AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tulu Script : ತುಳುವರಿಗೆ ಸಂತಸದ ಸುದ್ದಿ, ಯೂನಿಕೋಡ್​​ಗೆ ತುಳುಲಿಪಿ ಸೇರ್ಪಡೆ

ಕಳೆದ ಐದಾರು ವರ್ಷಗಳಿಂದ ತುಳು ಲಿಪಿಯ ಬಳಕೆ ಹಾಗೂ ಅದರ ಕುರಿತಾದ ಅಧ್ಯಯನಗಳು ಹೆಚ್ಚುತ್ತಲೇ ಇದೆ. ಇತ್ತೀಚೆಗಷ್ಟೇ ಗೂಗಲ್ ಟ್ರಾನ್ಸಲೇಟರ್ ತಂತ್ರಾಂಶದಲ್ಲಿಯೂ ತುಳುಭಾಷೆ ಸೇರ್ಪಡೆಯಾಗಿತ್ತು. ಆದರೆ ಇದೀಗ ತುಳುವವರಿಗೆ ಮತ್ತೊಂದು ಸಿಹಿಯೊಂದು ಹೊರಬಿದ್ದಿದೆ. ಕರಾವಳಿಗರ ಮಾತೃಭಾಷೆಯಾಗಿರುವ ತುಳು ಭಾಷೆಯ ತುಳುಲಿಪಿಯನ್ನು ಕಂಪ್ಯೂಟರ್ ಕೀಲಿಮಣೆಗೂ ತರಲಾಗಿದೆ.

Tulu Script : ತುಳುವರಿಗೆ ಸಂತಸದ ಸುದ್ದಿ, ಯೂನಿಕೋಡ್​​ಗೆ ತುಳುಲಿಪಿ ಸೇರ್ಪಡೆ
ತುಳುಲಿಪಿ
ಸಾಯಿನಂದಾ
| Edited By: |

Updated on: Sep 10, 2024 | 11:54 AM

Share

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು ಭಾಷೆ ಈ ತುಳು. ಭಾರತದ ಕರ್ನಾಟಕ ರಾಜ್ಯದ ಪಶ್ಚಿಮ ತೀರದಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಈ ತುಳುಭಾಷೆ ಹೆಚ್ಚಾಗಿ ಚಾಲ್ತಿಯಲ್ಲಿದೆ. ಅದಲ್ಲದೇ, ಸರಿಸುಮಾರು ಹತ್ತನೇಯ ಶತಮಾನದಲ್ಲಿ ತುಳು ಬ್ರಾಹ್ಮಣರು ದಕ್ಷಿಣ ಭಾರತದ ಭಾಗಗಳಲ್ಲಿ ವಿಕಾಸವಾದ ತಿಗಳಾರಿ ಲಿಪಿ ಎಂಬ ಬ್ರಾಹ್ಮಿ ಆಧಾರಿತ ಲಿಪಿಯನ್ನು ಉಪಯೋಗಿಸುತ್ತಿದ್ದರು. ಆದರೆ ಇದೀಗ ತುಳುಭಾಷೆಯ ಲಿಪಿ ಯುನಿಕೋಡ್‌ಗೂ ಸೇರ್ಪಡೆಯಾಗಿರುವುದು ತುಳುವರಿಗೆ ಸಂತೋಷವನ್ನುಂಟು ಮಾಡಿದೆ.

ತುಳು ಲಿಪಿಗಿರುವ ಇನ್ನೊಂದು ಹೆಸರಿನ ಮೂಲಕ ತುಳು ತಿಗಳಾರಿ ಎಂಬುದಾಗಿ ಯುನಿಕೋಡ್ ಅಂಗೀಕರಿಸಿದ್ದು, ಇನ್ನು ಮುಂದೆ ತುಳುಲಿಪಿಯಲ್ಲಿಯೇ ಪಠ್ಯಗಳನ್ನು ಓದಬಹುದಾಗಿದೆ. ಸಾಮಾನ್ಯವಾಗಿ ಇಂಗ್ಲಿಷ್, ಕನ್ನಡ ಸೇರಿದಂತೆ ಬೇರೆ ಯಾವ ಭಾಷೆಯಲ್ಲಿ ಶಬ್ದಗಳನ್ನು ಬರೆದರೆ, ಅದನ್ನು ತುಳುವಿನಲ್ಲಿ ಅನುವಾದಿಸುವ ಕೆಲಸವನ್ನು ಈ ಗೂಗಲ್ ಮಾಡುತ್ತದೆ. ಇದೀಗ ತುಳು ಲಿಪಿಯದ್ದೇ ಅಧಿಕೃತ ಫಾಂಟ್ ಕೀಲಿಮಣೆಯಲ್ಲಿ ಲಭ್ಯವಿದ್ದು, ಹೀಗಾಗಿ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಇನ್ನಿತ್ತರ ಡಿಜಿಟಲ್ ವ್ಯವಸ್ಥೆಯಲ್ಲಿ ತುಳುಲಿಪಿಯನ್ನು ಓದುವ ಅವಕಾಶವೊಂದು ದೊರೆತಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ತುಳುವರ ಬಹು ವರ್ಷದ ಕನಸು ಈಡೇರಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ‘ತುಳು ಲಿಪಿಗಿರುವ ಇನ್ನೊಂದು ಹೆಸರಿನ ಜೊತೆಗೆ ತುಳು ತಿಗಳಾರಿ ಎಂಬುದಾಗಿ ಯುನಿಕೋಡ್ ಅಂಗೀಕರಿಸಿದೆ. ಈ ಮೂಲಕ ಜಾಗತಿಕವಾಗಿ ತುಳು ಲಿಪಿಯಲ್ಲಿನ ಪಠ್ಯಗಳು ಓದಲು ತೆರೆದುಕೊಳ್ಳುವ ಅವಕಾಶ ಲಭಿಸಿದೆ. ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನ ಪ್ರಯತ್ನಕ್ಕೆ ಈಗ ಇನ್ನಷ್ಟು ಹೆಚ್ಚಿನ ಮಹತ್ವ ಬಂದಿದೆ’ ಎಂದಿದ್ದಾರೆ.

‘ಎ.ಸಿ. ಭಂಡಾರಿ ಅವರು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದಾಗ ತುಳು ಲಿಪಿಯನ್ನು ಯೂನಿಕೋಡ್‌ನಲ್ಲಿ ಅಳವಡಿಸಲು 2017ರಲ್ಲಿ ವಿಷಯ ಸಮನ್ವಯತೆಗಾಗಿ ತಜ್ಞರ ಸಮಿತಿ ರಚಿಸಿದ್ದರು. ಇದಕ್ಕೆ ಅಕಾಡೆಮಿ ವತಿಯಿಂದ ಸಹಕಾರ ನೀಡಲಾಗಿತ್ತು. ನಂತರ ತಜ್ಞರು ನಿರಂತರವಾಗಿ ಈ ವಿಷಯದ ಬಗ್ಗೆ ಸತತ ಮನವಿಗಳನ್ನು, ಪರಿಷ್ಕರಣೆಗಳನ್ನು ಕಳುಹಿಸಿದ್ದರು. ಅವರೆಲ್ಲರ ಪ್ರಯತ್ನದ ಫಲವಾಗಿ ತುಳು ಲಿಪಿಯನ್ನು ಯುನಿಕೋಡ್ ಅಂಗೀಕರಿಸುವಂತಾಗಿದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಂಡವರಲ್ಲಿ ಮಹಿಳೆಯರಿಗಿಂತ ಪುರುಷರೇ ಅಧಿಕ: ಅಂಕಿಅಂಶದಿಂದ ಬಹಿರಂಗ

‘ತುಳು ಲಿಪಿಯನ್ನು ಯುನಿಕೋಡ್ ಆಗಿ ಅಂಗೀಕರಿಸುವ ನಿಟ್ಟಿನಲ್ಲಿ ತಜ್ಞರಾದ ಕೆ.ಪಿ. ರಾವ್, ಯು.ಬಿ.ಪವನಜ, ವೈಷ್ಣವಿ ಮೂರ್ತಿ, ಎಸ್.ಎ.ಕೃಷ್ಣಯ್ಯ, ರಾಧಕೃಷ್ಣ ಬೆಳ್ಳೂರು, ಭಾಸ್ಕರ್ ಶೇರಿಗಾರ್, ಎಸ್.ಆರ್. ವಿಘ್ನರಾಜ್, ಆಕಾಶ್ ರಾಜ್ ಸೇರಿದಂತೆ ಅನೇಕರು ಕೊಡುಗೆಗಳನ್ನು ನೀಡಿದ್ದಾರೆ. ತುಳು ವಿಕಿಪೀಡಿಯಕ್ಕಾಗಿ ಶ್ರಮಿಸಿದ್ದ ವಿಶ್ವ ಕನ್ನಡ ಸಂಪಾದಕ ಯು.ಬಿ. ಪವನಜ, ‘ಯುನಿಕೋಡ್ ಆವೃತ್ತಿ 16 ರಲ್ಲಿ ತುಳು ಸೇರ್ಪಡೆಯಾಗಿದೆ. ಒಟ್ಟು 80 ಅಕ್ಷರಗಳನ್ನು ಸೇರಿಸಿದ್ದಾರೆ’ ಎಂದು ಹೇಳಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್