AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024 : ಯುಗಾದಿ ಹಬ್ಬಕ್ಕೆ ಮನೆಯನ್ನು ಸಾಂಪ್ರದಾಯಿಕವಾಗಿ ಅಲಂಕರಿಸುವುದು ಹೇಗೆ?

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ. ಕಣ್ಣು ಮುಚ್ಚಿ ತೆರೆಳುವುದರೊಳಗೆ ಯುಗಾದಿ ಹಬ್ಬಕ್ಕೆ ಬಂದೆ ಬಿಟ್ಟಿತು. ಈ ಹಬ್ಬವನ್ನು ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ವಿಜೃಂಭಣೆಯ ಹಬ್ಬವಾಗಿದೆ. ಯುಗಾದಿಯಂದು ಸಾಂಪ್ರದಾಯಿಕವಾಗಿ ಮನೆಯನ್ನು ಸಿಂಗರಿಸಿದರೆ ಹಬ್ಬದ ಕಳೆಯು ಬರುತ್ತದೆ. ಹಬ್ಬದ ದಿನ ಮನೆಯ ಅಲಂಕಾರಕ್ಕಾಗಿ ಸರಳ ಸಲಹೆಗಳು * ಮನೆಯ ಮುಂಭಾಗದಲ್ಲಿ ರಂಗೋಲಿಯಿರಲಿ : ಹಬ್ಬದ ರಂಗು ಹೆಚ್ಚಿಸುವುದೇ ಬಣ್ಣ ಬಣ್ಣದ ರಂಗೋಲಿಗಳು. ಆಕರ್ಷಕವಾಗಿ ರಂಗೋಲಿ ಬಿಡಿಸುವುದು ಬರುವುದಿಲ್ಲ ಎಂದಾದರೆ ಫ್ಲೋರ್ ಆರ್ಟ್ ಸ್ಟೆನ್ಸಿಲ್ ಗಳನ್ನು ಖರೀದಿಸಿ […]

Ugadi 2024 : ಯುಗಾದಿ ಹಬ್ಬಕ್ಕೆ ಮನೆಯನ್ನು ಸಾಂಪ್ರದಾಯಿಕವಾಗಿ ಅಲಂಕರಿಸುವುದು ಹೇಗೆ?
TV9 Web
| Edited By: |

Updated on: Apr 06, 2024 | 6:02 PM

Share

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ. ಕಣ್ಣು ಮುಚ್ಚಿ ತೆರೆಳುವುದರೊಳಗೆ ಯುಗಾದಿ ಹಬ್ಬಕ್ಕೆ ಬಂದೆ ಬಿಟ್ಟಿತು. ಈ ಹಬ್ಬವನ್ನು ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ವಿಜೃಂಭಣೆಯ ಹಬ್ಬವಾಗಿದೆ. ಯುಗಾದಿಯಂದು ಸಾಂಪ್ರದಾಯಿಕವಾಗಿ ಮನೆಯನ್ನು ಸಿಂಗರಿಸಿದರೆ ಹಬ್ಬದ ಕಳೆಯು ಬರುತ್ತದೆ.

ಹಬ್ಬದ ದಿನ ಮನೆಯ ಅಲಂಕಾರಕ್ಕಾಗಿ ಸರಳ ಸಲಹೆಗಳು

* ಮನೆಯ ಮುಂಭಾಗದಲ್ಲಿ ರಂಗೋಲಿಯಿರಲಿ : ಹಬ್ಬದ ರಂಗು ಹೆಚ್ಚಿಸುವುದೇ ಬಣ್ಣ ಬಣ್ಣದ ರಂಗೋಲಿಗಳು. ಆಕರ್ಷಕವಾಗಿ ರಂಗೋಲಿ ಬಿಡಿಸುವುದು ಬರುವುದಿಲ್ಲ ಎಂದಾದರೆ ಫ್ಲೋರ್ ಆರ್ಟ್ ಸ್ಟೆನ್ಸಿಲ್ ಗಳನ್ನು ಖರೀದಿಸಿ ಅದಕ್ಕೆ ಬಣ್ಣ ತುಂಬಿದರೆ ಮನೆಯ ಮುಂಭಾಗದಲ್ಲಿ ಸುಂದರವಾದ ರಂಗೋಲಿ ಸಿದ್ಧವಾಗುತ್ತದೆ.

* ಅಲಂಕಾರಕ್ಕಾಗಿ ಮಾವಿನ ಎಲೆ ಮತ್ತು ಬೇವಿನ ಎಲೆಗಳನ್ನು ಬಳಸಿ: ಹೊಸ ವರ್ಷದ ಮೊದಲ ಹಬ್ಬ ಯುಗಾದಿಗೆ ಪ್ರಕೃತಿಯು ಸಜ್ಜಾಗಿರುತ್ತದೆ. ಹೀಗಾಗಿ ಹೊಸ ವರ್ಷಕ್ಕೆ ಮನೆಯ ಬಾಗಿಲಿಗೆ ಮಾವಿನೆಲೆ ತೋರಣ, ಬೇವಿನಎಲೆಯ ಅಲಂಕಾರ ಮಾಡುವುದು ಒಳ್ಳೆಯದು.

* ಬಾಳೆ ಎಲೆಗಳಿಂದ ಅಲಂಕಾರ ಮಾಡಿ: ಸರಳವಾಗಿ ಅಲಂಕಾರವನ್ನು ಇಷ್ಟ ಪಡುವವರು ಈ ಬಾಳೆ ಎಲೆಯನ್ನು ಬಳಸಬಹುದು. ಬಾಳೆ ಎಲೆಗಳಿಂದ ಮನೆಯ ಮುಖ್ಯದ್ವಾರವನ್ನು ಅಲಂಕರಿಸಬಹುದು. ಇಲ್ಲದಿದ್ದರೆ ಮನೆಯ ಮುಂಭಾಗದಲ್ಲಿ ಬಾಳೆಗಿಡಗಳನ್ನು ನೆಟ್ಟರೆ ಹಬ್ಬದ ಕಳೆಯು ತುಂಬಿ ತುಳುಕುತ್ತದೆ.

ಇದನ್ನೂ ಓದಿ: ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವೇನು? ಈ ತಪ್ಪು ಮಾಡಬೇಡಿ

* ಮನೆಯನ್ನು ಹೂವುಗಳಿಂದ ಕೂಡ ಅಲಂಕರಿಸಿ : ಮನೆಯ ಮುಖ್ಯ ಬಾಗಿಲು ಮತ್ತು ಪೂಜಾ ಕೋಣೆಯನ್ನು ಅಲಂಕರಿಸಲು ತಾಜಾ ಹೂವುಗಳನ್ನು ಬಳಸಿದರೆ ಉತ್ತಮ. ಆ ಹೂವುಗಳಿಗೆ ದೀಪಾಲಂಕಾರ ಮಾಡಿದರೆ ಸೌಂದರ್ಯವನ್ನು ಹೆಚ್ಚಿಸಬಹುದು. ಈ ರೀತಿಯ ಅಲಂಕಾರವು ಮನೆಯಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ