AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024 : ಯುಗಾದಿ ಹಬ್ಬಕ್ಕೆ ಸ್ಪೆಷಲ್ ಗೋಧಿ ಹಿಟ್ಟಿನ ಲಡ್ಡು ಮಾಡುವುದು ಹೇಗೆ? ಇಲ್ಲಿದೆ ಸಿಂಪಲ್ ರೆಸಿಪಿ

ಇಂದು ಹಿಂದೂಗಳ ಪಾಲಿಗೆ ಹೊಸ ವರ್ಷ ಅಂದರೆ ಯುಗಾದಿ ಹಬ್ಬ. ಈ ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಗೆಬಗೆಯ ಅಡುಗೆಯ ತಯಾರಿಯಲ್ಲಿ ಮಹಿಳೆಯರು ಬ್ಯುಸಿಯಾಗುತ್ತಾರೆ. ಹೊಸ ವರ್ಷಕ್ಕೆ ಬಾಯನ್ನು ಸಿಹಿಯಾಗಿಸಲು ಸುಲಭವಾಗಿ ಗೋಧಿ ಹಿಟ್ಟಿನ ಲಡ್ಡನ್ನು ಕೆಲವೇ ಕೆಲವು ನಿಮಿಷಗಳಲ್ಲಿ ಮಾಡಿ ಸವಿಯಬಹುದು. ಈ ಸರಳ ರೆಸಿಪಿ ಮಾಡುವ ವಿಧಾನ ಇಲ್ಲಿದೆ.

Ugadi 2024 : ಯುಗಾದಿ ಹಬ್ಬಕ್ಕೆ ಸ್ಪೆಷಲ್ ಗೋಧಿ ಹಿಟ್ಟಿನ ಲಡ್ಡು ಮಾಡುವುದು ಹೇಗೆ? ಇಲ್ಲಿದೆ ಸಿಂಪಲ್ ರೆಸಿಪಿ
ಸಾಯಿನಂದಾ
| Edited By: |

Updated on: Apr 09, 2024 | 11:22 AM

Share

ಹಿಂದೂಗಳ ಪಾಲಿನ ಹೊಸ ವರ್ಷದ ಮೊದಲ ದಿನವಾದ ಯುಗಾದಿ ಹಬ್ಬ ಸಂಭ್ರಮವು ದೇಶದೆಲ್ಲೆಡೆ ಮನೆ ಮಾಡಿದೆ. ಈ ಯುಗಾದಿ ಹಬ್ಬವು ಹೊಸ ಯುಗದ ಆರಂಭವನ್ನು ಸಂಕೇತಿಸುತ್ತದೆ. ಈ ಹಬ್ಬವನ್ನು ವಿವಿಧೆಡೆ ವಿವಿಧ ರೀತಿಯಲ್ಲಿ ಆಚರಣೆ ಮಾಡಲಾಗುತ್ತಿದ್ದು, ಆಚರಣೆಯಲ್ಲಿ ಭಿನ್ನತೆಯಿದ್ದರೂ ಮಹತ್ವವು ಒಂದೇ ಆಗಿದೆ. ಯುಗಾದಿ ಹಬ್ಬ ಎಂದ ಮೇಲೆ ಹಬ್ಬದಡುಗೆ ಮಾಮೂಲಿ. ವಿವಿಧ ಬಗೆಯ ಸಿಹಿತಿಂಡಿಗಳು ಹಾಗೂ ಪಾಯಸವನ್ನು ಮಾಡಿ ಮನೆ ಮಂದಿಯೆಲ್ಲರೂ ಸವಿದು ಸಂಭ್ರಮಿಸುತ್ತಾರೆ.

ಗೋಧಿ ಹಿಟ್ಟಿನ ಲಡ್ಡು ಮಾಡಲು ಬೇಕಾಗುವ ಸಾಮಗ್ರಿಗಳು:

* ಅರ್ಧ ಕಪ್ ತುಪ್ಪ

* ಒಂದು ಕಪ್ ಕಡಲೆ ಹಿಟ್ಟು

* ಒಂದು ಕಪ್ ಗೋಧಿ ಹಿಟ್ಟು

* ಒಂದು ಕಪ್ ಸಕ್ಕರೆ ಪುಡಿ

* ಗೋಡಂಬಿ

* ಏಲಕ್ಕಿ ಪುಡಿ

ಇದನ್ನೂ ಓದಿ: ಇಂದು ಹಿಂದೂ ಧರ್ಮಕ್ಕೆ ಹೊಸ ವರ್ಷದ ಆರಂಭ, ಪ್ರಕೃತಿಯ ನೈಜತೆಗೆ ಯುಗಾದಿ ಸಾಕ್ಷಿ

ಗೋಧಿ ಹಿಟ್ಟಿನ ಲಡ್ಡು ಮಾಡುವ ವಿಧಾನ:

* ಮೊದಲಿಗೆ ಬಾಣಲೆಗೆ ತುಪ್ಪ ಹಾಕಿ ಬಿಸಿ ಮಾಡಿ, ಅದಕ್ಕೆ ಒಂದು ಕಪ್ ಕಡಲೆ ಹಿಟ್ಟು ಹಾಗೂ ಒಂದು ಕಪ್ ಗೋಧಿ ಹಿಟ್ಟು ಸೇರಿಸಿ ಮಧ್ಯಮ ಉರಿಯಲ್ಲಿ ಹುರಿಯಿರಿ.

* ಈ ಮಿಶ್ರಣವು ಕಂದು ಬಣ್ಣ ಬರುವ ತನಕ ಹುರಿದು, ಬೇರೆ ಪಾತ್ರೆಗೆ ವರ್ಗಾಯಿಸಿ ತಣ್ಣಗಾಗಲು ಬಿಡಿ.

* ಆ ಬಳಿಕ ತಣ್ಣಗಾದ ಈ ಮಿಶ್ರಣಕ್ಕೆ ಒಂದು ಕಪ್ ಪುಡಿ ಸಕ್ಕರೆ, ತುಪ್ಪದಲ್ಲಿ ಹುರಿದಿಟ್ಟುಕೊಂಡ ಗೋಡಂಬಿ ಮತ್ತು ಏಲಕ್ಕಿ ಪುಡಿ ಹಾಕಿ ಚೆನ್ನಾಗಿ ಕಲಸಿಕೊಳ್ಳಿ.

* ಕಲಸಿ ಮಿಶ್ರಣದಲ್ಲಿ ಉಂಡೆಗಳನ್ನು ಕಟ್ಟಿದರೆ ರುಚಿಕರವಾದ ಗೋಧಿ ಹಿಟ್ಟಿನ ಲಡ್ಡು ಸವಿಯಲು ಸಿದ್ಧವಾಗಿರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು