AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Exam Stress: ಪರೀಕ್ಷೆಯ ಒತ್ತಡವನ್ನು ನಿವಾರಿಸುವುದು ಹೇಗೆ? ಇಲ್ಲಿದೆ ಸಖತ್ ಟಿಪ್ಸ್

ಧ್ಯಾನದಿಂದ ಸಂಗೀತದ ವರೆಗೂ ಪರೀಕ್ಷೆಯ ಒತ್ತಡವನ್ನು ನಿಯಂತ್ರಿಸಿ ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳಲು ವಿದ್ಯಾರ್ಥಿಗಳು ತಮ್ಮ ದೈನಂದಿನ ದಿನಚರಿಯಲ್ಲಿ ಅಳವಡಿಸಿಕೊಳ್ಳಬೇಕಾದ ಚಟುವಟಿಕೆಗಳ ಪಟ್ಟಿ ಇಲ್ಲಿವೆ.

Exam Stress: ಪರೀಕ್ಷೆಯ ಒತ್ತಡವನ್ನು ನಿವಾರಿಸುವುದು ಹೇಗೆ? ಇಲ್ಲಿದೆ ಸಖತ್ ಟಿಪ್ಸ್
ಪರೀಕ್ಷಾ ಒತ್ತಡImage Credit source: Juneva Health
ನಯನಾ ಎಸ್​ಪಿ
|

Updated on: Feb 28, 2023 | 12:43 PM

Share

ಪರೀಕ್ಷೆ ಎಲ್ಲಾ ವಯಸ್ಸಿನ ವಿದ್ಯಾರ್ಥಿಗಳಿಗೆ ಮನಸ್ಸಿಗೂ ಪ್ರಭಾವ ಬೀರುತ್ತದೆ. ಪರೀಕ್ಷಾ ಸಮಯದಲ್ಲಿ ಎಲ್ಲಾ ವಿದ್ಯಾರ್ಥಿಗಳು ಹೆಚ್ಚು ಒತ್ತಡವನ್ನು ಎದುರಿಸುತ್ತಾರೆ. ಒತ್ತಡವು ಮಾನಸಿಕ ಆರೋಗ್ಯಕ್ಕೆ ಹಾನಿಕಾರಕವಾಗಿರುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸುವ, ಶೈಕ್ಷಣಿಕ ಉತ್ಕೃಷ್ಟತೆಯನ್ನು ಕಾಪಾಡಿಕೊಳ್ಳುವ ಮತ್ತು ಅತ್ಯುತ್ತಮ ಫಲಿತಾಂಶಗಳನ್ನು ಪಡೆಯಲು ಅಡಚಣೆ ಉಂಟು ಮಾಡುತ್ತದೆ. ಈ ನಿಟ್ಟಿನಲ್ಲಿ, ಆ ಅವಧಿಯಲ್ಲಿ ಉಂಟಾಗುವ ಒತ್ತಡ ಮತ್ತು ಆತಂಕವು ವಿದ್ಯಾರ್ಥಿಯ ಏಕಾಗ್ರತೆ, ಸ್ಮರಣೆ ಮತ್ತು ಒಟ್ಟಾರೆ ಉತ್ಪಾದಕತೆಯ ಮೇಲೆ ಪರಿಣಾಮ ಬೀರಬಹುದು. ಪರೀಕ್ಷೆಯ ಅವಧಿಯಲ್ಲಿ ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳಲು ವಿದ್ಯಾರ್ಥಿಗಳು ತಮ್ಮ ದೈನಂದಿನ ದಿನಚರಿಯಲ್ಲಿ ಶಾಂತಗೊಳಿಸುವ ಕೆಲವು ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವುದು ಒಳ್ಳೆಯದು. ಪರೀಕ್ಷೆಯ ಉದ್ದಕ್ಕೂ ವಿದ್ಯಾರ್ಥಿಯನ್ನು ಕೇಂದ್ರೀಕರಿಸಲು ಮತ್ತು ತೊಡಗಿಸಿಕೊಳ್ಳಲು ಸಹಾಯ ಮಾಡುವ ಕೆಲವು ಅಭ್ಯಾಸಗಳು ಈ ಕೆಳಗಿನಂತಿದೆ.

MyPeegu ಸಂಸ್ಥಾಪಕ ಮತ್ತು CEO ಚೇತನ್ ಜೈಸ್ವಾಲ್ ಅವರು ಹಿಂದೂಸ್ತಾನ್ ಟೈಮ್ಸ್​ನೊಂದಿಗೆ ಹಂಚಿಕೊಂಡಿದ್ದಾರೆ, ಪರೀಕ್ಷೆಯ ಸಮಯದಲ್ಲಿ ಮನಸ್ಸಿನ ಶಾಂತಿಗಾಗಿ ಅಭ್ಯಾಸ ಮಾಡಬೇಕಾಗಿರುವ ಕೆಲವು ಚಟುವಟಿಕೆಗಳು.

  • ಸಂಗೀತ ಧ್ಯಾನ:

ಸಂಗೀತ ಧ್ಯಾನ ಮನಸ್ಸಿನ ಶಾಂತಿಯನ್ನು ಉತ್ತೇಜಿಸಲು ಮತ್ತು ಪರೀಕ್ಷೆಯ ಸಮಯದಲ್ಲಿ ಒತ್ತಡವನ್ನು ಕಡಿಮೆ ಮಾಡಲು ಅತ್ಯುತ್ತಮ ಮಾರ್ಗವಾಗಿದೆ. ಸಂಗೀತ ಧ್ಯಾನವು ಮನಸ್ಸನ್ನು ಶಾಂತಗೊಳಿಸುವ ಪರಿಣಾಮವನ್ನು ಹೊಂದಿದೆ, ಇದು ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ಚಿತ್ತಸ್ಥಿತಿಯ ಮೇಲೆ ಸಕಾರಾತ್ಮಕ ಪರಿಣಾಮವನ್ನು ಉಂಟುಮಾಡುವ ಮೂಲಕ ಗಮನ ಮತ್ತು ಏಕಾಗ್ರತೆಯನ್ನು ಸುಧಾರಿಸಲು ಇದು ಸಹಾಯ ಮಾಡುತ್ತದೆ.

ಪರೀಕ್ಷೆಯ ಸಮಯದಲ್ಲಿ ಸಂಗೀತ ಕೇಳುತ್ತ ಧ್ಯಾನ ಮಾಡುವುದರಿಂದ ವಿದ್ಯಾರ್ಥಿಯು ನೆನಪಿನ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ವೈಜ್ಞಾನಿಕ ಅಧ್ಯಯನಗಳಲ್ಲಿತೋರಿಸಲಾಗಿದೆ. ಹಾಗಾಗಿ, ಪರೀಕ್ಷೆಯ ಸಮಯದಲ್ಲಿ ಸಂಗೀತ ಧ್ಯಾನವನ್ನು ಅಭ್ಯಾಸ ಮಾಡಿಕೊಂಡರೆ ಮನಸ್ಸಿನ ಶಾಂತಿಯನ್ನು ಉತ್ತೇಜಿಸುವಲ್ಲಿ ಇದು ಪರಿಣಾಮಕಾರಿಯಾಗುತ್ತದೆ.

  • ಜಾಗರೂಕರಾಗಿರುವುದು:

ನೀವು ಎಚ್ಚರದಿಂದಿದ್ದಾಗ ನಮ್ಮ ಮನಸ್ಸು ಪ್ರತಿ ಕ್ಷಣ ಅದೇ ಸಂದರ್ಭದಲ್ಲಿ ಅಥವಾ ಜಾಗದಲ್ಲಿ ಇರುತ್ತದೆ. ಜೊತೆಗೆ ನಿಮ್ಮ ಪಂಚೇಂದ್ರಿಯಗಳು ಎಂದರೆ ಸ್ಪರ್ಶ, ರುಚಿ, ದೃಷ್ಟಿ, ಶ್ರವಣ ಮತ್ತು ವಾಸನೆ ಎಚ್ಚೆತ್ತಿಕೊಂಡಿರುತ್ತದೆ. ಇದರಿಂದ ಪರೀಕ್ಷೆಯ ಉದ್ದಕ್ಕೂ ಮನಸ್ಸು ಹಿಡಿತದಲ್ಲಿರುತ್ತದೆ, ಶಾಂತ ರೀತಿಯಲ್ಲಿ ಪರೀಕ್ಷೆಯನ್ನು ಬರೆಯಲು ಸಾಧ್ಯವಾಗುತ್ತದೆ. ಗಮನವನ್ನು ಕೇಂದ್ರೀಕರಿಸುವ ಶಿಸ್ತನ್ನು ಅಭ್ಯಾಸ ಮಾಡಿಕೊಂಡರೆ ಪರೀಕ್ಷೆಯ ಸಮಯದಲ್ಲಿ ಏಕಾಗ್ರತೆಯಿಂದ ಇರಲು ಸಾಧ್ಯವಾಗುತ್ತದೆ. ಪರೀಕ್ಷೆಯ ಸಮಯದಲ್ಲಿ ನೀವು ಜಾಗರೂಕರಾಗಿರುವಾಗ, ನೀವು ಶಾಂತವಾಗಿ, ಕೇಂದ್ರೀಕೃತವಾಗಿರಲು ಸಾಧ್ಯವಾಗುತ್ತದೆ. ಇದು ನಿಮಗೆ ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.

  • ಆರೋಗ್ಯಕರ ಅಭ್ಯಾಸಗಳು

ಪರೀಕ್ಷೆಗಳನ್ನು ಎದುರಿಸುವವರು ಒತ್ತಡಕ್ಕೆ ಒಳಗಾಗುವುದು ಸಾಮಾನ್ಯ, ಆದ್ದರಿಂದ ಆರೋಗ್ಯಕರ ಅಭ್ಯಾಸಗಳನ್ನು ಅಭ್ಯಾಸ ಮಾಡುವುದು ಅತ್ಯಗತ್ಯ. ಪರೀಕ್ಷೆಯ ತಯಾರಿಗೆ ಹೆಚ್ಚಿನ ಶ್ರಮ ಮತ್ತು ಏಕಾಗ್ರತೆಯ ಅಗತ್ಯವಿರುತ್ತದೆ, ಇದರಿಂದ ವಿದ್ಯಾರ್ಥಿಗಳು ಆರೋಗ್ಯ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆಗಳಿವೆ. ಪರೀಕ್ಷೆಯ ಸಮಯದಲ್ಲಿ ವ್ಯಾಯಾಮ, ಯೋಗ, ಉತ್ತಮ ಆಹಾರ, ಸರಿಯಾದ ನಿದ್ರೆ ಮತ್ತು ಸಮಯ ನಿರ್ವಹಣೆಯಂತಹ ಆರೋಗ್ಯಕರ ಅಭ್ಯಾಸಗಳನ್ನು ಕಾಪಾಡಿಕೊಳ್ಳುವುದು ಒತ್ತಡವನ್ನು ಕಡಿಮೆ ಮಾಡಲು ಮತ್ತು ಮನಸ್ಸಿನ ಶಾಂತಿಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ವಿದ್ಯಾರ್ಥಿಗಳು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮೂಲಕ ಒತ್ತಡವನ್ನು ಕಡಿಮೆ ಮಾಡಬಹುದು ಮತ್ತು ಮನಸ್ಸಿನ ಶಾಂತಿಯನ್ನು ಹೆಚ್ಚಿಸಿಕೊಳ್ಳಬಹುದು. ಇದು ಸುಧಾರಿತ ಶೈಕ್ಷಣಿಕ ಸಾಧನೆಗೆ ಕಾರಣವಾಗಬಹುದು.

  • ಶಾಂತ ಮನಸ್ಸು: ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಉತ್ತಮ ಮಾರ್ಗ

ಪರೀಕ್ಷಾ ಆತಂಕ ಮನಸ್ಸಿನ ಒತ್ತಡವನ್ನು ಹೆಚ್ಚಿಸುತ್ತದೆ,ಇದು ವಿದ್ಯಾರ್ಥಿಯ ಮನಸ್ಸಿನ ಶಾಂತಿಯ ಮೇಲೆ ಪ್ರಭಾವ ಬೀರಬಹುದು. ಇದರಿಂದ ಹೊರ ಬರಲು ದೈನಂದಿನ ದಿನಚರಿಯಲ್ಲಿ ಶಾಂತಗೊಳಿಸುವ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವುದು, ವಿಶೇಷವಾಗಿ ಪರೀಕ್ಷೆಗಳ ಮಧ್ಯೆ, ಶಾಂತತೆಯನ್ನು ಕಾಪಾಡಿಕೊಳ್ಳನು ನೀವು ಏನು ಮಾಡಬಹುದು ಎಂದು ಅರ್ಥ ಮಾಡಿಕೊಳ್ಳುವುದೇ ಇದಕ್ಕೆ ಮಾರ್ಗ.

ಪರೀಕ್ಷೆಯ ಒತ್ತಡವನ್ನು ನಿಯಂತ್ರಿಸಲು ಕೆಲವರಿಗೆ ವ್ಯಾಯಾಮ, ಕೆಲವರಿಗೆ ಸಂಗೀತ ಕೇಳುವುದು ಅಥವಾ ಹಾಡುವುದು, ಇನ್ನು ಕೆಲವರಿಗೆ ಚಿತ್ರ ಬಿಡಿಸುವುದು, ಹೀಗೆ ಒಬ್ಬಬ್ಬರಿಗೆ ಒಂದೊಂದು ಚಟುವಟಿಕೆ ಸಮಾಧಾನ ನೀಡುತ್ತದೆ. ಯಾವ ಚಟುವಟಿಕೆ ನಿಮ್ಮ ಮನಸ್ಸಿನ ಒತ್ತಡ ಕಡಿಮೆ ಮಾಡುತ್ತದೆ ಎಂಬುದನ್ನು ತಿಳಿಯಿರಿ. ಪರೀಕ್ಷೆಯ ಸಮಯದಲ್ಲಿ ಒತ್ತಡವುಂಟಾದಾಗ ಕನಿಷ್ಠ 10-15 ನಿಮಿಷ ಆ ಚಟುವಟಿಕೆಯಲ್ಲಿ ನಿಮ್ಮನ್ನ ನೀವು ತೊಡಗಿಸಿಕೊಳ್ಳಿ. ಇದರಿಂದ ನಿಮಗೆ ನೆಮ್ಮದಿಯು ಸಿಗುತ್ತದೆ. ಪರೀಕ್ಷಾ ಸಿದ್ದತೆಗೆ ಏಕಾಗ್ರತೆಯು ಹೆಚ್ಚಾಗುತ್ತದೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!