AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024 : ಯುಗಾದಿ ಹಬ್ಬಕ್ಕೆ ಸ್ಪೆಷಲ್ ಗೋಧಿ ಹಿಟ್ಟಿನ ಲಡ್ಡು ಮಾಡುವುದು ಹೇಗೆ? ಇಲ್ಲಿದೆ ಸಿಂಪಲ್ ರೆಸಿಪಿ

ಇಂದು ಹಿಂದೂಗಳ ಪಾಲಿಗೆ ಹೊಸ ವರ್ಷ ಅಂದರೆ ಯುಗಾದಿ ಹಬ್ಬ. ಈ ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಗೆಬಗೆಯ ಅಡುಗೆಯ ತಯಾರಿಯಲ್ಲಿ ಮಹಿಳೆಯರು ಬ್ಯುಸಿಯಾಗುತ್ತಾರೆ. ಹೊಸ ವರ್ಷಕ್ಕೆ ಬಾಯನ್ನು ಸಿಹಿಯಾಗಿಸಲು ಸುಲಭವಾಗಿ ಗೋಧಿ ಹಿಟ್ಟಿನ ಲಡ್ಡನ್ನು ಕೆಲವೇ ಕೆಲವು ನಿಮಿಷಗಳಲ್ಲಿ ಮಾಡಿ ಸವಿಯಬಹುದು. ಈ ಸರಳ ರೆಸಿಪಿ ಮಾಡುವ ವಿಧಾನ ಇಲ್ಲಿದೆ.

Ugadi 2024 : ಯುಗಾದಿ ಹಬ್ಬಕ್ಕೆ ಸ್ಪೆಷಲ್ ಗೋಧಿ ಹಿಟ್ಟಿನ ಲಡ್ಡು ಮಾಡುವುದು ಹೇಗೆ? ಇಲ್ಲಿದೆ ಸಿಂಪಲ್ ರೆಸಿಪಿ
ಸಾಯಿನಂದಾ
| Edited By: |

Updated on: Apr 09, 2024 | 11:22 AM

Share

ಹಿಂದೂಗಳ ಪಾಲಿನ ಹೊಸ ವರ್ಷದ ಮೊದಲ ದಿನವಾದ ಯುಗಾದಿ ಹಬ್ಬ ಸಂಭ್ರಮವು ದೇಶದೆಲ್ಲೆಡೆ ಮನೆ ಮಾಡಿದೆ. ಈ ಯುಗಾದಿ ಹಬ್ಬವು ಹೊಸ ಯುಗದ ಆರಂಭವನ್ನು ಸಂಕೇತಿಸುತ್ತದೆ. ಈ ಹಬ್ಬವನ್ನು ವಿವಿಧೆಡೆ ವಿವಿಧ ರೀತಿಯಲ್ಲಿ ಆಚರಣೆ ಮಾಡಲಾಗುತ್ತಿದ್ದು, ಆಚರಣೆಯಲ್ಲಿ ಭಿನ್ನತೆಯಿದ್ದರೂ ಮಹತ್ವವು ಒಂದೇ ಆಗಿದೆ. ಯುಗಾದಿ ಹಬ್ಬ ಎಂದ ಮೇಲೆ ಹಬ್ಬದಡುಗೆ ಮಾಮೂಲಿ. ವಿವಿಧ ಬಗೆಯ ಸಿಹಿತಿಂಡಿಗಳು ಹಾಗೂ ಪಾಯಸವನ್ನು ಮಾಡಿ ಮನೆ ಮಂದಿಯೆಲ್ಲರೂ ಸವಿದು ಸಂಭ್ರಮಿಸುತ್ತಾರೆ.

ಗೋಧಿ ಹಿಟ್ಟಿನ ಲಡ್ಡು ಮಾಡಲು ಬೇಕಾಗುವ ಸಾಮಗ್ರಿಗಳು:

* ಅರ್ಧ ಕಪ್ ತುಪ್ಪ

* ಒಂದು ಕಪ್ ಕಡಲೆ ಹಿಟ್ಟು

* ಒಂದು ಕಪ್ ಗೋಧಿ ಹಿಟ್ಟು

* ಒಂದು ಕಪ್ ಸಕ್ಕರೆ ಪುಡಿ

* ಗೋಡಂಬಿ

* ಏಲಕ್ಕಿ ಪುಡಿ

ಇದನ್ನೂ ಓದಿ: ಇಂದು ಹಿಂದೂ ಧರ್ಮಕ್ಕೆ ಹೊಸ ವರ್ಷದ ಆರಂಭ, ಪ್ರಕೃತಿಯ ನೈಜತೆಗೆ ಯುಗಾದಿ ಸಾಕ್ಷಿ

ಗೋಧಿ ಹಿಟ್ಟಿನ ಲಡ್ಡು ಮಾಡುವ ವಿಧಾನ:

* ಮೊದಲಿಗೆ ಬಾಣಲೆಗೆ ತುಪ್ಪ ಹಾಕಿ ಬಿಸಿ ಮಾಡಿ, ಅದಕ್ಕೆ ಒಂದು ಕಪ್ ಕಡಲೆ ಹಿಟ್ಟು ಹಾಗೂ ಒಂದು ಕಪ್ ಗೋಧಿ ಹಿಟ್ಟು ಸೇರಿಸಿ ಮಧ್ಯಮ ಉರಿಯಲ್ಲಿ ಹುರಿಯಿರಿ.

* ಈ ಮಿಶ್ರಣವು ಕಂದು ಬಣ್ಣ ಬರುವ ತನಕ ಹುರಿದು, ಬೇರೆ ಪಾತ್ರೆಗೆ ವರ್ಗಾಯಿಸಿ ತಣ್ಣಗಾಗಲು ಬಿಡಿ.

* ಆ ಬಳಿಕ ತಣ್ಣಗಾದ ಈ ಮಿಶ್ರಣಕ್ಕೆ ಒಂದು ಕಪ್ ಪುಡಿ ಸಕ್ಕರೆ, ತುಪ್ಪದಲ್ಲಿ ಹುರಿದಿಟ್ಟುಕೊಂಡ ಗೋಡಂಬಿ ಮತ್ತು ಏಲಕ್ಕಿ ಪುಡಿ ಹಾಕಿ ಚೆನ್ನಾಗಿ ಕಲಸಿಕೊಳ್ಳಿ.

* ಕಲಸಿ ಮಿಶ್ರಣದಲ್ಲಿ ಉಂಡೆಗಳನ್ನು ಕಟ್ಟಿದರೆ ರುಚಿಕರವಾದ ಗೋಧಿ ಹಿಟ್ಟಿನ ಲಡ್ಡು ಸವಿಯಲು ಸಿದ್ಧವಾಗಿರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​