AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel: ಬಯಲು ಸೀಮೆಯ ಬಿಸಿಲಿನಿಂದ ಪಾರಾಗಲು ಹಿಮಾಚಲದ ಗಿರಿಧಾಮಗಳಿಗೆ ಹೊರಟಿದೆ ಪ್ರವಾಸಿಗರ ದಂಡು!

ಬಯಲು ಪ್ರದೇಶದಲ್ಲಿ ಹೆಚ್ಚುತ್ತಿರುವ ತಾಪಮಾನದ ನಡುವೆ ಪ್ರವಾಸಿಗರು ಹಿಮಾಚಲ ಪ್ರದೇಶದ ಗಿರಿ ಧಾಮಗಳಿಗೆ ಮುಗಿ ಬೀಳುತ್ತಿದ್ದಾರೆ. ಈ ಬಗ್ಗೆ ಪ್ರವಾಸಿಗರ ಅಭಿಪ್ರಾಯವೇನು? ಇಲ್ಲಿದೆ ಮಾಹಿತಿ.

Travel: ಬಯಲು ಸೀಮೆಯ ಬಿಸಿಲಿನಿಂದ ಪಾರಾಗಲು ಹಿಮಾಚಲದ ಗಿರಿಧಾಮಗಳಿಗೆ ಹೊರಟಿದೆ ಪ್ರವಾಸಿಗರ ದಂಡು!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jun 10, 2023 | 2:56 PM

Share

ಬಯಲು ಪ್ರದೇಶಗಳಲ್ಲಿ ಬಿಸಿಲಿನ ದಗೆ ಏರುತ್ತಿದ್ದಂತೆ, ಪ್ರವಾಸಿಗರು ಹಿಮಾಚಲ ಪ್ರದೇಶದ ಗಿರಿಧಾಮಗಳಿಗೆ ಭೇಟಿ ನೀಡಲು ಆರಂಭಿಸಿದ್ದಾರೆ. ಏಕೆಂದರೆ ಅಲ್ಲಿ ಹವಾಮಾನವು ಆಹ್ಲಾದಕರವಾಗಿರುತ್ತದೆ. ಪ್ರಸ್ತುತ ದಿನಗಳಲ್ಲಿ ಧರ್ಮ ಶಾಲಾದಲ್ಲಿ 8.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪ್ರವಾಸದ ಜೊತೆ ಜೊತೆಗೆ ಬೌದ್ಧ ಧರ್ಮದ ಬಗ್ಗೆ ಆಸಕ್ತಿ ಇರುವವರು ಅದನ್ನು ಕಲಿಯುವ ಸಲುವಾಗಿ ಸಾಕಷ್ಟು ಮಂದಿ ಧರ್ಮಶಾಲಾಕ್ಕೆ ಬರುತ್ತಾರೆ. ನಿಮಗೆ ತಿಳಿದಂತೆ ಈ ನಗರವು ದಲೈ ಲಾಮಾ ಮತ್ತು ಟಿಬೆಟಿಯನ್ ಸರ್ಕಾರದ ನೆಲೆಯಾಗಿದೆ.

ದೆಹಲಿಯಿಂದ ಬಂದ ರಾಘವ್ ಎಂಬ ಪ್ರವಾಸಿಯೊಬ್ಬರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು “ಇತ್ತೀಚೆಗೆ ಹವಾಮಾನವು ಸಾಕಷ್ಟು ಹೆಚ್ಚಾಗಿದೆ. ನಾವು ಬಿಸಿಯಾಗಿರುವ ಬಯಲು ಪ್ರದೇಶಗಳಿಂದ ಇಲ್ಲಿಗೆ ಬಂದಿದ್ದೇವೆ. ಆದ್ದರಿಂದ ನಾವು ಹಿಮಾಚಲ ಪ್ರದೇಶದ ಬೆಟ್ಟಗಳನ್ನೂ ಹತ್ತುವಂತೆ ಯೋಜಿಸಿದ್ದೇವೆ. ಹಗಲಿನಲ್ಲಿ ತಾಪಮಾನವು ಸುಮಾರು 18 ಡಿಗ್ರಿಗಳಷ್ಟಿದ್ದರೆ, ರಾಜಸ್ಥಾನ ಅಥವಾ ಇತರ ಕೆಲವು ಪ್ರದೇಶಗಳಲ್ಲಿ ಇದು 40 ಡಿಗ್ರಿಗಳಿಗಿಂತ ಹೆಚ್ಚಾಗಿರುವುದರಿಂದ ನಾವು ಇಲ್ಲಿಯೇ ಆನಂದಿಸಲು ಬಂದಿದ್ದೇವೆ” ಎಂದಿದ್ದಾರೆ. ಜೊತೆಗೆ “ಬೌದ್ಧ ಧರ್ಮದ ಬಗ್ಗೆ ತಿಳಿದುಕೊಳ್ಳಲು ಅಲ್ಲಿನ ಮಠಗಳಿಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ” ಎಂದು ರಾಘವ್ ಹೇಳಿದ್ದು. “ಪ್ರವಾಸದ ಜೊತೆ ಜೊತೆಗೆ ಬೌದ್ಧರ ಬಗೆಗಿನ ಹಲವು ಆಸಕ್ತಿ ದಾಯಕ ವಿಷಯಗಳನ್ನು ತಿಳಿದುಕೊಳ್ಳುವುದು ನಮ್ಮ ಹಂಬಲವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: Tips for Flight Travel: ವಿಮಾನ ಪ್ರಯಾಣದಲ್ಲಿ ಆರಾಮದಾಯಕ, ಆಕರ್ಷಕವಾಗಿ ಕಾಣಲು ಇಲ್ಲಿದೆ ಐಡಿಯಾಗಳು!

ಮತ್ತೊಬ್ಬ ಪ್ರವಾಸಿ ಸೂರಜ್ ಎನ್ನುವವರು, “ನಾವು ಇಲ್ಲಿನ ಹವಾಮಾನವನ್ನು ಆನಂದಿಸಲು ಬಂದಿದ್ದೇವೆ. ನಮ್ಮಂತೆ ಈ ಸೌಂದರ್ಯವನ್ನು ಅನುಭವಿಸುವ ಉದ್ದೇಶವನ್ನಿಟ್ಟುಕೊಂಡು ಹೆಚ್ಚು ಹೆಚ್ಚು ಜನರು ಇಲ್ಲಿಗೆ ಬರುತ್ತಿದ್ದಾರೆ” ಎಂದು ಹೇಳಿದ್ದಾರೆ. “ನಾನು ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರನ್ನು ಭೇಟಿಯಾಗಲು ಭಾರತಕ್ಕೆ ಬಂದಿದ್ದೇನೆ” ಎಂದು ವಿದೇಶಿ ಪ್ರವಾಸಿಗರೊಬ್ಬರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಅಮೆರಿಕದ ಡೇನಿಯಲ್ ಬರ್ಗರ್ ಎನ್ನುವವರು, “ನಾನು ದಲೈ ಲಾಮಾ ಅವರನ್ನು ಭೇಟಿ ಮಾಡಲು ಮತ್ತು ಟಿಬೆಟಿಯನ್ ಬೌದ್ಧ ಧರ್ಮದ ಬಗ್ಗೆ ತಿಳಿದುಕೊಳ್ಳಲು ಇಲ್ಲಿಗೆ ಬಂದಿದ್ದೇನೆ. ಹವಾಮಾನ ಅನುಭವಿಸಲು ಸಾಕಷ್ಟು ಜನರು ಇಲ್ಲಿಗೆ ಬಂದಿದ್ದಾರೆ. ಅವರಿಗೆ ಇದೊಂದು ಒಳ್ಳೆಯ ಸಮಯ. ಆದರೆ ಕೆಲವರು ಟಿಬೆಟಿಯನ್ ಬೌದ್ಧಧರ್ಮದ ಬಗ್ಗೆ ತಿಳಿದುಕೊಳ್ಳಲು ಇಲ್ಲಿಗೆ ಬಂದಿದ್ದಾರೆ. ಇದು ಮತ್ತು ಒಳ್ಳೆಯ ವಿಷಯ” ಎಂದರು

ಹವಾಮಾನ ಕೇಂದ್ರದ ಪ್ರಕಾರ ಶಿಮ್ಲಾ ಮತ್ತು ಭುಂಟರ್ ನಲ್ಲಿ ಕಳೆದ 30 ವರ್ಷಗಳಲ್ಲಿ ಈ ವರ್ಷ ಅತೀ ಹೆಚ್ಚು ಮಳೆಯಾಗಿದೆ. ಮೇ ತಿಂಗಳಲ್ಲಿ, ಸೋಲನ್ ಮತ್ತು ಕಾಂಗ್ರಾದಲ್ಲಿ ಕ್ರಮವಾಗಿ 157.3 ಮಿ.ಮೀ ಮತ್ತು 189.8 ಮಿ.ಮೀ ಮಾಸಿಕ ಮಳೆಯಾಗಿದೆ, ಮತ್ತು ಧರ್ಮಶಾಲಾದಲ್ಲಿ ಕನಿಷ್ಠ ತಾಪಮಾನ 8.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದಲ್ಲದೆ ಶಿಮ್ಲಾ ಮತ್ತು ಭುಂಟರ್ ಅತೀ ಹೆಚ್ಚು ಮಳೆಯನ್ನು ದಾಖಲಿಸಿದೆ ಎಂದು ಹವಾಮಾನ ಕೇಂದ್ರ ಶಿಮ್ಲಾ ಟ್ವೀಟ್ ಮಾಡಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ