AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಮನೆಮದ್ದುಗಳು ಪರಿಣಾಮಕಾರಿ

ಬಾಯಿಯ ದುರ್ವಾಸನೆ ನಿಜಕ್ಕೂ ಮುಜುಗರವನ್ನುಂಟುಮಾಡುತ್ತದೆ. ಈ ಒಂದು ಸಮಸ್ಯೆಯಿಂದ ಪರಿಹಾರ ಪಡೆಯಲು ಅನೇಕರು ಮಾರುಕಟ್ಟೆಯಲ್ಲಿ ಸಿಗುವಂತಹ ಹಲವು ಬಗೆಯ ಮೌತ್‌ ಕ್ಲೀನರ್‌, ಮೌತ್‌ ಫ್ರೆಶ್ನರ್‌ಗಳನ್ನು ಬಳಸುತ್ತಾರೆ. ಇದರ ಬದಲು ಅಡುಗೆ ಮನೆಯಲ್ಲಿ ಲಭ್ಯವಿರುವ ಈ ಕೆಲವೊಂದು ವಸ್ತುಗಳ ಸಹಾಯದಲ್ಲಿ ಸುಲಭವಾಗಿ ಈ ಸಮಸ್ಯೆಯನ್ನು ಹೋಗಲಾಡಿಸಬಹುದು.

ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಮನೆಮದ್ದುಗಳು ಪರಿಣಾಮಕಾರಿ
ಸಾಂದರ್ಭಿಕ ಚಿತ್ರ Image Credit source: Pinterest
ಮಾಲಾಶ್ರೀ ಅಂಚನ್​
|

Updated on: Feb 04, 2026 | 3:42 PM

Share

ದಿನಕ್ಕೆರಡು ಬಾರಿ ಹಲ್ಲುಜ್ಜಿದರೂ, ಅನೇಕರು ಬಾಯಿ ದುರ್ವಾಸನೆ (bad breath) ಸಮಸ್ಯೆಯನ್ನು ಎದುರಿಸುತ್ತಾರೆ. ಬಾಯಿಯ ಆರೋಗ್ಯ, ನೈರ್ಮಲ್ಯದ ಬಗ್ಗೆ ಕಾಳಜಿ ವಹಿಸದಿದ್ದರೆ ಹೀಗೆ ಬಾಯಿ ವಾಸನೆ ಬರುತ್ತದೆ. ಇದು ಹೆಚ್ಚಿನವರಿಗೆ ಮುಜುಗರವನ್ನು ಉಂಟುಮಾಡುತ್ತದೆ. ಇದೇ ಕಾರಣಕ್ಕೆ ಅನೇಕರು ಮೌತ್‌ ಕ್ಲೀನರ್‌ಗಳನ್ನು ಬಳಕೆ ಮಾಡುತ್ತಾರೆ. ಇದರ ಬದಲು ಕೆಲವೊಂದು ಮನೆಮದ್ದುಗಳ ಸಹಾಯದಿಂದ ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಪರಿಣಾಮಕಾರಿ ಪರಿಹಾರವನ್ನು ಪಡೆಯಬಹುದು. ಆ ಮನೆಮದ್ದುಗಳು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಬಾಯಿ ದುರ್ವಾಸನೆಯನ್ನು ಹೋಗಲಾಡಿಸಲು ಈ ಮನೆಮದ್ದುಗಳನ್ನು ಪ್ರಯತ್ನಿಸಿ:

ಪುದೀನ: ಬಾಯಿಯ ದುರ್ವಾಸನೆಯನ್ನು ಹೋಗಲಾಡಿಲಸು ಪದೀನಾ ತುಂಬಾ ಪರಿಣಾಮಕಾರಿ ಪರಿಹಾರವಾಗಿದೆ. ಇದಕ್ಕಾಗಿ ಪುದೀನ ಎಲೆಗಳನ್ನು ನೀರಿನಲ್ಲಿ ಕುದಿಸಿ, ಒಂದು ದ್ರಾವಣವನ್ನು ತಯಾರಿಸಿ, ದಿನಕ್ಕೆ ಮೂರು ಬಾರಿ ಬಾಯಿ ಮುಕ್ಕಳಿಸುವುದರಿಂದ ಕೆಲವೇ ದಿನಗಳಲ್ಲಿ ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಬಹುದು. ಇದಲ್ಲದೆ ಪುದೀನಾ ಎಲೆಯನ್ನು ಜಗಿಯುವುದರಿಂದಲೂ ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಬಹುದು.

ಶುಂಠಿ: ಬಾಯಿಯ ದುರ್ವಾಸನೆಯನ್ನು ತೊಡೆದುಹಾಕಲು, ಒಂದು ಲೋಟ ನೀರಿಗೆ ಶುಂಠಿ ರಸವನ್ನು ಸೇರಿಸಿ ಬಾಯಿ ಮುಕ್ಕಳಿಸಿ. ಹೌದು ದಿನಕ್ಕೆ ಮೂರು ಬಾರಿ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆ ಈ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಪರಿಣಾಮಕಾರಿಪರಿಹಾರವನ್ನು ಪಡೆಯಬಹುದು.

ಲವಂಗ ಅಥವಾ ಸೋಂಪು ಬೀಜಗಳನ್ನು ಅಗಿಯಿರಿ: ಇವುಗಳಲ್ಲಿ ನಂಜುನಿರೋಧಕ ಗುಣಗಳಿದ್ದು, ಬಾಯಿಯ ದುರ್ವಾಸನೆಯನ್ನು ಉಂಟುಮಾಡುವ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಸಿಟ್ರಸ್ ಹಣ್ಣುಗಳು: ಕಿತ್ತಳೆ ಮತ್ತು ನಿಂಬೆಹಣ್ಣಿನಂತಹ ಸಿಟ್ರಸ್ ಹಣ್ಣುಗಳು ಬಾಯಿಯಲ್ಲಿ ಬ್ಯಾಕ್ಟೀರಿಯಾ ಬೆಳೆಯುವುದನ್ನು ತಡೆಯಲು ಸಹಾಯ ಮಾಡುವ ಆಮ್ಲವನ್ನು ಹೊಂದಿರುತ್ತವೆ. ಇದಕ್ಕಾಗಿ, 1 ಟೀಚಮಚ ನಿಂಬೆ ಅಥವಾ ಕಿತ್ತಳೆ ರಸದೊಂದಿಗೆ ಸ್ವಲ್ಪ ಉಪ್ಪನ್ನು ಬೆರೆಸಿ, ಅದನ್ನು ಬಾಯಲ್ಲಿಟ್ಟು ನಂತರ ಸ್ವಚ್ಛಗೊಳಿಸಿ, ಇದು ಬಾಯಿಯ ದುರ್ವಾಸನೆಯನ್ನು ನಿವಾರಿಸುತ್ತದೆ. ಇದಲ್ಲದೆ ನಿಂಬೆ ಮತ್ತು ಕಿತ್ತಳೆ ಸಿಪ್ಪೆಗಳನ್ನು ಸಹ ಅಗಿಯಬಹುದು.

ಇದನ್ನೂ ಓದಿ: ಹಲ್ಲುಜ್ಜಲು ಎಷ್ಟು ಪ್ರಮಾಣದ ಟೂತ್‌ಪೇಸ್ಟ್‌ ಬಳಸುವುದು ಸೂಕ್ತ?

ಸಾಸಿವೆ ಮತ್ತು ಉಪ್ಪು: ಸಾಸಿವೆ ಎಣ್ಣೆಯನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಬೆರೆಸಿ ನಿಮ್ಮ ಒಸಡುಗಳಿಗೆ ಮಸಾಜ್ ಮಾಡುವುದರಿಂದ ಬಾಯಿಯ ದುರ್ವಾಸನೆ ನಿವಾರಣೆಯಾಗುತ್ತದೆ. ಕೆಲವೊಮ್ಮೆ, ವಸಡಿನ ಕೊಳೆತ ಬಾಯಿಯ ದುರ್ವಾಸನೆಗೆ ಕಾರಣವಾಗಬಹುದು. ಅಂತಹ ಸಂದರ್ಭಗಳಲ್ಲಿ, ಕೆಲವು ದಿನಗಳವರೆಗೆ ಈ ಪರಿಹಾರವನ್ನು ಅನುಸರಿಸುವುದರಿಂದ ಬಾಯಿಯ ದುರ್ವಾಸನೆ ನಿವಾರಣೆಯಾಗುತ್ತದೆ.

ನಾಲಿಗೆಯ ಸ್ವಚ್ಛಗೊಳಿಸುವುದು ಮುಖ್ಯ:

ಜನರು ಹೆಚ್ಚಾಗಿ ಹಲ್ಲುಜ್ಜುತ್ತಾರೆ, ಆದರೆ ನಾಲಿಗೆಯ ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸುವುದಿಲ್ಲ. ಇದರಿಂದ ಕೊಳಕು ಮತ್ತು ಬ್ಯಾಕ್ಟೀರಿಯಾಗಳು ಹಾಗೆಯೇ ಉಳಿದು ಬಿಡುತ್ತದೆ.  ಇದು ಬಾಯಿ ದುರ್ವಾಸನೆ ಸಮಸ್ಯೆಗೆ ದೊಡ್ಡ ಕಾರಣವಾಗಿದೆ. ಆದ್ದರಿಂದ, ಪ್ರತಿದಿನ ತಾಮ್ರ ಅಥವಾ ಉಕ್ಕಿನ ಟಂಗ್‌ ಕ್ಲೀನರ್‌ನಿಂದ ನಾಲಿಗೆಯನ್ನು ಸ್ವಚ್ಛಗೊಳಿಸಿ. ಅಲ್ಲದೆ ಸಾಕಷ್ಟು ನೀರು ಕುಡಿಯಿರಿ ಮತ್ತು ಊಟದ ನಂತರ ಬಾಯಿ ಮುಕ್ಕಳಿಸುವ ಅಭ್ಯಾಸ ಬೆಳೆಸಿಕೊಳ್ಳಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್