AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಿನ ಪಾರಂಪರಿಕ ಗರಿ ಗರಿಯಾದ ತೊಡೆದೇವು ಸಿಹಿ ಖಾದ್ಯ ಮಾಡುವ ವಿಧಾನ ಇಲ್ಲಿದೆ

ಮಲೆನಾಡಿನ ಅತ್ಯಂತ ರುಚಿಕರ ಹಾಗೆಯೇ ಗರಿ ಗರಿಯಾದ ಖಾದ್ಯ ತೊಡೆದೇವು. ಈ ವಿಶೇಷ ಖಾದ್ಯವು ಮಲೆನಾಡಿನ ಹವ್ಯಕರ ಮನೆಯಲ್ಲಿ ಹೆಚ್ಚಾಗಿ ಕಂಡು ಬರುವ ತಿಂಡಿಯಾಗಿದೆ.

ಮಲೆನಾಡಿನ ಪಾರಂಪರಿಕ ಗರಿ ಗರಿಯಾದ ತೊಡೆದೇವು ಸಿಹಿ ಖಾದ್ಯ ಮಾಡುವ ವಿಧಾನ ಇಲ್ಲಿದೆ
ತೊಡೆದೇವು ಮಾಡುವ ವಿಧಾನ Image Credit source: Youtube
Follow us
ಅಕ್ಷತಾ ವರ್ಕಾಡಿ
|

Updated on:Feb 09, 2023 | 3:48 PM

ಮಲೆನಾಡಿನ ಅತ್ಯಂತ ರುಚಿಕರ ಹಾಗೆಯೇ ಗರಿ ಗರಿಯಾದ ಖಾದ್ಯ ತೊಡೆದೇವು. ಈ ವಿಶೇಷ ಖಾದ್ಯವು ಮಲೆನಾಡಿನ ಹವ್ಯಕರ ಮನೆಯಲ್ಲಿ ಹೆಚ್ಚಾಗಿ ಕಂಡು ಬರುವ ತಿಂಡಿಯಾಗಿದೆ. ಈಗಲೂ ಕೂಡ ಮಲೆನಾಡಿನ ಕಡೆಗಳ ಮನೆಗಳಲ್ಲಿ ಸಾಂಪ್ರದಾಯಿಕವಾಗಿ ಕಟ್ಟಿಗೆಯ ಒಲೆಯ ಮೇಲೆ ಮಡಿಕೆಯನ್ನು ತಲೆಕೆಳಗಾಗಿ ಇಟ್ಟು ಅಂದರೆ ಅದಕ್ಕೆ ತೊಡದೇವು ಎರೆಯುವ ಮಡಿಕೆ ಎಂದು ಕರೆಯುತ್ತಾರೆ.  ಈ ರೀತಿಯಾಗಿ ಖಾದ್ಯವನ್ನು ತಯಾರಿಸಲಾಗುತ್ತದೆ. ಸಾಗರ, ಯಲ್ಲಾಪುರ, ಶಿರಸಿ, ಸಿದ್ಧಾಪುರ, ಗೋಕರ್ಣಾ, ಕುಮುಟಾ ಸುತ್ತಮುತ್ತಲಲ್ಲಿ ಈ ತಿಂಡಿ ಭಾರೀ ಜನಪ್ರಿಯತೆಯನ್ನು ಹೊಂದಿದೆ.  ಇತ್ತೀಚೆಗಷ್ಟೇ  ಗರಿ ಗರಿಯಾದ ತೊಡೆದೇವು ಮಾಡುವ ವಿಧಾನವನ್ನು ಗಗನ್​​ ಶರ್ಮರವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆ ವೀಡಿಯೋ ಇಲ್ಲಿದೆ.

ತೊಡೆದೇವು ಮಾಡಲು ಬೇಕಾಗುವ ಪದಾರ್ಥಗಳು:

  • ದಪ್ಪ ಅಕ್ಕಿ 1ಕೆಜಿ
  • ಜೋನಿ ಬೆಲ್ಲ 1ಕೆಜಿ
  • ಅರಶಿನ ಪುಡಿ
  • ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಹುಣಸೆ ಹಣ್ಣಿನ ಹಿತವಾದ ಪಾನಕ ಮಾಡುವ ವಿಧಾನ ಇಲ್ಲಿದೆ

ತೊಡೆದೇವು ಮಾಡುವ ವಿಧಾನ:

  • ಮೊದಲಿಗೆ ಅಕ್ಕಿಯನ್ನು ಮುಂಚಿನ ದಿನ ರಾತ್ರಿಯೇ ನೆನೆಸಿಟ್ಟುಕೊಳ್ಳಿ. ಮರುದಿನ ಅಕ್ಕಿಯನ್ನು ಚೆನ್ನಾಗಿ ತೊಳೆದಿಡಿ. ನಂತರ ನೆನೆಸಿಟ್ಟ ಅಕ್ಕಿ , ಜೋನಿ ಬೆಲ್ಲ, ಅರಶಿನ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಈಗ ಹಿಟ್ಟು ಸಿದ್ಧವಾಗಿದೆ.
  • ನಂತರ ಒಲೆ ಮೇಲೆ ಒಂದು ಮಡಕೆಯನ್ನು ತಲೆಕೆಳಗಾಗಿ ಇಟ್ಟುಕೊಂಡು, ಇದನ್ನು ತೊಡದೇವು ಎರೆಯುವ ಮಡಿಕೆ ಎಂದು ಕರೆಯುತ್ತಾರೆ. ನಂತರ ಒಂದು ಸಣ್ಣ ಕೋಲಿಗೆ ಕಾಟನ್​​​ ಬಟ್ಟೆಯನ್ನು ಸುತ್ತಿ ರುಬ್ಬಿದ ಹಿಟ್ಟಿನಲ್ಲಿ ಅದ್ದಿ, ಒಲೆಯ ಮೇಲಿಟ್ಟ ಕಾದ ಮಡಿಕೆಯ ಮೇಲೆ ತುಂಬಾ ತೆಳ್ಳಗೆ ಹಚ್ಚಿ. ಇದು ಬೇಯಲು ಸಮಯ ಬೇಡ. ಒಂದೇ ಕ್ಷಣದಲ್ಲಿ ಇದು ಬೆಂದು ಹೋಗುತ್ತದೆ. ನಂತರ ಇದನ್ನು ನಾಜೂಕಾಗಿ ನಿಮಗೆ ಬೇಕಾದ ಆಕಾರದಲ್ಲಿ ಮಡಚಿಡಿ.
  • ನಂತರ ಒಲೆಯಿಂದ ಕೆಳಗಿಳಿಸಿ ಕೆಲವು ನಿಮಿಷಗಳ ವರೆಗೆ ತಣ್ಣಗಾಗಲು ಬಿಡಿ. ತಣ್ಣಗಾದ ನಂತರ ಗಾಳಿಯಾಡದ ಕವರ್​​ ಒಳಗಡೆ ಶೇಖರಿಸಿಡಿ. ಇದು 15 ರಿಂದ 20 ದಿನಗಳ ವರೆಗೆ ಹಾಳಾಗದೇ ಹಾಗೆಯೇ ಉಳಿದು ಬಿಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 3:42 pm, Thu, 9 February 23

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?