AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಟಿಗಳ ಮೇಲಿನ ಬಿಳಿ ಕಲೆಗಳನ್ನು ಹೋಗಲಾಡಿಸುವುದು ಹೇಗೆ? ಈ ಸಲಹೆ ಪಾಲಿಸಿ

ಎಲ್ಲರಿಗೂ ಕೂಡ ತಮ್ಮ ತುಟಿಗಳು ನೋಡಲು ಆಕರ್ಷಕವಾಗಿರಬೇಕು ಎನ್ನುವುದಿರುತ್ತದೆ. ಆದರೆ ಸೂರ್ಯನ ಹಾನಿಕಾರಕ ಕಿರಣ, ಶುಷ್ಕ ಗಾಳಿ, ಧೂಳುಗಳಿಂದ ತುಟಿಗಳ ಅಂದಗೆಡುತ್ತದೆ. ಅದಲ್ಲದೇ, ಚರ್ಮದಲ್ಲಿ ಮೇದೋಗ್ರಂಥಿಗಳು ಹೆಚ್ಚು ಸ್ರವಿಸುವಿಕೆಯಾದಾಗ ಬ್ಯಾಕ್ಟೀರಿಯಾ ಹಾಗೂ ಕೀಟಾಣುಗಳ ಬೆಳವಣಿಗೆಗೆ ಕಾರಣವಾಗುತ್ತದೆ. ಇದರಿಂದ ಸೋಂಕು ಉಂಟಾಗಿ ಬಿಳಿ ಕಲೆಗಳು ಕಾಣಿಸಿಕೊಳ್ಳುತ್ತವೆ. ಈ ವೇಳೆಯಲ್ಲಿ ತುಟಿಗಳನ್ನು ಆರೈಕೆ ಮಾಡುವುದು ಬಹಳ ಮುಖ್ಯ, ಈ ಬಿಳಿ ಕಲೆಗಳು ನಿವಾರಿಸಲು ಸರಳ ಮನೆ ಮದ್ದುಗಳು ಇಲ್ಲಿವೆ.

ತುಟಿಗಳ ಮೇಲಿನ ಬಿಳಿ ಕಲೆಗಳನ್ನು ಹೋಗಲಾಡಿಸುವುದು ಹೇಗೆ? ಈ ಸಲಹೆ ಪಾಲಿಸಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Dec 09, 2024 | 12:19 PM

Share

ಹೆಣ್ಣು ಮಕ್ಕಳ ಮುಖದ ಅಂದ ಹೆಚ್ಚಿಸುವುದೇ ಈ ಗುಲಾಬಿ ಬಣ್ಣದ ಸುಂದರ ತುಟಿಗಳು. ಆದರೆ ಈ ತುಟಿಗಳ ಅಂದಗೆಟ್ಟರೆ ಏನು ಚಂದ ಇರುತ್ತೆ ಹೇಳಿ. ಹೀಗಾಗಿ ಹೆಂಗಳೆಯರು ತುಟಿಗಳನ್ನು ಮೃದುವಾಗಿ ಹಾಗೂ ಕಲೆಮುಕ್ತವಾಗಿರುವಂತೆ ನೋಡಿಕೊಳ್ಳುತ್ತಾರೆ. ಆದರೆ ಕೆಲವೊಮ್ಮೆ ತುಟಿಗಳ ಮೇಲೆ ಬಿಳಿ ಕಲೆಗಳು ಕಾಣಿಸಿಕೊಳ್ಳುತ್ತವೆ. ಹೀಗಾದಾಗ ಮನೆಯಲ್ಲಿರುವ ಈ ಮನೆ ಮದ್ದನ್ನು ಪ್ರಯತ್ನಿಸಿದರೆ ತುಟಿಯ ಮೇಲಿನ ಬಿಳಿ ಕಲೆಗಳು ಸುಲಭವಾಗಿ ನಿವಾರಣೆಯಾಗುತ್ತದೆ.

  • ಸ್ವಲ್ಪ ನೀರಿಗೆ ಒಂದೆರಡು ಚಮಚ ನಿಂಬೆರಸವನ್ನು ಸೇರಿಸಿ, ಹತ್ತಿ ಉಂಡೆಯಲ್ಲಿ ಅದ್ದಿಕೊಳ್ಳಿ. ಇದನ್ನು ನಿಮ್ಮ ತುಟಿಗಳ ಮೇಲೆ ಹತ್ತರಿಂದ ಹದಿನೈದು ನಿಮಿಷಗಳ ಕಾಲ ಇರಿಸಿಕೊಳ್ಳಿ. ಹೀಗೆ ಮಾಡುವುದರಿಂದ ಬಿಳಿ ಕಲೆಗಳನ್ನು ಸುಲಭವಾಗಿ ಹೋಗಲಾಡಿಸಬಹುದು.
  • ಮೊದಲಿಗೆ ಬೆಳ್ಳುಳ್ಳಿ ಎಸಳು ಗಳನ್ನು ಜಜ್ಜಿಕೊಂಡು, ಅದಕ್ಕೆ ಬಾದಾಮಿ ಎಣ್ಣೆ ಸೇರಿಸಿಕೊಳ್ಳಿ. ಇದನ್ನು ದಿನನಿತ್ಯ ತುಟಿಗಳಿಗೆ ಹಚ್ಚಿಕೊಳ್ಳಿ. ಕೆಲವು ನಿಮಿಷ ಕಾಲ ಬಳಿಕ ಉಗುರುಬೆಚ್ಚಗಿನ ನೀರಿನಿಂದ ತೊಳೆಯುವುದು ಪರಿಣಾಮಕಾರಿ ಮನೆ ಮದ್ದಾಗಿದೆ.
  • ಕೊಬ್ಬರಿ ಎಣ್ಣೆಯನ್ನು ಬಿಳಿ ಕಲೆಗಳ ಮೇಲೆ ಹಚ್ಚಿ ಮಸಾಜ್ ಮಾಡುವುದರಿಂದ ಎರಡೇ ವಾರಗಳಲ್ಲಿ ಕಲೆಯೂ ಇಲ್ಲದಂತಾಗುತ್ತದೆ.
  • ಒಂದು ಚಮಚ ಅರಶಿನ ಪುಡಿಗೆ ಎರಡು ಚಮಚ ಸಾಸಿವೆ ಎಣ್ಣೆ ಸೇರಿಸಿ ಮಿಶ್ರಣ ಮಾಡಿ ಕಲೆಯಿದ್ದಲ್ಲಿ ಹಚ್ಚಿದರೆ ಕಲೆಯೂ ನಿವಾರಣೆಯಾಗುತ್ತದೆ.
  • ಆ್ಯಪಲ್ ಸೀಡರ್ ವಿನೇಗರ್ ನಲ್ಲಿ ಹತ್ತಿ ಉಂಡೆ ಅದ್ದಿ, ಇದನ್ನು ತುಟಿಗಳಲ್ಲಿ ಕಲೆ ಇರುವಲ್ಲಿಗೆ ಹಚ್ಚಿಕೊಳ್ಳಿ. ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.
  • ಆಲಿವ್ ತೈಲವನ್ನು ತುಟಿಗಳಲ್ಲಿ ಕಲೆ ಇರುವ ಜಾಗಕ್ಕೆ ಇದನ್ನು ಹಚ್ಚಿಕೊಳ್ಳಿ, ಒಂದು ಗಂಟೆ ಕಾಲ ಹಾಗೆ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ದಿನಕ್ಕೆ ಎರಡು ಮೂರು ಸಲ ಈ ಮನೆ ಮದ್ದನ್ನು ಹಚ್ಚಿದರೆ ಕಲೆಯೂ ನಿವಾರಣೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ