AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಿನ ಪಾರಂಪರಿಕ ಗರಿ ಗರಿಯಾದ ತೊಡೆದೇವು ಸಿಹಿ ಖಾದ್ಯ ಮಾಡುವ ವಿಧಾನ ಇಲ್ಲಿದೆ

ಮಲೆನಾಡಿನ ಅತ್ಯಂತ ರುಚಿಕರ ಹಾಗೆಯೇ ಗರಿ ಗರಿಯಾದ ಖಾದ್ಯ ತೊಡೆದೇವು. ಈ ವಿಶೇಷ ಖಾದ್ಯವು ಮಲೆನಾಡಿನ ಹವ್ಯಕರ ಮನೆಯಲ್ಲಿ ಹೆಚ್ಚಾಗಿ ಕಂಡು ಬರುವ ತಿಂಡಿಯಾಗಿದೆ.

ಮಲೆನಾಡಿನ ಪಾರಂಪರಿಕ ಗರಿ ಗರಿಯಾದ ತೊಡೆದೇವು ಸಿಹಿ ಖಾದ್ಯ ಮಾಡುವ ವಿಧಾನ ಇಲ್ಲಿದೆ
ತೊಡೆದೇವು ಮಾಡುವ ವಿಧಾನ Image Credit source: Youtube
ಅಕ್ಷತಾ ವರ್ಕಾಡಿ
|

Updated on:Feb 09, 2023 | 3:48 PM

Share

ಮಲೆನಾಡಿನ ಅತ್ಯಂತ ರುಚಿಕರ ಹಾಗೆಯೇ ಗರಿ ಗರಿಯಾದ ಖಾದ್ಯ ತೊಡೆದೇವು. ಈ ವಿಶೇಷ ಖಾದ್ಯವು ಮಲೆನಾಡಿನ ಹವ್ಯಕರ ಮನೆಯಲ್ಲಿ ಹೆಚ್ಚಾಗಿ ಕಂಡು ಬರುವ ತಿಂಡಿಯಾಗಿದೆ. ಈಗಲೂ ಕೂಡ ಮಲೆನಾಡಿನ ಕಡೆಗಳ ಮನೆಗಳಲ್ಲಿ ಸಾಂಪ್ರದಾಯಿಕವಾಗಿ ಕಟ್ಟಿಗೆಯ ಒಲೆಯ ಮೇಲೆ ಮಡಿಕೆಯನ್ನು ತಲೆಕೆಳಗಾಗಿ ಇಟ್ಟು ಅಂದರೆ ಅದಕ್ಕೆ ತೊಡದೇವು ಎರೆಯುವ ಮಡಿಕೆ ಎಂದು ಕರೆಯುತ್ತಾರೆ.  ಈ ರೀತಿಯಾಗಿ ಖಾದ್ಯವನ್ನು ತಯಾರಿಸಲಾಗುತ್ತದೆ. ಸಾಗರ, ಯಲ್ಲಾಪುರ, ಶಿರಸಿ, ಸಿದ್ಧಾಪುರ, ಗೋಕರ್ಣಾ, ಕುಮುಟಾ ಸುತ್ತಮುತ್ತಲಲ್ಲಿ ಈ ತಿಂಡಿ ಭಾರೀ ಜನಪ್ರಿಯತೆಯನ್ನು ಹೊಂದಿದೆ.  ಇತ್ತೀಚೆಗಷ್ಟೇ  ಗರಿ ಗರಿಯಾದ ತೊಡೆದೇವು ಮಾಡುವ ವಿಧಾನವನ್ನು ಗಗನ್​​ ಶರ್ಮರವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆ ವೀಡಿಯೋ ಇಲ್ಲಿದೆ.

ತೊಡೆದೇವು ಮಾಡಲು ಬೇಕಾಗುವ ಪದಾರ್ಥಗಳು:

  • ದಪ್ಪ ಅಕ್ಕಿ 1ಕೆಜಿ
  • ಜೋನಿ ಬೆಲ್ಲ 1ಕೆಜಿ
  • ಅರಶಿನ ಪುಡಿ
  • ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಹುಣಸೆ ಹಣ್ಣಿನ ಹಿತವಾದ ಪಾನಕ ಮಾಡುವ ವಿಧಾನ ಇಲ್ಲಿದೆ

ತೊಡೆದೇವು ಮಾಡುವ ವಿಧಾನ:

  • ಮೊದಲಿಗೆ ಅಕ್ಕಿಯನ್ನು ಮುಂಚಿನ ದಿನ ರಾತ್ರಿಯೇ ನೆನೆಸಿಟ್ಟುಕೊಳ್ಳಿ. ಮರುದಿನ ಅಕ್ಕಿಯನ್ನು ಚೆನ್ನಾಗಿ ತೊಳೆದಿಡಿ. ನಂತರ ನೆನೆಸಿಟ್ಟ ಅಕ್ಕಿ , ಜೋನಿ ಬೆಲ್ಲ, ಅರಶಿನ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಈಗ ಹಿಟ್ಟು ಸಿದ್ಧವಾಗಿದೆ.
  • ನಂತರ ಒಲೆ ಮೇಲೆ ಒಂದು ಮಡಕೆಯನ್ನು ತಲೆಕೆಳಗಾಗಿ ಇಟ್ಟುಕೊಂಡು, ಇದನ್ನು ತೊಡದೇವು ಎರೆಯುವ ಮಡಿಕೆ ಎಂದು ಕರೆಯುತ್ತಾರೆ. ನಂತರ ಒಂದು ಸಣ್ಣ ಕೋಲಿಗೆ ಕಾಟನ್​​​ ಬಟ್ಟೆಯನ್ನು ಸುತ್ತಿ ರುಬ್ಬಿದ ಹಿಟ್ಟಿನಲ್ಲಿ ಅದ್ದಿ, ಒಲೆಯ ಮೇಲಿಟ್ಟ ಕಾದ ಮಡಿಕೆಯ ಮೇಲೆ ತುಂಬಾ ತೆಳ್ಳಗೆ ಹಚ್ಚಿ. ಇದು ಬೇಯಲು ಸಮಯ ಬೇಡ. ಒಂದೇ ಕ್ಷಣದಲ್ಲಿ ಇದು ಬೆಂದು ಹೋಗುತ್ತದೆ. ನಂತರ ಇದನ್ನು ನಾಜೂಕಾಗಿ ನಿಮಗೆ ಬೇಕಾದ ಆಕಾರದಲ್ಲಿ ಮಡಚಿಡಿ.
  • ನಂತರ ಒಲೆಯಿಂದ ಕೆಳಗಿಳಿಸಿ ಕೆಲವು ನಿಮಿಷಗಳ ವರೆಗೆ ತಣ್ಣಗಾಗಲು ಬಿಡಿ. ತಣ್ಣಗಾದ ನಂತರ ಗಾಳಿಯಾಡದ ಕವರ್​​ ಒಳಗಡೆ ಶೇಖರಿಸಿಡಿ. ಇದು 15 ರಿಂದ 20 ದಿನಗಳ ವರೆಗೆ ಹಾಳಾಗದೇ ಹಾಗೆಯೇ ಉಳಿದು ಬಿಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 3:42 pm, Thu, 9 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ