AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips in Kannada : ಎಷ್ಟೇ ತೊಳೆದ್ರು ಮಿಕ್ಸಿ ಜಾರಿನ ಕೆಟ್ಟ ವಾಸನೆ ಹೋಗ್ತಿಲ್ವಾ? ಇಲ್ಲಿದೆ ಸಿಂಪಲ್ ಟಿಪ್ಸ್

ಅಡುಗೆ ಮನೆಯಲ್ಲಿ ಉಪಕಣಗಳದ್ದೇ ಕಾರುಬಾರು. ಹೀಗಾಗಿ ಮಹಿಳೆಯರ ಕೆಲಸವು ಸುಲಭವಾಗಿಸಿದ್ದು, ಚಟ್ ಪಟ್ ಎಂದು ಬೇಗನೇ ಅಡುಗೆ ಮಾಡಿ ಮುಗಿಸಬಹುದಾಗಿದೆ. ಅದರಲ್ಲಿಯು ಹಿಂದಿನ ಕಾಲದಲ್ಲಿ ರುಬ್ಬುವ ಕಲ್ಲನ್ನು ಬಳಕೆ ಮಾಡುತ್ತಿದ್ದರು. ಆದರೆ ಇದೀಗ ಈ ಜಾಗವನ್ನು ಮಿಕ್ಸಿ ಹಾಗೂ ಗ್ರೈಂಡರ್‌ ನಂತಹ ಉಪಕರಣಗಳು ತುಂಬಿಕೊಂಡಿವೆ. ಆದರೆ ಈ ಉಪಕರಣಗಳಲ್ಲಿ ಜಿಡ್ಡು ತುಂಬಿದಂತೆ ಕೆಟ್ಟ ವಾಸನೆಯು ಬರುತ್ತದೆ. ಈ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ಸಲಹೆಗಳನ್ನು ಪಾಲಿಸಬಹುದು.

Kitchen Tips in Kannada : ಎಷ್ಟೇ ತೊಳೆದ್ರು ಮಿಕ್ಸಿ ಜಾರಿನ ಕೆಟ್ಟ ವಾಸನೆ ಹೋಗ್ತಿಲ್ವಾ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on:May 16, 2024 | 2:00 PM

Share

ಅಡುಗೆ ಮನೆ ಹಾಗೂ ಆಹಾರ ತಯಾರಿಸುವ ಪಾತ್ರೆಗಳು ಸ್ವಚ್ಛತೆಯಿಂದ ಕೂಡಿದ್ದರೆ ಅಡುಗೆ ಮನೆಯತ್ತ ಹೋಗಲು ಮನಸ್ಸಾಗುತ್ತದೆ. ರುಚಿ ರುಚಿಯಾದ ಅಡುಗೆ ತಯಾರಿಸಿದ ಬಳಿಕ ಈ ಮಿಕ್ಸಿ, ಗ್ರೈಂಡರ್‌ ಉಪಕರಣಗಳನ್ನು ತೊಳೆಯುವುದು ಸ್ವಲ್ಪ ಕಷ್ಟವೇ. ಎಷ್ಟೇ ತೊಳೆದರೂ ಬ್ಲೇಡ್‌ಗಳ ಮಧ್ಯದಲ್ಲಿ ಸಿಲುಕಿ ಕೊಂಡ ಆಹಾರದ ಅಂಶಗಳು ಹೋಗುವುದೇ ಇಲ್ಲ. ಹೀಗಾಗಿ ಮಿಕ್ಸಿಯಲ್ಲಿ ಕೆಟ್ಟ ವಾಸನೆಯೊಂದು ಬರುತ್ತಿರುತ್ತದೆ. ಹೀಗಾದಾಗ ಮನೆಯಲ್ಲಿರುವ ಕೆಲವೇ ಕೆಲವು ವಸ್ತುಗಳಿಂದ ಈ ಕೆಟ್ಟ ವಾಸನೆಯಿಂದ ಮುಕ್ತಿ ಪಡೆಯಬಹುದು.

* ಬೇಕಿಂಗ್‌ ಸೋಡಾ: ಮಿಕ್ಸಿ ಜಾರಿನಲ್ಲಿ ಬ್ಲೇಡುಗಳ ನಡುವೆ ಸಿಕ್ಕಿ ಹಾಕಿಕೊಂಡ ಆಹಾರ ಅಥವಾ ಹಳೆಯ ಆಹಾರದ ವಾಸನೆ ಇದ್ದಲ್ಲಿ, ನೀರಿನ ಜೊತೆ ಬೇಕಿಂಗ್‌ ಸೋಡಾ ಹಾಕಿ ಮಿಕ್ಸಿಯನ್ನು ಕೆಲವು ಸೆಕೆಂಡುಗಳ ಕಾಲ ಹಾಗೆ ಇಟ್ಟು ಬಿಸಿನೀರಿನಿಂದ ತೊಳೆದರೆ ಕೆಟ್ಟ ವಾಸನೆಯು ಹೋಗುತ್ತದೆ.

* ನಿಂಬೆಹಣ್ಣಿನ ಸಿಪ್ಪೆ: ಮಿಕ್ಸಿ ಜಾರಿಗೆ ನಿಂಬೆಹಣ್ಣಿನ ಸಿಪ್ಪೆಯೊಂದಿಗೆ ನೀರು ಹಾಕಿ ಗ್ರೈಂಡ್ ಮಾಡಿಕೊಂಡು ಸ್ವಲ್ಪ ಸಮಯದ ನಂತರ ಬಿಸಿ ನೀರಿನಲ್ಲಿ ತೊಳೆದರೆ ಮಿಕ್ಸಿಯಲ್ಲಿರುವ ಕೆಟ್ಟ ವಾಸನೆಯು ಇಲ್ಲವಾಗುತ್ತದೆ.

ಇದನ್ನೂ ಓದಿ: ಮನೆಯಲ್ಲೇ ಮಾವಿನ ಲಸ್ಸಿ ಮಾಡುವ ಸುಲಭ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ

* ವಿನೆಗರ್:‌ ಒಂದು ಲೋಟ ನೀರಿಗೆ ಎರಡು ಚಮಚ ವಿನೆಗರನ್ನು ಮಿಕ್ಸಿ ಜಾರಿಗೆ ಹಾಕಿ, ಸ್ವಲ್ಪ ಸಮಯದ ಬಳಿಕ ತೊಳೆಯುವುದರಿಂದ ಮಿಕ್ಸಿ ಜಾರು ಸ್ವಚ್ಛವಾಗುವುದಲ್ಲದೆ, ಕೆಟ್ಟ ವಾಸನೆಯು ಮಾಯವಾಗುತ್ತದೆ

* ಆಲ್ಕೋಹಾಲ್:‌ ಆಲ್ಕೋಹಾಲನ್ನು ಮಿಕ್ಸಿ ಜಾರಿಗೆ ಹಾಕಿ ಸ್ವಲ್ಪ ಹೊತ್ತು ಬಿಟ್ಟು ತೊಳೆದರೆ ಉಳಿದ ಆಹಾರ ಪದಾರ್ಥಗಳು ಹಾಗೂ ವಾಸನೆಯು ಇಲ್ಲದಂತಾಗುತ್ತದೆ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:00 pm, Thu, 16 May 24

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ