AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2026: ಯುಗಾದಿ ಹಬ್ಬದ ಸಂಭ್ರಮ; ನಿಮ್ಮ ಪ್ರೀತಿಪಾತ್ರರಿಗೆ ಶುಭಾಶಯಗಳನ್ನು ತಿಳಿಸಲು ಇಲ್ಲಿವೆ ಸಂದೇಶ

ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ ತರುತಿದೆ. ನಾಡಿನೆಲ್ಲೆಡೆ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ ನಿಮ್ಮ ಕುಟುಂಬಸ್ಥರು ಸ್ನೇಹಿತರಿಗೆ ಹಬ್ಬದ ಶುಭಾಶಯಗಳು ತಿಳಿಸಲು ಬಯಸಿದರೆ ನಿಮಗಾಗಿ ಇಲ್ಲಿದೆ ಅರ್ಥಪೂರ್ಣ ಶುಭ ಸಂದೇಶಗಳು.

Ugadi 2026: ಯುಗಾದಿ ಹಬ್ಬದ ಸಂಭ್ರಮ; ನಿಮ್ಮ ಪ್ರೀತಿಪಾತ್ರರಿಗೆ ಶುಭಾಶಯಗಳನ್ನು ತಿಳಿಸಲು ಇಲ್ಲಿವೆ ಸಂದೇಶ
ಯುಗಾದಿ ಹಬ್ಬದ ಶುಭಾಶಯಗಳುImage Credit source: png magic
ಮಾಲಾಶ್ರೀ ಅಂಚನ್​
|

Updated on: Mar 19, 2026 | 8:47 AM

Share

ನಾಡಿನೆಲ್ಲೆಡೆ ಯುಗಾದಿ (Ugadi) ಹಬ್ಬದ ಸಂಭ್ರಮ, ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ. ಯುಗಾದಿ ಹಬ್ಬ ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ.  ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ಹಬ್ಬದ ದಿನ ಹೊಸ ಬಟ್ಟೆ ತೊಟ್ಟು, ಮನೆಯನ್ನು ತಳಿರು ತೋರಣ, ರಂಗೋಲಿಗಳಿಂದ ಅಲಂಕರಿಸಿ, ಪ್ರತಿಯೊಬ್ಬರೂ ಬೇವು ಬೆಲ್ಲವನ್ನು ಹಂಚುತ್ತಾರೆ.ಇಂತಹ ಸಂಭ್ರಮದ ಗಳಿಗೆಯಲ್ಲಿ ನಿಮ್ಮ ಪ್ರೀತಿಪಾತ್ರರಿಗೆ ಮನಸಾರೆ ಹಬ್ಬದ ಶುಭಾಶಯಗಳನ್ನು ಕೋರಲು ಬಯಸಿದರೆ ನಿಮಗಾಗಿ ಇಲ್ಲಿದೆ ಅರ್ಥಪೂರ್ಣ ಸಂದೇಶಗಳು.

ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಹಬ್ಬದ ಶುಭಾಶಯಗಳನ್ನು ತಿಳಿಸಿ:

  • ಹೊಸತನವ ಹೊತ್ತು ಯುಗಾದಿ ಬಂದಿದೆ, ಈ ಯುಗಾದಿ ಎಲ್ಲರ ಬಾಳಲ್ಲಿ ಹೊಸ ಹರ್ಷ ತರಲಿ, ಬದುಕಿನಲ್ಲಿ ನೆಮ್ಮದಿ ಇರುವಂತೆ ಮಾಡಲಿ… ಯುಗಾದಿ ಹಬ್ಬದ ಶುಭಾಶಯಗಳು.
  • ಬದುಕು ಎಂದ ಮೇಲೆ ಸಿಹಿ, ಕಹಿಗಳು ಸಾಮಾನ್ಯ, ಬೇವು ಬೆಲ್ಲದ ಸಮ್ಮಿಳಿತವೇ ನಮ್ಮ ಜೀವನ, ಸಿಹಿಗೆ ಹಿಗ್ಗದೆ, ಕಹಿಗೆ ಜಗ್ಗದೆ ಬದುಕು ಮುನ್ನಡೆಸೋಣ, ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು.
  • ಬೇವು ಬೆಲ್ಲ ಸವಿಯುತ್ತ ಕಹಿ ನೆನಪು ಮರೆಯುತ, ಸಿಹಿ ನೆನಪು ಚಿಗುರಲಿ, ನೀವು ಕಂಡ ಕನಸುಗಳೆಲ್ಲಾ ನನಸಾಗಲಿ, ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
  • ಹೊಸ ವರ್ಷವು ನಿಮ್ಮೆಲ್ಲಾ ಕನಸುಗಳನ್ನು ನನಸು ಮಾಡಲಿ, ಶಾಂತಿ, ಸಮೃದ್ಧಿ, ಸಂತೋಷ ತರಲಿ. ಯುಗಾದಿ ಹಬ್ಬದ ಶುಭಾಶಯಗಳು.
  • ಬೇವು ಬೆಲ್ಲದಂತೆ ನೋವು-ನಲಿವು ಬೆರೆಯಲಿ, ಸುಖ, ಶಾಂತಿ, ಸಂತೋಷ ತುಂಬಿದ ಬದುಕು ನಿಮ್ಮದಾಗಲಿ, ಹೊಸ ವರ್ಷದ ಶುಭಾಶಯಗಳು.
  • ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ… ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ… ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು.
  • ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲಿ ನೀವು ಕಂಡ ಕನಸು ನನಸಾಗಲಿ, ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
  • ಬದುಕಿನ ಕಷ್ಟಗಳೆಂಬ ಕಹಿ ದೂರವಾಗಲಿ, ಬರೀ ಖುಷಿ ಸಿಹಿಯಷ್ಟೇ ತುಂಬಿರಲಿ. ಎಲ್ಲರಿಗೂ ಹೊಸ ಸಂವತ್ಸರದ ಹಾರ್ದಿಕ ಶುಭಾಶಯಗಳು.
  • ಕಹಿಯಾದ ಬೇವಿನ ಅಂಚಿನಲ್ಲಿ ಬೆಲ್ಲದ ಸಿಂಚನ ಸಿಗಲಿ, ನಿಮ್ಮ ಬಾಳಲ್ಲಿ ಹೊಸ ಚೇತನ, ಉತ್ಸಾಹ, ನೆಮ್ಮದಿ ಇರಲಿ ಯುಗಾದಿ ಹಬ್ಬದ ಶುಭಾಶಯಗಳು. ಯುಗಾದಿ ಹಬ್ಬದ ಸಂಭ್ರಮದಲ್ಲಿ ನೋವೆಲ್ಲಾ ಬತ್ತು ಹೋಗಲಿ, ನಿಮ್ಮೆಲ್ಲರ ಬಾಳಲ್ಲಿ ಸಂತೋಷ ಚಿಮ್ಮಲಿ, ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
  • ಹಳೆಯ ನೋವನ್ನೆಲ್ಲಾ ಮರೆಸಿ, ಹೊಸ ಆಶಯಗಳ ಕೊಟ್ಟು ಎಲ್ಲರಿಗೂ ಶುಭವ ತರಲಿ ಯುಗಾದಿ, ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು.
  • ಯುಗಾದಿಯ ಹೊಸ ಬೆಳಕು ನಿಮ್ಮ ಜೀವನದಲ್ಲಿ ಶಾಂತಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ನಿಮಗೂ ನಿಮ್ಮ ಕುಟುಂಬಕ್ಕೂ ಯುಗಾದಿ ಹಬ್ಬದ ಶುಭಾಶಯಗಳು.
  • ಬೇವು ಬೆಲ್ಲ ತಿಂದು ಒಳ್ಳೆ ಮಾತಾಡಿ. ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
  • ಬೇವು ಬೆಲ್ಲದಂತೆ ಜೀವನದಲ್ಲಿ ಬರುವ ಕಹಿ, ಸಿಹಿಗಳನ್ನು ಸಮನಾಗಿ ಸ್ವೀಕರಿಸೋಣ, ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು.
  • ನಿಮ್ಮ ಬಾಳಲ್ಲಿ ಬೇವಿನ ಕಹಿಗಿಂತ ಬೆಲ್ಲದ ಸಿಹಿಯೇ ಹೆಚ್ಚಾಗಲಿ. ಸುಖ, ಶಾಂತಿ, ಸಮೃದ್ಧಿ, ಯಶಸ್ಸು ನಿಮ್ಮ ಜೀವನದಲ್ಲಿ ಹೆಚ್ಚಾಗಲಿ. ಯುಗಾದಿಯ ಶುಭಾಶಯಗಳು.
  • ಯುಗಾದಿಯ ಸೂರ್ಯನ ಬೆಳಕು ಅಂಧಕಾರವನ್ನು ಹೋಗಲಾಡಿಸಿ, ನಿಮಗೆ ಉಜ್ವಲ ಭವಿಷ್ಯದ ಹಾದಿಯನ್ನು ಬೆಳಗಿಸಲಿ, ಯುಗಾದಿ ಹಬ್ಬದ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್
ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್
ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ
ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?
ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ
ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!