AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Immunity Booster Soup: ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಸೂಪ್ ಪ್ರಯತ್ನಿಸಿ

ಈ ಚಳಿಗಾಲದ ಸಮಯದಲ್ಲಿ ನಿಮ್ಮನ್ನು ಬೆಚ್ಚಗಿಡುವುದರ ಜೊತೆಗೆ ಶೀತ ಮತ್ತು ಕೆಮ್ಮನ್ನು ನಿವಾರಿಸಲು ಸಹಾಯಕವಾಗಿದೆ. ಜೊತೆಗೆ ನಿಮ್ಮ ದೇಹದ ಅತಿಯಾದ ತೂಕವನ್ನು ಕಡಿಮೆಗೊಳಿಸಲು ಸಹಾಯಮಾಡುತ್ತದೆ.

Immunity Booster Soup: ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಸೂಪ್ ಪ್ರಯತ್ನಿಸಿ
ಸಾಂದರ್ಭಿಕ ಚಿತ್ರImage Credit source: NDTV FOOD
TV9 Web
| Edited By: |

Updated on:Dec 22, 2022 | 12:07 PM

Share

ಚಳಿಗಾಲ(Winter) ದಲ್ಲಿ, ಶೀತ ಮತ್ತು ಕೆಮ್ಮಿನಂತಹ ಸಾಮಾನ್ಯ ಸೋಂಕುಗಳು ಹೆಚ್ಚಾಗಿ ಕಂಡುಬರುತ್ತದೆ. ಆದರೆ ಚಳಿಗಾಲದಲ್ಲಿ ಸೋಂಕುಗಳನ್ನು ತಡೆಗಟ್ಟಲು ಮತ್ತು ನೀವು ಇಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ಅವುಗಳ ರೋಗಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುವ ಆಹಾರಗಳ ಕುರಿತು ಮಾಹಿತಿ ಇಲ್ಲಿದೆ. ಚಳಿಗಾಲದಲ್ಲಿ ಹೊರಗಿನ ಶೀತಗಾಳಿಗೆ ದೇಹವು ಸಾಕಷ್ಟು ತಣ್ಣಗಾಗುವುದರಿಂದ ನಿಮ್ಮ ದೇಹವನ್ನು ಬೆಚ್ಚಗಿಡುವುದು ಅಗತ್ಯವಾಗಿದೆ. ಈ ಕ್ಯಾರೆಟ್, ಬೀಟ್ರೂಟ್ ಮತ್ತು ಟೊಮೆಟೊ ಸೂಪ್ ನಿಮ್ಮನ್ನು ಬೆಚ್ಚಗಿಡುವುದರ ಜೊತೆಗೆ ಶೀತ ಮತ್ತು ಕೆಮ್ಮನ್ನು ನಿವಾರಿಸುತ್ತದೆ. ಜೊತೆಗೆ ದೇಹದ ಅತಿಯಾದ ತೂಕದಿಂದ ನೀವು ಬಳಲುತ್ತಿದ್ದರೆ ತೂಕ ನಷ್ಟಗೊಳಿಸಲು ಇದು ಸಹಾಯವಾಗಿದೆ.

ಕ್ಯಾರೆಟ್, ಬೀಟ್ರೂಟ್ ಮತ್ತು ಟೊಮೆಟೊ ಸೂಪ್ ಮಾಡುವ ವಿಧಾನದ ವೀಡಿಯೋ ಇಲ್ಲಿದೆ

ರೋಗನಿರೋಧಕ ಶಕ್ತಿ ಮತ್ತು ತೂಕ ನಷ್ಟದ ಸೂಪ್​ಗೆ ಬೇಕಾಗುವ ಸಾಮಾಗ್ರಿಗಳು:

2 ಕ್ಯಾರೆಟ್ 1 ಬೀಟ್ರೂಟ್ 4 ಟೊಮೆಟೊ 1 ಚಮಚ ಆಲಿವ್ ಎಣ್ಣೆ ಚಿಕ್ಕ ತುಂಡು ಶುಂಠಿ ರುಚಿಗೆ ಉಪ್ಪು 1 ಚಮಚ ಮೆಣಸಿನ ಹುಡಿ ಸ್ವಲ್ಪ ಕೊತ್ತಂಬರಿ ಸೊಪ್ಪು

ಇದನ್ನೂ ಓದಿ: ಭಾರತೀಯ ಕರೆನ್ಸಿಯ ಮೂಲಕ ಕಡಿಮೆ ಖರ್ಚಿನಲ್ಲಿ ಹೋಗಬಹುದಾದ ವಿದೇಶಿ ತಾಣಗಳು ಇಲ್ಲಿವೆ

ರೋಗನಿರೋಧಕ ಶಕ್ತಿ ಮತ್ತು ತೂಕ ನಷ್ಟದ ಸೂಪ್ ತಯಾರಿಸುವುದು ಹೇಗೆ?:

ಮೊದಲಿಗೆ 2 ಕ್ಯಾರೆಟ್, 1 ಬೀಟ್ರೂಟ್ ಮತ್ತು 4 ಟೊಮೆಟೊಗಳನ್ನು ತೆಗೆದುಕೊಳ್ಳಿ. ಚೆನ್ನಾಗಿ ತೊಳೆದು ಚಿಕ್ಕ ಚಿಕ್ಕದಾಗಿ ಕತ್ತರಿಸಿ. ನಂತರ ಒಂದು ಕುಕ್ಕರ್ ತೆಗೆದುಕೊಂಡು ಸ್ವಲ್ಪ ಆಲಿವ್ ಎಣ್ಣೆ ಮತ್ತು ಕತ್ತರಿಸಿದ ಶುಂಠಿಯನ್ನು ಬಿಸಿ ಮಾಡಿ. ನಂತರ ಇದಕ್ಕೆ ಕತ್ತರಿಸಿದ ತರಕಾರಿಗಳನ್ನು ಸೇರಿಸಿ, ಸ್ವಲ್ಪ ಉಪ್ಪು ಮತ್ತು ಮೆಣಸಿನ ಹುಡಿಯನ್ನು ಹಾಕಿ ಮತ್ತು 2-3 ಗ್ಲಾಸ್ ನೀರು ಸೇರಿಸಿ. ತರಕಾರಿಗಳು ಬೇಯುವ ವರೆಗೆ ಕುಕ್ ಮಾಡಿ. ಕೊನೆಯದಾಗಿ ಒಂದು ಬೌಲ್​ಗೆ ಹಾಕಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 11:28 am, Thu, 22 December 22

Follow Us
ಗಾಯಾಳುವಿಗೆ ನೆರವಾದ ಹೆಚ್​​ಡಿಕೆ: ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಗಾಯಾಳುವಿಗೆ ನೆರವಾದ ಹೆಚ್​​ಡಿಕೆ: ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಪೂರ್ಣ ಗಾತ್ರದ ಪ್ರತಿಮೆ ಅನಾವರಣ
ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಪೂರ್ಣ ಗಾತ್ರದ ಪ್ರತಿಮೆ ಅನಾವರಣ
ಡಾ. ರಾಜ್​ಕುಮಾರ್ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘಣ್ಣ
ಡಾ. ರಾಜ್​ಕುಮಾರ್ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘಣ್ಣ
ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್
ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್
ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ
ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ
ಬಾಲಕಿ ಸಾವಿನ ಬಳಿಕವೂ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಪ್ರವಾಸಿಗರ ಹುಚ್ಚಾಟ
ಬಾಲಕಿ ಸಾವಿನ ಬಳಿಕವೂ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಪ್ರವಾಸಿಗರ ಹುಚ್ಚಾಟ
ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ
ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ
ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು
ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು
ವಕೀಲನ ಶೂಟೌಟ್, ಪರಾರಿಯಾಗಲು ಯತ್ನಿಸಿದ ಹಂತಕನಿಗೆ ಕೈಕೊಟ್ಟ ಬೈಕ್
ವಕೀಲನ ಶೂಟೌಟ್, ಪರಾರಿಯಾಗಲು ಯತ್ನಿಸಿದ ಹಂತಕನಿಗೆ ಕೈಕೊಟ್ಟ ಬೈಕ್