಚೂರಾದರೂ ವಿಶ್ರಾಂತಿ ನೀಡಲೇ ಬೇಕು. ಕನಿಷ್ಟ 20 ನಿಮಿಷಗಳ ಕಾಲ ಕಂಪ್ಯೂಟರ್​ ಪರದೆಯನ್ನು ನೋಡದೇ ದೂರವಿರಲು ಪ್ರಯತ್ನಿಸಿ. ಇದರಿಂದ ಕೊಂಚವಾದರೂ ಕಣ್ಣಿಗೆ ವಿಶ್ರಾಂತಿ ಸಿಗುತ್ತದೆ.

ಕುಳಿತಲ್ಲಿಯೇ ಕುಳಿತು ತೂಕ ಹೆಚ್ಚಾಗಬಹುದು. ಹೆಚ್ಚಿನ ತೂಕ ಹೊಂದುವುದು ಇತರ ರೋಗ ಲಕ್ಷಣಗಳಿಗೆ ಕಾರಣವಾಗುತ್ತದೆ. ಹಾಗಾಗಿ ದಿನನಿತ್ಯ ಯೋಗ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದರಿಂದ ಮಾನಸಿಕ ಆರೋಗ್ಯ ಸುಧಾರಿಸುವುದಲ್ಲದೇ ದೈಹಿಕವಾಗಿಯೂ ಸದೃಢವಾಗಿರಲು ಸಹಾಯವಾಗುತ್ತದೆ.

ಇದನ್ನೂ ಓದಿ:

Health Tips: ತುಟಿ ಕಪ್ಪಾಗಿದೆಯೇ? ಇಲ್ಲಿದೆ ಪರಿಹಾರ

Health Tips: ದಾಳಿಂಬೆ ಸಿಪ್ಪೆಯಲ್ಲಿದೆ ನಿಮಗೆ ಗೊತ್ತಿಲ್ಲದ ಪ್ರಯೋಜನಗಳು

Follow Us
Web contact
Web contact

TV9 Kannada

Read More
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ