AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಿನ ಪಾರಂಪರಿಕ ಗರಿ ಗರಿಯಾದ ತೊಡೆದೇವು ಸಿಹಿ ಖಾದ್ಯ ಮಾಡುವ ವಿಧಾನ ಇಲ್ಲಿದೆ

ಮಲೆನಾಡಿನ ಅತ್ಯಂತ ರುಚಿಕರ ಹಾಗೆಯೇ ಗರಿ ಗರಿಯಾದ ಖಾದ್ಯ ತೊಡೆದೇವು. ಈ ವಿಶೇಷ ಖಾದ್ಯವು ಮಲೆನಾಡಿನ ಹವ್ಯಕರ ಮನೆಯಲ್ಲಿ ಹೆಚ್ಚಾಗಿ ಕಂಡು ಬರುವ ತಿಂಡಿಯಾಗಿದೆ.

ಮಲೆನಾಡಿನ ಪಾರಂಪರಿಕ ಗರಿ ಗರಿಯಾದ ತೊಡೆದೇವು ಸಿಹಿ ಖಾದ್ಯ ಮಾಡುವ ವಿಧಾನ ಇಲ್ಲಿದೆ
ತೊಡೆದೇವು ಮಾಡುವ ವಿಧಾನ Image Credit source: Youtube
ಅಕ್ಷತಾ ವರ್ಕಾಡಿ
|

Updated on:Feb 09, 2023 | 3:48 PM

Share

ಮಲೆನಾಡಿನ ಅತ್ಯಂತ ರುಚಿಕರ ಹಾಗೆಯೇ ಗರಿ ಗರಿಯಾದ ಖಾದ್ಯ ತೊಡೆದೇವು. ಈ ವಿಶೇಷ ಖಾದ್ಯವು ಮಲೆನಾಡಿನ ಹವ್ಯಕರ ಮನೆಯಲ್ಲಿ ಹೆಚ್ಚಾಗಿ ಕಂಡು ಬರುವ ತಿಂಡಿಯಾಗಿದೆ. ಈಗಲೂ ಕೂಡ ಮಲೆನಾಡಿನ ಕಡೆಗಳ ಮನೆಗಳಲ್ಲಿ ಸಾಂಪ್ರದಾಯಿಕವಾಗಿ ಕಟ್ಟಿಗೆಯ ಒಲೆಯ ಮೇಲೆ ಮಡಿಕೆಯನ್ನು ತಲೆಕೆಳಗಾಗಿ ಇಟ್ಟು ಅಂದರೆ ಅದಕ್ಕೆ ತೊಡದೇವು ಎರೆಯುವ ಮಡಿಕೆ ಎಂದು ಕರೆಯುತ್ತಾರೆ.  ಈ ರೀತಿಯಾಗಿ ಖಾದ್ಯವನ್ನು ತಯಾರಿಸಲಾಗುತ್ತದೆ. ಸಾಗರ, ಯಲ್ಲಾಪುರ, ಶಿರಸಿ, ಸಿದ್ಧಾಪುರ, ಗೋಕರ್ಣಾ, ಕುಮುಟಾ ಸುತ್ತಮುತ್ತಲಲ್ಲಿ ಈ ತಿಂಡಿ ಭಾರೀ ಜನಪ್ರಿಯತೆಯನ್ನು ಹೊಂದಿದೆ.  ಇತ್ತೀಚೆಗಷ್ಟೇ  ಗರಿ ಗರಿಯಾದ ತೊಡೆದೇವು ಮಾಡುವ ವಿಧಾನವನ್ನು ಗಗನ್​​ ಶರ್ಮರವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆ ವೀಡಿಯೋ ಇಲ್ಲಿದೆ.

ತೊಡೆದೇವು ಮಾಡಲು ಬೇಕಾಗುವ ಪದಾರ್ಥಗಳು:

  • ದಪ್ಪ ಅಕ್ಕಿ 1ಕೆಜಿ
  • ಜೋನಿ ಬೆಲ್ಲ 1ಕೆಜಿ
  • ಅರಶಿನ ಪುಡಿ
  • ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಹುಣಸೆ ಹಣ್ಣಿನ ಹಿತವಾದ ಪಾನಕ ಮಾಡುವ ವಿಧಾನ ಇಲ್ಲಿದೆ

ತೊಡೆದೇವು ಮಾಡುವ ವಿಧಾನ:

  • ಮೊದಲಿಗೆ ಅಕ್ಕಿಯನ್ನು ಮುಂಚಿನ ದಿನ ರಾತ್ರಿಯೇ ನೆನೆಸಿಟ್ಟುಕೊಳ್ಳಿ. ಮರುದಿನ ಅಕ್ಕಿಯನ್ನು ಚೆನ್ನಾಗಿ ತೊಳೆದಿಡಿ. ನಂತರ ನೆನೆಸಿಟ್ಟ ಅಕ್ಕಿ , ಜೋನಿ ಬೆಲ್ಲ, ಅರಶಿನ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಈಗ ಹಿಟ್ಟು ಸಿದ್ಧವಾಗಿದೆ.
  • ನಂತರ ಒಲೆ ಮೇಲೆ ಒಂದು ಮಡಕೆಯನ್ನು ತಲೆಕೆಳಗಾಗಿ ಇಟ್ಟುಕೊಂಡು, ಇದನ್ನು ತೊಡದೇವು ಎರೆಯುವ ಮಡಿಕೆ ಎಂದು ಕರೆಯುತ್ತಾರೆ. ನಂತರ ಒಂದು ಸಣ್ಣ ಕೋಲಿಗೆ ಕಾಟನ್​​​ ಬಟ್ಟೆಯನ್ನು ಸುತ್ತಿ ರುಬ್ಬಿದ ಹಿಟ್ಟಿನಲ್ಲಿ ಅದ್ದಿ, ಒಲೆಯ ಮೇಲಿಟ್ಟ ಕಾದ ಮಡಿಕೆಯ ಮೇಲೆ ತುಂಬಾ ತೆಳ್ಳಗೆ ಹಚ್ಚಿ. ಇದು ಬೇಯಲು ಸಮಯ ಬೇಡ. ಒಂದೇ ಕ್ಷಣದಲ್ಲಿ ಇದು ಬೆಂದು ಹೋಗುತ್ತದೆ. ನಂತರ ಇದನ್ನು ನಾಜೂಕಾಗಿ ನಿಮಗೆ ಬೇಕಾದ ಆಕಾರದಲ್ಲಿ ಮಡಚಿಡಿ.
  • ನಂತರ ಒಲೆಯಿಂದ ಕೆಳಗಿಳಿಸಿ ಕೆಲವು ನಿಮಿಷಗಳ ವರೆಗೆ ತಣ್ಣಗಾಗಲು ಬಿಡಿ. ತಣ್ಣಗಾದ ನಂತರ ಗಾಳಿಯಾಡದ ಕವರ್​​ ಒಳಗಡೆ ಶೇಖರಿಸಿಡಿ. ಇದು 15 ರಿಂದ 20 ದಿನಗಳ ವರೆಗೆ ಹಾಳಾಗದೇ ಹಾಗೆಯೇ ಉಳಿದು ಬಿಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 3:42 pm, Thu, 9 February 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ