AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Garbhageete: ಮಗುವಿಗೆ ಶಿಕ್ಷಣ ನೀಡುವುದರ ಜತೆಗೆ ಪೋಷಕರು ಕೂಡ ಶಿಕ್ಷಿತರಾಗಬೇಕು: ಕಮಲಾ ಭಾರದ್ವಾಜ್

ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಬೇಕು, ವಿದ್ಯಾವಂತರನ್ನಾಗಿ ಮಾಡಬೇಕು, ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಬೇಕು ಎಂಬುದು ಎಲ್ಲಾ ಪೋಷಕರ ಕನಸಾಗಿದೆ.

Garbhageete: ಮಗುವಿಗೆ ಶಿಕ್ಷಣ ನೀಡುವುದರ ಜತೆಗೆ ಪೋಷಕರು ಕೂಡ ಶಿಕ್ಷಿತರಾಗಬೇಕು: ಕಮಲಾ ಭಾರದ್ವಾಜ್
Kamala Bharadwaj
TV9 Web
| Updated By: ನಯನಾ ರಾಜೀವ್|

Updated on: Sep 06, 2022 | 2:43 PM

Share

ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಬೇಕು, ವಿದ್ಯಾವಂತರನ್ನಾಗಿ ಮಾಡಬೇಕು, ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಬೇಕು ಎಂಬುದು ಎಲ್ಲಾ ಪೋಷಕರ ಕನಸಾಗಿದೆ. ನಾನು ನನ್ನ ಮಕ್ಕಳನ್ನು ಸರಿಯಾದ ರೀತಿಯಲ್ಲಿ ಬೆಳೆಸುತ್ತಿದ್ದೇನೆಯೇ ಇಲ್ಲವೇ ಎಂಬುದು ಸಾಕಷ್ಟು ಪೋಷಕರನ್ನು ಕಾಡುವ ಪ್ರಶ್ನೆಯಾಗಿದೆ ಈ ಕುರಿತು ಯೋಗ ತಜ್ಞೆ ಕಮಲಾ ಭಾರದ್ವಾಜ್ ನೀಡಿರುವ ಮಾಹಿತಿ ಇಲ್ಲಿದೆ.

ಮಗುವಿಗೆ ಅಗತ್ಯವಾದ ಶಿಕ್ಷಣ, ಆಹಾರ, ಆಟಿಕೆಗಳು ಸೇರಿದಂತೆ ಎಲ್ಲಾ ಪ್ರಮುಖ ಬೇಡಿಕೆಗಳನ್ನು ನೀವು ಈಡೇರಿಸಿದ್ದೀರಿ ಅದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ಇಷ್ಟೇ ಸಾಕೇ ಎಂಬುದು ಪ್ರಶ್ನೆಯಾಗಿದೆ.

ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವುದರ ಜತೆಗೆ ನೀವು ಕೂಡ ಶಿಕ್ಷಿತರಾಗಬೇಕು. ಅದರ ಜತೆಗೆ ನಿಜವಾದ ಕರ್ತವ್ಯವೇನೆಂಬುದನ್ನು ಅರಿಯಬೇಕು. ಮಗುವಿನ ನಿಜವಾದ ಶಿಕ್ಷಣ ಎಂದರೆ ಏನು, ಪೋಷಕರ ಕರ್ತವ್ಯವೇನು, ಮಗುವಿಗೆ ಶಿಕ್ಷಣ ನೀಡುವುದರ ಅರ್ಥವೇನು ಎಂಬುದು ಮನದಟ್ಟಾಗಬೇಕು.

ಮಕ್ಕಳಿಗೆ ಜೀವ ಕೊಟ್ಟಾಗ ಪೋಷಕರಿಗೆ ಮಕ್ಕಳ ನಿಜವಾದ ಶಿಕ್ಷಣವೇನು, ಯಾವುದಕ್ಕೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಬೇಕು ಎಂಬುದರ ಕುರಿತು ಕಡಿಮೆ ಆಲೋಚನೆ ಮಾಡುತ್ತಾರೆ.

ಮತ್ತಷ್ಟು ಓದಿ

ಕೆಲವು ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಆಹಾರ ಹಾಗೂ ಅವರ ಬೇಡಿಕೆಗಳನ್ನು ಪೂರೈಸಿದರೆ ಉತ್ತಮ ಪೋಷಕರಾಗುತ್ತೇವೆ ಎಂದುಕೊಂಡಿರುತ್ತಾರೆ.

ಬಳಿಕ ಮಗು ಶಾಲೆಗೆ ಹೋಗಲು ಆರಂಭಿಸುತ್ತದೆ, ಆಗ ಪೋಷಕರು ತಮ್ಮ ಜವಾಬ್ದಾರಿಯನ್ನು ಶಿಕ್ಷಕರ ಕೈಗೆ ವರ್ಗಾಯಿಸುತ್ತಾರೆ, ಹಾಗೆಯೇ ಮಕ್ಕಳನ್ನು ನೋಡಿಕೊಳ್ಳುವ ಜವಾಬ್ದಾರಿ ಇನ್ನುಮುಂದೆ ಶಿಕ್ಷಕರದ್ದು ಎಂದುಕೊಳ್ಳುತ್ತಾರೆ.

ಆದರೆ ಪೋಷಕರ ಕರ್ತವ್ಯ ಅಷ್ಟೆಕ್ಕೆ ಮುಗಿಯುವುದಿಲ್ಲ, ಕೆಲವು ಪೋಷಕರು ಮಾತ್ರ ಮಕ್ಕಳ ಜೀವನದುದ್ದಕ್ಕೂ ತಾವು ನೀಡಬೇಕಾದ ತಿಳಿವಳಿಕೆಯನ್ನು ನೀಡುತ್ತಲೇ ಇರುತ್ತಾರೆ. ಮಕ್ಕಳಿಗೆ ದೊಡ್ಡವರಿಗೆ ಗೌರವ ಕೊಡುವುದು ಹೇಗೆ, ವಿಧೇಯತೆ, ನೇರವಾಗಿ ಮಾತನಾಡುವುದು, ಸತ್ಯವನ್ನೇ ಹೇಳುವುದು, ಕೋಪವಿಲ್ಲದೆ ಮಾತನಾಡುವುದು, ಶಾಂತ ಸ್ವಭಾವ, ನಿಸ್ವಾರ್ಥ ಭಾವನೆ ಇವೆಲ್ಲವನ್ನೂ ಹೇಳಿಕೊಡಬೇಕು.

ಮತ್ತಷ್ಟು ಓದಿ

ನೀವು ನಿಮ್ಮ ಮಕ್ಕಳ ಎದುರು ಜಗಳವಾಡುವುದು, ಕೆಟ್ಟ ಶಬ್ದಗಳನ್ನು ಬಳಸಿ ಮಾತನಾಡುವುದು, ಕೋಪ ಇವೆಲ್ಲವೂ ಪರಿಣಾಮ ಬೀರುತ್ತದೆ. ಕೇವಲ ನಿಮ್ಮ ಮಕ್ಕಳು ಮಾತ್ರವಲ್ಲ ಆ ವಯಸ್ಸಿನವು ಯಾರೇ ಇರಲಿ ನಿಮ್ಮ ನಡವಳಿಕೆ ಚೆನ್ನಾಗಿರಬೇಕು.

ಮಕ್ಕಳು ಏನೇ ಪ್ರಶ್ನೆಗಳನ್ನು ಕೇಳಲಿ ಅದಕ್ಕೆ ಸಿಲ್ಲಿಯಾಗಿ ಉತ್ತರಿಸುವುದು, ಹಾಸ್ಯಭರಿತವಾಗಿ ಮಾತನಾಡುವುದು ಅದೆಲ್ಲವನ್ನೂ ತಪ್ಪಿಸಿ, ಏಕೆಂದರೆ ಮಕ್ಕಳು ಮುಗ್ಧರಾಗಿರುತ್ತಾರೆ ನಿಮಗೆ ಉತ್ತರ ಗೊತ್ತಿದ್ದರೆ ತಿಳಿಸಿ, ಇಲ್ಲವಾದಲ್ಲಿ ಪ್ರಾಮಾಣಿಕವಾಗಿ ಗೊತ್ತಿಲ್ಲ ಎಂದು ಒಪ್ಪಿಕೊಳ್ಳಿ.

ಮಕ್ಕಳಿಗೆ 12-14ನೇ ವಯಸ್ಸಿನಲ್ಲಿ ಹೇಳಿದ್ದನ್ನು ಕೇಳಿ ತಿಳಿದುಕೊಳ್ಳುವ ಸಾಮರ್ಥ್ಯವಿರುತ್ತದೆ. ಆಗ ಮಕ್ಕಳಿಗೆ ಸರಿ ತಪ್ಪಿನ ಕುರಿತು ಅರ್ಥ ಮಾಡಿಸುವುದು ಸುಲಭ.

ಮಾಹಿತಿ: ಕಮಲಾ ಭಾರಧ್ವಾಜ್ ಪ್ರಸಿದ್ಧ ಯೋಗ ತಜ್ಞರಾಗಿದ್ದು, ಸತ್ಯವೆನ್ನುವ ಯೋಗ ಕೇಂದ್ರವನ್ನು ಮುನ್ನಡೆಸುತ್ತಿದ್ದಾರೆ. ಯೋಗದಲ್ಲಿ ಎಂಎಸ್​ಸಿ ಮಾಡಿದ್ದು, ಹಾಗೆಯೇ ಯೋಗದಲ್ಲಿಯೇ ಪಿಜಿ ಡಿಪ್ಲೊಮಾ ಓದಿದ್ದಾರೆ. ಅವರು ಜೈನ್​ ಕಾಲೇಜಿನಲ್ಲಿ ಎಂಬಿಎ ಪೂರೈಸಿದ್ದಾರೆ.

ಅವರಿಗೆ 2015ರಲ್ಲಿ ಯೋಗದಲ್ಲಿನ ಸಾಧನೆಗಾಗಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಯೋಗ ಕಲಾಸಾಧಕಿ ಪ್ರಶಸ್ತಿಗೂ ಭಾಜನರಾಗಿದ್ದಾರೆ, ಜ್ಯೋತಿಷ ರತ್ನ ಸೇರಿದಂತೆ ಹಲವು ಕೋರ್ಸ್​ಗಳನ್ನು ಮಾಡಿದ್ದಾರೆ. ಗರ್ಭಾವಸ್ಥೆ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊ.ನಂ.9663879672. www.astroyoga.co.in ಭೇಟಿ ನೀಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ