AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಟಿಗಳ ಮೇಲಿನ ಬಿಳಿ ಕಲೆಗಳನ್ನು ಹೋಗಲಾಡಿಸುವುದು ಹೇಗೆ? ಈ ಸಲಹೆ ಪಾಲಿಸಿ

ಎಲ್ಲರಿಗೂ ಕೂಡ ತಮ್ಮ ತುಟಿಗಳು ನೋಡಲು ಆಕರ್ಷಕವಾಗಿರಬೇಕು ಎನ್ನುವುದಿರುತ್ತದೆ. ಆದರೆ ಸೂರ್ಯನ ಹಾನಿಕಾರಕ ಕಿರಣ, ಶುಷ್ಕ ಗಾಳಿ, ಧೂಳುಗಳಿಂದ ತುಟಿಗಳ ಅಂದಗೆಡುತ್ತದೆ. ಅದಲ್ಲದೇ, ಚರ್ಮದಲ್ಲಿ ಮೇದೋಗ್ರಂಥಿಗಳು ಹೆಚ್ಚು ಸ್ರವಿಸುವಿಕೆಯಾದಾಗ ಬ್ಯಾಕ್ಟೀರಿಯಾ ಹಾಗೂ ಕೀಟಾಣುಗಳ ಬೆಳವಣಿಗೆಗೆ ಕಾರಣವಾಗುತ್ತದೆ. ಇದರಿಂದ ಸೋಂಕು ಉಂಟಾಗಿ ಬಿಳಿ ಕಲೆಗಳು ಕಾಣಿಸಿಕೊಳ್ಳುತ್ತವೆ. ಈ ವೇಳೆಯಲ್ಲಿ ತುಟಿಗಳನ್ನು ಆರೈಕೆ ಮಾಡುವುದು ಬಹಳ ಮುಖ್ಯ, ಈ ಬಿಳಿ ಕಲೆಗಳು ನಿವಾರಿಸಲು ಸರಳ ಮನೆ ಮದ್ದುಗಳು ಇಲ್ಲಿವೆ.

ತುಟಿಗಳ ಮೇಲಿನ ಬಿಳಿ ಕಲೆಗಳನ್ನು ಹೋಗಲಾಡಿಸುವುದು ಹೇಗೆ? ಈ ಸಲಹೆ ಪಾಲಿಸಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Dec 09, 2024 | 12:19 PM

Share

ಹೆಣ್ಣು ಮಕ್ಕಳ ಮುಖದ ಅಂದ ಹೆಚ್ಚಿಸುವುದೇ ಈ ಗುಲಾಬಿ ಬಣ್ಣದ ಸುಂದರ ತುಟಿಗಳು. ಆದರೆ ಈ ತುಟಿಗಳ ಅಂದಗೆಟ್ಟರೆ ಏನು ಚಂದ ಇರುತ್ತೆ ಹೇಳಿ. ಹೀಗಾಗಿ ಹೆಂಗಳೆಯರು ತುಟಿಗಳನ್ನು ಮೃದುವಾಗಿ ಹಾಗೂ ಕಲೆಮುಕ್ತವಾಗಿರುವಂತೆ ನೋಡಿಕೊಳ್ಳುತ್ತಾರೆ. ಆದರೆ ಕೆಲವೊಮ್ಮೆ ತುಟಿಗಳ ಮೇಲೆ ಬಿಳಿ ಕಲೆಗಳು ಕಾಣಿಸಿಕೊಳ್ಳುತ್ತವೆ. ಹೀಗಾದಾಗ ಮನೆಯಲ್ಲಿರುವ ಈ ಮನೆ ಮದ್ದನ್ನು ಪ್ರಯತ್ನಿಸಿದರೆ ತುಟಿಯ ಮೇಲಿನ ಬಿಳಿ ಕಲೆಗಳು ಸುಲಭವಾಗಿ ನಿವಾರಣೆಯಾಗುತ್ತದೆ.

  • ಸ್ವಲ್ಪ ನೀರಿಗೆ ಒಂದೆರಡು ಚಮಚ ನಿಂಬೆರಸವನ್ನು ಸೇರಿಸಿ, ಹತ್ತಿ ಉಂಡೆಯಲ್ಲಿ ಅದ್ದಿಕೊಳ್ಳಿ. ಇದನ್ನು ನಿಮ್ಮ ತುಟಿಗಳ ಮೇಲೆ ಹತ್ತರಿಂದ ಹದಿನೈದು ನಿಮಿಷಗಳ ಕಾಲ ಇರಿಸಿಕೊಳ್ಳಿ. ಹೀಗೆ ಮಾಡುವುದರಿಂದ ಬಿಳಿ ಕಲೆಗಳನ್ನು ಸುಲಭವಾಗಿ ಹೋಗಲಾಡಿಸಬಹುದು.
  • ಮೊದಲಿಗೆ ಬೆಳ್ಳುಳ್ಳಿ ಎಸಳು ಗಳನ್ನು ಜಜ್ಜಿಕೊಂಡು, ಅದಕ್ಕೆ ಬಾದಾಮಿ ಎಣ್ಣೆ ಸೇರಿಸಿಕೊಳ್ಳಿ. ಇದನ್ನು ದಿನನಿತ್ಯ ತುಟಿಗಳಿಗೆ ಹಚ್ಚಿಕೊಳ್ಳಿ. ಕೆಲವು ನಿಮಿಷ ಕಾಲ ಬಳಿಕ ಉಗುರುಬೆಚ್ಚಗಿನ ನೀರಿನಿಂದ ತೊಳೆಯುವುದು ಪರಿಣಾಮಕಾರಿ ಮನೆ ಮದ್ದಾಗಿದೆ.
  • ಕೊಬ್ಬರಿ ಎಣ್ಣೆಯನ್ನು ಬಿಳಿ ಕಲೆಗಳ ಮೇಲೆ ಹಚ್ಚಿ ಮಸಾಜ್ ಮಾಡುವುದರಿಂದ ಎರಡೇ ವಾರಗಳಲ್ಲಿ ಕಲೆಯೂ ಇಲ್ಲದಂತಾಗುತ್ತದೆ.
  • ಒಂದು ಚಮಚ ಅರಶಿನ ಪುಡಿಗೆ ಎರಡು ಚಮಚ ಸಾಸಿವೆ ಎಣ್ಣೆ ಸೇರಿಸಿ ಮಿಶ್ರಣ ಮಾಡಿ ಕಲೆಯಿದ್ದಲ್ಲಿ ಹಚ್ಚಿದರೆ ಕಲೆಯೂ ನಿವಾರಣೆಯಾಗುತ್ತದೆ.
  • ಆ್ಯಪಲ್ ಸೀಡರ್ ವಿನೇಗರ್ ನಲ್ಲಿ ಹತ್ತಿ ಉಂಡೆ ಅದ್ದಿ, ಇದನ್ನು ತುಟಿಗಳಲ್ಲಿ ಕಲೆ ಇರುವಲ್ಲಿಗೆ ಹಚ್ಚಿಕೊಳ್ಳಿ. ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.
  • ಆಲಿವ್ ತೈಲವನ್ನು ತುಟಿಗಳಲ್ಲಿ ಕಲೆ ಇರುವ ಜಾಗಕ್ಕೆ ಇದನ್ನು ಹಚ್ಚಿಕೊಳ್ಳಿ, ಒಂದು ಗಂಟೆ ಕಾಲ ಹಾಗೆ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ದಿನಕ್ಕೆ ಎರಡು ಮೂರು ಸಲ ಈ ಮನೆ ಮದ್ದನ್ನು ಹಚ್ಚಿದರೆ ಕಲೆಯೂ ನಿವಾರಣೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ