AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಿನ ಪಾರಂಪರಿಕ ಗರಿ ಗರಿಯಾದ ತೊಡೆದೇವು ಸಿಹಿ ಖಾದ್ಯ ಮಾಡುವ ವಿಧಾನ ಇಲ್ಲಿದೆ

ಮಲೆನಾಡಿನ ಅತ್ಯಂತ ರುಚಿಕರ ಹಾಗೆಯೇ ಗರಿ ಗರಿಯಾದ ಖಾದ್ಯ ತೊಡೆದೇವು. ಈ ವಿಶೇಷ ಖಾದ್ಯವು ಮಲೆನಾಡಿನ ಹವ್ಯಕರ ಮನೆಯಲ್ಲಿ ಹೆಚ್ಚಾಗಿ ಕಂಡು ಬರುವ ತಿಂಡಿಯಾಗಿದೆ.

ಮಲೆನಾಡಿನ ಪಾರಂಪರಿಕ ಗರಿ ಗರಿಯಾದ ತೊಡೆದೇವು ಸಿಹಿ ಖಾದ್ಯ ಮಾಡುವ ವಿಧಾನ ಇಲ್ಲಿದೆ
ತೊಡೆದೇವು ಮಾಡುವ ವಿಧಾನ Image Credit source: Youtube
ಅಕ್ಷತಾ ವರ್ಕಾಡಿ
|

Updated on:Feb 09, 2023 | 3:48 PM

Share

ಮಲೆನಾಡಿನ ಅತ್ಯಂತ ರುಚಿಕರ ಹಾಗೆಯೇ ಗರಿ ಗರಿಯಾದ ಖಾದ್ಯ ತೊಡೆದೇವು. ಈ ವಿಶೇಷ ಖಾದ್ಯವು ಮಲೆನಾಡಿನ ಹವ್ಯಕರ ಮನೆಯಲ್ಲಿ ಹೆಚ್ಚಾಗಿ ಕಂಡು ಬರುವ ತಿಂಡಿಯಾಗಿದೆ. ಈಗಲೂ ಕೂಡ ಮಲೆನಾಡಿನ ಕಡೆಗಳ ಮನೆಗಳಲ್ಲಿ ಸಾಂಪ್ರದಾಯಿಕವಾಗಿ ಕಟ್ಟಿಗೆಯ ಒಲೆಯ ಮೇಲೆ ಮಡಿಕೆಯನ್ನು ತಲೆಕೆಳಗಾಗಿ ಇಟ್ಟು ಅಂದರೆ ಅದಕ್ಕೆ ತೊಡದೇವು ಎರೆಯುವ ಮಡಿಕೆ ಎಂದು ಕರೆಯುತ್ತಾರೆ.  ಈ ರೀತಿಯಾಗಿ ಖಾದ್ಯವನ್ನು ತಯಾರಿಸಲಾಗುತ್ತದೆ. ಸಾಗರ, ಯಲ್ಲಾಪುರ, ಶಿರಸಿ, ಸಿದ್ಧಾಪುರ, ಗೋಕರ್ಣಾ, ಕುಮುಟಾ ಸುತ್ತಮುತ್ತಲಲ್ಲಿ ಈ ತಿಂಡಿ ಭಾರೀ ಜನಪ್ರಿಯತೆಯನ್ನು ಹೊಂದಿದೆ.  ಇತ್ತೀಚೆಗಷ್ಟೇ  ಗರಿ ಗರಿಯಾದ ತೊಡೆದೇವು ಮಾಡುವ ವಿಧಾನವನ್ನು ಗಗನ್​​ ಶರ್ಮರವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆ ವೀಡಿಯೋ ಇಲ್ಲಿದೆ.

ತೊಡೆದೇವು ಮಾಡಲು ಬೇಕಾಗುವ ಪದಾರ್ಥಗಳು:

  • ದಪ್ಪ ಅಕ್ಕಿ 1ಕೆಜಿ
  • ಜೋನಿ ಬೆಲ್ಲ 1ಕೆಜಿ
  • ಅರಶಿನ ಪುಡಿ
  • ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಹುಣಸೆ ಹಣ್ಣಿನ ಹಿತವಾದ ಪಾನಕ ಮಾಡುವ ವಿಧಾನ ಇಲ್ಲಿದೆ

ತೊಡೆದೇವು ಮಾಡುವ ವಿಧಾನ:

  • ಮೊದಲಿಗೆ ಅಕ್ಕಿಯನ್ನು ಮುಂಚಿನ ದಿನ ರಾತ್ರಿಯೇ ನೆನೆಸಿಟ್ಟುಕೊಳ್ಳಿ. ಮರುದಿನ ಅಕ್ಕಿಯನ್ನು ಚೆನ್ನಾಗಿ ತೊಳೆದಿಡಿ. ನಂತರ ನೆನೆಸಿಟ್ಟ ಅಕ್ಕಿ , ಜೋನಿ ಬೆಲ್ಲ, ಅರಶಿನ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಈಗ ಹಿಟ್ಟು ಸಿದ್ಧವಾಗಿದೆ.
  • ನಂತರ ಒಲೆ ಮೇಲೆ ಒಂದು ಮಡಕೆಯನ್ನು ತಲೆಕೆಳಗಾಗಿ ಇಟ್ಟುಕೊಂಡು, ಇದನ್ನು ತೊಡದೇವು ಎರೆಯುವ ಮಡಿಕೆ ಎಂದು ಕರೆಯುತ್ತಾರೆ. ನಂತರ ಒಂದು ಸಣ್ಣ ಕೋಲಿಗೆ ಕಾಟನ್​​​ ಬಟ್ಟೆಯನ್ನು ಸುತ್ತಿ ರುಬ್ಬಿದ ಹಿಟ್ಟಿನಲ್ಲಿ ಅದ್ದಿ, ಒಲೆಯ ಮೇಲಿಟ್ಟ ಕಾದ ಮಡಿಕೆಯ ಮೇಲೆ ತುಂಬಾ ತೆಳ್ಳಗೆ ಹಚ್ಚಿ. ಇದು ಬೇಯಲು ಸಮಯ ಬೇಡ. ಒಂದೇ ಕ್ಷಣದಲ್ಲಿ ಇದು ಬೆಂದು ಹೋಗುತ್ತದೆ. ನಂತರ ಇದನ್ನು ನಾಜೂಕಾಗಿ ನಿಮಗೆ ಬೇಕಾದ ಆಕಾರದಲ್ಲಿ ಮಡಚಿಡಿ.
  • ನಂತರ ಒಲೆಯಿಂದ ಕೆಳಗಿಳಿಸಿ ಕೆಲವು ನಿಮಿಷಗಳ ವರೆಗೆ ತಣ್ಣಗಾಗಲು ಬಿಡಿ. ತಣ್ಣಗಾದ ನಂತರ ಗಾಳಿಯಾಡದ ಕವರ್​​ ಒಳಗಡೆ ಶೇಖರಿಸಿಡಿ. ಇದು 15 ರಿಂದ 20 ದಿನಗಳ ವರೆಗೆ ಹಾಳಾಗದೇ ಹಾಗೆಯೇ ಉಳಿದು ಬಿಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 3:42 pm, Thu, 9 February 23

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ