AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips in Kannada : ಎಷ್ಟೇ ತೊಳೆದ್ರು ಮಿಕ್ಸಿ ಜಾರಿನ ಕೆಟ್ಟ ವಾಸನೆ ಹೋಗ್ತಿಲ್ವಾ? ಇಲ್ಲಿದೆ ಸಿಂಪಲ್ ಟಿಪ್ಸ್

ಅಡುಗೆ ಮನೆಯಲ್ಲಿ ಉಪಕಣಗಳದ್ದೇ ಕಾರುಬಾರು. ಹೀಗಾಗಿ ಮಹಿಳೆಯರ ಕೆಲಸವು ಸುಲಭವಾಗಿಸಿದ್ದು, ಚಟ್ ಪಟ್ ಎಂದು ಬೇಗನೇ ಅಡುಗೆ ಮಾಡಿ ಮುಗಿಸಬಹುದಾಗಿದೆ. ಅದರಲ್ಲಿಯು ಹಿಂದಿನ ಕಾಲದಲ್ಲಿ ರುಬ್ಬುವ ಕಲ್ಲನ್ನು ಬಳಕೆ ಮಾಡುತ್ತಿದ್ದರು. ಆದರೆ ಇದೀಗ ಈ ಜಾಗವನ್ನು ಮಿಕ್ಸಿ ಹಾಗೂ ಗ್ರೈಂಡರ್‌ ನಂತಹ ಉಪಕರಣಗಳು ತುಂಬಿಕೊಂಡಿವೆ. ಆದರೆ ಈ ಉಪಕರಣಗಳಲ್ಲಿ ಜಿಡ್ಡು ತುಂಬಿದಂತೆ ಕೆಟ್ಟ ವಾಸನೆಯು ಬರುತ್ತದೆ. ಈ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ಸಲಹೆಗಳನ್ನು ಪಾಲಿಸಬಹುದು.

Kitchen Tips in Kannada : ಎಷ್ಟೇ ತೊಳೆದ್ರು ಮಿಕ್ಸಿ ಜಾರಿನ ಕೆಟ್ಟ ವಾಸನೆ ಹೋಗ್ತಿಲ್ವಾ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on:May 16, 2024 | 2:00 PM

Share

ಅಡುಗೆ ಮನೆ ಹಾಗೂ ಆಹಾರ ತಯಾರಿಸುವ ಪಾತ್ರೆಗಳು ಸ್ವಚ್ಛತೆಯಿಂದ ಕೂಡಿದ್ದರೆ ಅಡುಗೆ ಮನೆಯತ್ತ ಹೋಗಲು ಮನಸ್ಸಾಗುತ್ತದೆ. ರುಚಿ ರುಚಿಯಾದ ಅಡುಗೆ ತಯಾರಿಸಿದ ಬಳಿಕ ಈ ಮಿಕ್ಸಿ, ಗ್ರೈಂಡರ್‌ ಉಪಕರಣಗಳನ್ನು ತೊಳೆಯುವುದು ಸ್ವಲ್ಪ ಕಷ್ಟವೇ. ಎಷ್ಟೇ ತೊಳೆದರೂ ಬ್ಲೇಡ್‌ಗಳ ಮಧ್ಯದಲ್ಲಿ ಸಿಲುಕಿ ಕೊಂಡ ಆಹಾರದ ಅಂಶಗಳು ಹೋಗುವುದೇ ಇಲ್ಲ. ಹೀಗಾಗಿ ಮಿಕ್ಸಿಯಲ್ಲಿ ಕೆಟ್ಟ ವಾಸನೆಯೊಂದು ಬರುತ್ತಿರುತ್ತದೆ. ಹೀಗಾದಾಗ ಮನೆಯಲ್ಲಿರುವ ಕೆಲವೇ ಕೆಲವು ವಸ್ತುಗಳಿಂದ ಈ ಕೆಟ್ಟ ವಾಸನೆಯಿಂದ ಮುಕ್ತಿ ಪಡೆಯಬಹುದು.

* ಬೇಕಿಂಗ್‌ ಸೋಡಾ: ಮಿಕ್ಸಿ ಜಾರಿನಲ್ಲಿ ಬ್ಲೇಡುಗಳ ನಡುವೆ ಸಿಕ್ಕಿ ಹಾಕಿಕೊಂಡ ಆಹಾರ ಅಥವಾ ಹಳೆಯ ಆಹಾರದ ವಾಸನೆ ಇದ್ದಲ್ಲಿ, ನೀರಿನ ಜೊತೆ ಬೇಕಿಂಗ್‌ ಸೋಡಾ ಹಾಕಿ ಮಿಕ್ಸಿಯನ್ನು ಕೆಲವು ಸೆಕೆಂಡುಗಳ ಕಾಲ ಹಾಗೆ ಇಟ್ಟು ಬಿಸಿನೀರಿನಿಂದ ತೊಳೆದರೆ ಕೆಟ್ಟ ವಾಸನೆಯು ಹೋಗುತ್ತದೆ.

* ನಿಂಬೆಹಣ್ಣಿನ ಸಿಪ್ಪೆ: ಮಿಕ್ಸಿ ಜಾರಿಗೆ ನಿಂಬೆಹಣ್ಣಿನ ಸಿಪ್ಪೆಯೊಂದಿಗೆ ನೀರು ಹಾಕಿ ಗ್ರೈಂಡ್ ಮಾಡಿಕೊಂಡು ಸ್ವಲ್ಪ ಸಮಯದ ನಂತರ ಬಿಸಿ ನೀರಿನಲ್ಲಿ ತೊಳೆದರೆ ಮಿಕ್ಸಿಯಲ್ಲಿರುವ ಕೆಟ್ಟ ವಾಸನೆಯು ಇಲ್ಲವಾಗುತ್ತದೆ.

ಇದನ್ನೂ ಓದಿ: ಮನೆಯಲ್ಲೇ ಮಾವಿನ ಲಸ್ಸಿ ಮಾಡುವ ಸುಲಭ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ

* ವಿನೆಗರ್:‌ ಒಂದು ಲೋಟ ನೀರಿಗೆ ಎರಡು ಚಮಚ ವಿನೆಗರನ್ನು ಮಿಕ್ಸಿ ಜಾರಿಗೆ ಹಾಕಿ, ಸ್ವಲ್ಪ ಸಮಯದ ಬಳಿಕ ತೊಳೆಯುವುದರಿಂದ ಮಿಕ್ಸಿ ಜಾರು ಸ್ವಚ್ಛವಾಗುವುದಲ್ಲದೆ, ಕೆಟ್ಟ ವಾಸನೆಯು ಮಾಯವಾಗುತ್ತದೆ

* ಆಲ್ಕೋಹಾಲ್:‌ ಆಲ್ಕೋಹಾಲನ್ನು ಮಿಕ್ಸಿ ಜಾರಿಗೆ ಹಾಕಿ ಸ್ವಲ್ಪ ಹೊತ್ತು ಬಿಟ್ಟು ತೊಳೆದರೆ ಉಳಿದ ಆಹಾರ ಪದಾರ್ಥಗಳು ಹಾಗೂ ವಾಸನೆಯು ಇಲ್ಲದಂತಾಗುತ್ತದೆ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:00 pm, Thu, 16 May 24

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ