AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Winter Tips: ಚಳಿಗಾಲದಲ್ಲಿ ತುಳಸಿ ಗಿಡ ಒಣಗಬಾರದೆಂದರೆ ಮನೆಯಲ್ಲೇ ತಯಾರಿಸಿದ ಈ ಗೊಬ್ಬರ ಹಾಕಿ

ಚಳಿಗಾಲದಲ್ಲಿ ತುಳಸಿ ಗಿಡಗಳು ಬಹು ಬೇಗನೆ ಒಣಗಿ ಹೋಗುತ್ತದೆ. ಆದ್ದರಿಂದ ಈ ಸಮಯದಲ್ಲಿ ಈ ಗಿಡದ ಆರೈಕೆಗೆ ತುಸು ಹೆಚ್ಚೇ ಗಮನ ನೀಡಬೇಕು. ನಿಮ್ಮ ಮನೆಯ ಗಿಡ ಒಣಗಬಾರದು, ಸೊಂಪಾಗಿ ಬೆಳೆಯಬೇಕು ಎಂದಾದರೆ ಮನೆಯಲ್ಲೇ ತಯಾರಿಸಿದ ಈ ಗೊಬ್ಬರವನ್ನು ಗಿಡದ ಬುಡಕ್ಕೆ ಹಾಕಿ.

Winter Tips: ಚಳಿಗಾಲದಲ್ಲಿ ತುಳಸಿ ಗಿಡ ಒಣಗಬಾರದೆಂದರೆ ಮನೆಯಲ್ಲೇ ತಯಾರಿಸಿದ ಈ ಗೊಬ್ಬರ ಹಾಕಿ
ತುಳಸಿ ಗಿಡ Image Credit source: Getty Images
ಮಾಲಾಶ್ರೀ ಅಂಚನ್​
|

Updated on:Nov 25, 2025 | 3:20 PM

Share

ಚಳಿಗಾಲದಲ್ಲಿ ತುಳಸಿ (Tulsi) ಗಿಡಕ್ಕೆ ವಿಶೇಷ ಆರೈಕೆಯ ಅಗತ್ಯವಿರುತ್ತದೆ. ಏಕೆಂದರೆ ಈ ಸಮಯದಲ್ಲಿನ ತಂಪಾದ ಗಾಳಿ, ಆರ್ದ್ರ ವಾತಾವರಣದ ಕಾರಣದಿಂದಾಗಿ ತುಳಸಿ ಗಿಡಗಳು ಒಣಗುವುದು,  ಎಲೆಗಳು ಉದುರಿ ಹೋಗುವುದು, ಅವುಗಳ ಬೇರುಗಳು ಕೊಳೆಯುವುದು ಇತ್ಯಾದಿ ಸಮಸ್ಯೆಗಳು ಹೆಚ್ಚಿರುತ್ತದೆ. ಹಾಗಾಗಿ ಈ ಸಮಯದಲ್ಲಿ ತುಳಸಿ ಗಿಡದ ಆರೈಕೆಗೆ ತುಸು ಹೆಚ್ಚು ಗಮನ ನೀಡಬೇಕು. ನಿಮ್ಮ ಮನೆಯಲ್ಲೂ ತುಳಸಿ ಗಿಡ ಒಣಗುತ್ತಿದೆಯೇ, ಈ ಸಮಸ್ಯೆಯನ್ನು ಹೋಗಲಾಡಿಸಲು, ಗಿಡ ಸೊಂಪಾಗಿ ಬೆಳೆಯಲು ಮನೆಯಲ್ಲಿಯೇ ತಯಾರಿಸಿದಂತಹ ಈ ಗೊಬ್ಬರವನ್ನೊಮ್ಮೆ ಪ್ರಯತ್ನಿಸಿ.

ತುಳಸಿ ಗಿಡದ ಆರೈಕೆಗೆ ನೈಸರ್ಗಿಕ ಗೊಬ್ಬರ:

ಒಂದು ಕಪ್‌ ನೀರಿಗೆ ಒಂದು ಟೀ ಚಮಚ ಕಾಫಿ ಪುಡಿ ಮತ್ತು ಅರ್ಧ ಟೀ ಸ್ಪೂನ್‌ ಎಪ್ಸಮ್‌ ಉಪ್ಪು ಬೆರೆಸಿ, ದ್ರವ ರೂಪದ ಗೊಬ್ಬರವನ್ನು ತಯಾರಿಸಿಟ್ಟುಕೊಳ್ಳಿ. ಬಳಿಕ ಚಾಕು ಅಥವಾ ಚಮಚದ ಸಹಾಯದಿಂದ ತುಳಸಿ ಗಿಡದ ಬುಡದ ಸುತ್ತಲೂ ಸ್ವಲ್ಪ ಮಣ್ಣನ್ನು ಅಗೆದು, ಈ ದ್ರವ ರೂಪದ ಗೊಬ್ಬರವನ್ನು ಅದಕ್ಕೆ ಹಾಕಿ.ಇದು ಮಣ್ಣಿಗೆ ಸಾಕಷ್ಟು ತೇವಾಂಶವನ್ನು ಒದಗಿಸುತ್ತದೆ.

ಇದನ್ನೂ ಓದಿ: ಸಕ್ಕರೆಯೊಂದಿಗೆ ಒಂದು ವಸ್ತು ಇದ್ರೆ ಸಾಕು, ಬಲು ಸುಲಭವಾಗಿ ಜಿರಳೆಗಳನ್ನು ಓಡಿಸಬಹುದು

ಇದಲ್ಲದೆ, ಈ ಗೊಬ್ಬರವು ಸಸ್ಯಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಎಕ್ಸಮ್‌ ಉಪ್ಪಿನಲ್ಲಿ ಮೆಗ್ನೇಸಿಯಮ್‌ ಇದ್ದು, ಇದು ಎಲೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ. ನೀವು ಈ ಗೊಬ್ಬರವನ್ನು ಪ್ರತಿ ಎರಡು ತಿಂಗಳಿಗೊಮ್ಮೆ ಹಾಕಬಹುದು. ಬಯಸಿದಲ್ಲಿ, ನೀವು ದ್ರವರೂಪದ ವರ್ಮಿಕಾಂಪೋಸ್ಟ್ ಗೊಬ್ಬರವನ್ನು ಕೂಡ ಗಿಡಕ್ಕೆ ಹಾಕಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Tue, 25 November 25

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ