AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಟಿಗಳ ಮೇಲಿನ ಬಿಳಿ ಕಲೆಗಳನ್ನು ಹೋಗಲಾಡಿಸುವುದು ಹೇಗೆ? ಈ ಸಲಹೆ ಪಾಲಿಸಿ

ಎಲ್ಲರಿಗೂ ಕೂಡ ತಮ್ಮ ತುಟಿಗಳು ನೋಡಲು ಆಕರ್ಷಕವಾಗಿರಬೇಕು ಎನ್ನುವುದಿರುತ್ತದೆ. ಆದರೆ ಸೂರ್ಯನ ಹಾನಿಕಾರಕ ಕಿರಣ, ಶುಷ್ಕ ಗಾಳಿ, ಧೂಳುಗಳಿಂದ ತುಟಿಗಳ ಅಂದಗೆಡುತ್ತದೆ. ಅದಲ್ಲದೇ, ಚರ್ಮದಲ್ಲಿ ಮೇದೋಗ್ರಂಥಿಗಳು ಹೆಚ್ಚು ಸ್ರವಿಸುವಿಕೆಯಾದಾಗ ಬ್ಯಾಕ್ಟೀರಿಯಾ ಹಾಗೂ ಕೀಟಾಣುಗಳ ಬೆಳವಣಿಗೆಗೆ ಕಾರಣವಾಗುತ್ತದೆ. ಇದರಿಂದ ಸೋಂಕು ಉಂಟಾಗಿ ಬಿಳಿ ಕಲೆಗಳು ಕಾಣಿಸಿಕೊಳ್ಳುತ್ತವೆ. ಈ ವೇಳೆಯಲ್ಲಿ ತುಟಿಗಳನ್ನು ಆರೈಕೆ ಮಾಡುವುದು ಬಹಳ ಮುಖ್ಯ, ಈ ಬಿಳಿ ಕಲೆಗಳು ನಿವಾರಿಸಲು ಸರಳ ಮನೆ ಮದ್ದುಗಳು ಇಲ್ಲಿವೆ.

ತುಟಿಗಳ ಮೇಲಿನ ಬಿಳಿ ಕಲೆಗಳನ್ನು ಹೋಗಲಾಡಿಸುವುದು ಹೇಗೆ? ಈ ಸಲಹೆ ಪಾಲಿಸಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Dec 09, 2024 | 12:19 PM

Share

ಹೆಣ್ಣು ಮಕ್ಕಳ ಮುಖದ ಅಂದ ಹೆಚ್ಚಿಸುವುದೇ ಈ ಗುಲಾಬಿ ಬಣ್ಣದ ಸುಂದರ ತುಟಿಗಳು. ಆದರೆ ಈ ತುಟಿಗಳ ಅಂದಗೆಟ್ಟರೆ ಏನು ಚಂದ ಇರುತ್ತೆ ಹೇಳಿ. ಹೀಗಾಗಿ ಹೆಂಗಳೆಯರು ತುಟಿಗಳನ್ನು ಮೃದುವಾಗಿ ಹಾಗೂ ಕಲೆಮುಕ್ತವಾಗಿರುವಂತೆ ನೋಡಿಕೊಳ್ಳುತ್ತಾರೆ. ಆದರೆ ಕೆಲವೊಮ್ಮೆ ತುಟಿಗಳ ಮೇಲೆ ಬಿಳಿ ಕಲೆಗಳು ಕಾಣಿಸಿಕೊಳ್ಳುತ್ತವೆ. ಹೀಗಾದಾಗ ಮನೆಯಲ್ಲಿರುವ ಈ ಮನೆ ಮದ್ದನ್ನು ಪ್ರಯತ್ನಿಸಿದರೆ ತುಟಿಯ ಮೇಲಿನ ಬಿಳಿ ಕಲೆಗಳು ಸುಲಭವಾಗಿ ನಿವಾರಣೆಯಾಗುತ್ತದೆ.

  • ಸ್ವಲ್ಪ ನೀರಿಗೆ ಒಂದೆರಡು ಚಮಚ ನಿಂಬೆರಸವನ್ನು ಸೇರಿಸಿ, ಹತ್ತಿ ಉಂಡೆಯಲ್ಲಿ ಅದ್ದಿಕೊಳ್ಳಿ. ಇದನ್ನು ನಿಮ್ಮ ತುಟಿಗಳ ಮೇಲೆ ಹತ್ತರಿಂದ ಹದಿನೈದು ನಿಮಿಷಗಳ ಕಾಲ ಇರಿಸಿಕೊಳ್ಳಿ. ಹೀಗೆ ಮಾಡುವುದರಿಂದ ಬಿಳಿ ಕಲೆಗಳನ್ನು ಸುಲಭವಾಗಿ ಹೋಗಲಾಡಿಸಬಹುದು.
  • ಮೊದಲಿಗೆ ಬೆಳ್ಳುಳ್ಳಿ ಎಸಳು ಗಳನ್ನು ಜಜ್ಜಿಕೊಂಡು, ಅದಕ್ಕೆ ಬಾದಾಮಿ ಎಣ್ಣೆ ಸೇರಿಸಿಕೊಳ್ಳಿ. ಇದನ್ನು ದಿನನಿತ್ಯ ತುಟಿಗಳಿಗೆ ಹಚ್ಚಿಕೊಳ್ಳಿ. ಕೆಲವು ನಿಮಿಷ ಕಾಲ ಬಳಿಕ ಉಗುರುಬೆಚ್ಚಗಿನ ನೀರಿನಿಂದ ತೊಳೆಯುವುದು ಪರಿಣಾಮಕಾರಿ ಮನೆ ಮದ್ದಾಗಿದೆ.
  • ಕೊಬ್ಬರಿ ಎಣ್ಣೆಯನ್ನು ಬಿಳಿ ಕಲೆಗಳ ಮೇಲೆ ಹಚ್ಚಿ ಮಸಾಜ್ ಮಾಡುವುದರಿಂದ ಎರಡೇ ವಾರಗಳಲ್ಲಿ ಕಲೆಯೂ ಇಲ್ಲದಂತಾಗುತ್ತದೆ.
  • ಒಂದು ಚಮಚ ಅರಶಿನ ಪುಡಿಗೆ ಎರಡು ಚಮಚ ಸಾಸಿವೆ ಎಣ್ಣೆ ಸೇರಿಸಿ ಮಿಶ್ರಣ ಮಾಡಿ ಕಲೆಯಿದ್ದಲ್ಲಿ ಹಚ್ಚಿದರೆ ಕಲೆಯೂ ನಿವಾರಣೆಯಾಗುತ್ತದೆ.
  • ಆ್ಯಪಲ್ ಸೀಡರ್ ವಿನೇಗರ್ ನಲ್ಲಿ ಹತ್ತಿ ಉಂಡೆ ಅದ್ದಿ, ಇದನ್ನು ತುಟಿಗಳಲ್ಲಿ ಕಲೆ ಇರುವಲ್ಲಿಗೆ ಹಚ್ಚಿಕೊಳ್ಳಿ. ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.
  • ಆಲಿವ್ ತೈಲವನ್ನು ತುಟಿಗಳಲ್ಲಿ ಕಲೆ ಇರುವ ಜಾಗಕ್ಕೆ ಇದನ್ನು ಹಚ್ಚಿಕೊಳ್ಳಿ, ಒಂದು ಗಂಟೆ ಕಾಲ ಹಾಗೆ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ದಿನಕ್ಕೆ ಎರಡು ಮೂರು ಸಲ ಈ ಮನೆ ಮದ್ದನ್ನು ಹಚ್ಚಿದರೆ ಕಲೆಯೂ ನಿವಾರಣೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!