Sign In

By signing in or creating an account, you agree with Associated Broadcasting Company's Terms & Conditions and Privacy Policy.

Immunity Booster Soup: ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಸೂಪ್ ಪ್ರಯತ್ನಿಸಿ

ಈ ಚಳಿಗಾಲದ ಸಮಯದಲ್ಲಿ ನಿಮ್ಮನ್ನು ಬೆಚ್ಚಗಿಡುವುದರ ಜೊತೆಗೆ ಶೀತ ಮತ್ತು ಕೆಮ್ಮನ್ನು ನಿವಾರಿಸಲು ಸಹಾಯಕವಾಗಿದೆ. ಜೊತೆಗೆ ನಿಮ್ಮ ದೇಹದ ಅತಿಯಾದ ತೂಕವನ್ನು ಕಡಿಮೆಗೊಳಿಸಲು ಸಹಾಯಮಾಡುತ್ತದೆ.

Immunity Booster Soup: ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಸೂಪ್ ಪ್ರಯತ್ನಿಸಿ
ಸಾಂದರ್ಭಿಕ ಚಿತ್ರImage Credit source: NDTV FOOD
Follow us
TV9 Web
| Updated By: Digi Tech Desk

Updated on:Dec 22, 2022 | 12:07 PM

ಚಳಿಗಾಲ(Winter) ದಲ್ಲಿ, ಶೀತ ಮತ್ತು ಕೆಮ್ಮಿನಂತಹ ಸಾಮಾನ್ಯ ಸೋಂಕುಗಳು ಹೆಚ್ಚಾಗಿ ಕಂಡುಬರುತ್ತದೆ. ಆದರೆ ಚಳಿಗಾಲದಲ್ಲಿ ಸೋಂಕುಗಳನ್ನು ತಡೆಗಟ್ಟಲು ಮತ್ತು ನೀವು ಇಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ಅವುಗಳ ರೋಗಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುವ ಆಹಾರಗಳ ಕುರಿತು ಮಾಹಿತಿ ಇಲ್ಲಿದೆ. ಚಳಿಗಾಲದಲ್ಲಿ ಹೊರಗಿನ ಶೀತಗಾಳಿಗೆ ದೇಹವು ಸಾಕಷ್ಟು ತಣ್ಣಗಾಗುವುದರಿಂದ ನಿಮ್ಮ ದೇಹವನ್ನು ಬೆಚ್ಚಗಿಡುವುದು ಅಗತ್ಯವಾಗಿದೆ. ಈ ಕ್ಯಾರೆಟ್, ಬೀಟ್ರೂಟ್ ಮತ್ತು ಟೊಮೆಟೊ ಸೂಪ್ ನಿಮ್ಮನ್ನು ಬೆಚ್ಚಗಿಡುವುದರ ಜೊತೆಗೆ ಶೀತ ಮತ್ತು ಕೆಮ್ಮನ್ನು ನಿವಾರಿಸುತ್ತದೆ. ಜೊತೆಗೆ ದೇಹದ ಅತಿಯಾದ ತೂಕದಿಂದ ನೀವು ಬಳಲುತ್ತಿದ್ದರೆ ತೂಕ ನಷ್ಟಗೊಳಿಸಲು ಇದು ಸಹಾಯವಾಗಿದೆ.

ಕ್ಯಾರೆಟ್, ಬೀಟ್ರೂಟ್ ಮತ್ತು ಟೊಮೆಟೊ ಸೂಪ್ ಮಾಡುವ ವಿಧಾನದ ವೀಡಿಯೋ ಇಲ್ಲಿದೆ

ರೋಗನಿರೋಧಕ ಶಕ್ತಿ ಮತ್ತು ತೂಕ ನಷ್ಟದ ಸೂಪ್​ಗೆ ಬೇಕಾಗುವ ಸಾಮಾಗ್ರಿಗಳು:

2 ಕ್ಯಾರೆಟ್ 1 ಬೀಟ್ರೂಟ್ 4 ಟೊಮೆಟೊ 1 ಚಮಚ ಆಲಿವ್ ಎಣ್ಣೆ ಚಿಕ್ಕ ತುಂಡು ಶುಂಠಿ ರುಚಿಗೆ ಉಪ್ಪು 1 ಚಮಚ ಮೆಣಸಿನ ಹುಡಿ ಸ್ವಲ್ಪ ಕೊತ್ತಂಬರಿ ಸೊಪ್ಪು

ಇದನ್ನೂ ಓದಿ: ಭಾರತೀಯ ಕರೆನ್ಸಿಯ ಮೂಲಕ ಕಡಿಮೆ ಖರ್ಚಿನಲ್ಲಿ ಹೋಗಬಹುದಾದ ವಿದೇಶಿ ತಾಣಗಳು ಇಲ್ಲಿವೆ

ರೋಗನಿರೋಧಕ ಶಕ್ತಿ ಮತ್ತು ತೂಕ ನಷ್ಟದ ಸೂಪ್ ತಯಾರಿಸುವುದು ಹೇಗೆ?:

ಮೊದಲಿಗೆ 2 ಕ್ಯಾರೆಟ್, 1 ಬೀಟ್ರೂಟ್ ಮತ್ತು 4 ಟೊಮೆಟೊಗಳನ್ನು ತೆಗೆದುಕೊಳ್ಳಿ. ಚೆನ್ನಾಗಿ ತೊಳೆದು ಚಿಕ್ಕ ಚಿಕ್ಕದಾಗಿ ಕತ್ತರಿಸಿ. ನಂತರ ಒಂದು ಕುಕ್ಕರ್ ತೆಗೆದುಕೊಂಡು ಸ್ವಲ್ಪ ಆಲಿವ್ ಎಣ್ಣೆ ಮತ್ತು ಕತ್ತರಿಸಿದ ಶುಂಠಿಯನ್ನು ಬಿಸಿ ಮಾಡಿ. ನಂತರ ಇದಕ್ಕೆ ಕತ್ತರಿಸಿದ ತರಕಾರಿಗಳನ್ನು ಸೇರಿಸಿ, ಸ್ವಲ್ಪ ಉಪ್ಪು ಮತ್ತು ಮೆಣಸಿನ ಹುಡಿಯನ್ನು ಹಾಕಿ ಮತ್ತು 2-3 ಗ್ಲಾಸ್ ನೀರು ಸೇರಿಸಿ. ತರಕಾರಿಗಳು ಬೇಯುವ ವರೆಗೆ ಕುಕ್ ಮಾಡಿ. ಕೊನೆಯದಾಗಿ ಒಂದು ಬೌಲ್​ಗೆ ಹಾಕಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 11:28 am, Thu, 22 December 22

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!