Aadhaar Link: ಆಧಾರ್ ಲಿಂಕ್ ಮಾಡುವ ಸೌಲಭ್ಯದಲ್ಲಿ ಯಾವುದೇ ಅಡಚಣೆಯಿಲ್ಲ; ಯುಐಡಿಎಐ ಸ್ಪಷ್ಟನೆ

ಆಧಾರ್ ಕಾರ್ಡ್ ಜೊತೆ ಇಪಿಎಫ್​ ಮತ್ತು ಪ್ಯಾನ್ ಲಿಂಕ್ ಮಾಡಲು ಇಂದು ಕೊನೆಯ ದಿನ. ಆಧಾರ್- ಪ್ಯಾನ್ ಅಥವಾ ಇಪಿಎಫ್​ಒ ಲಿಂಕ್ ಮಾಡುವ ಸೌಲಭ್ಯದಲ್ಲಿ ಯಾವುದೇ ಅಡಚಣೆಗಳಿಲ್ಲ ಎಂದು ಯುಐಡಿಎಐ ಹೇಳಿದೆ.

Aadhaar Link: ಆಧಾರ್ ಲಿಂಕ್ ಮಾಡುವ ಸೌಲಭ್ಯದಲ್ಲಿ ಯಾವುದೇ ಅಡಚಣೆಯಿಲ್ಲ; ಯುಐಡಿಎಐ ಸ್ಪಷ್ಟನೆ
Aadhaar card
Follow us
| Updated By: ಸುಷ್ಮಾ ಚಕ್ರೆ

Updated on: Aug 31, 2021 | 5:34 PM

ನವದೆಹಲಿ: ಆಧಾರ್ (Aadhaar Card)- ಪ್ಯಾನ್ (PAN Card) ಅಥವಾ ಇಪಿಎಫ್​ಒ (EPFO) ಲಿಂಕ್ ಮಾಡುವ ಸೌಲಭ್ಯದಲ್ಲಿ ಯಾವುದೇ ಅಡಚಣೆಗಳಿಲ್ಲ ಎಂದು ಯುಐಡಿಎಐ (UIDAI) ಹೇಳಿದೆ. ಆಧಾರ್ ಸೇವೆಗಳು ಸ್ಥಿರವಾಗಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಪ್ರಮಾಣೀಕರಣ ಆಧಾರಿತ ಸೌಲಭ್ಯವಾದ ಪ್ಯಾನ್ ಅಥವಾ ಇಪಿಎಫ್​ಒ ಲಿಂಕ್ ಮಾಡುವ ಸೌಲಭ್ಯದಲ್ಲಿ ಯಾವ ಅಡಚಣೆಯೂ ಇಲ್ಲ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ತಿಳಿಸಿದೆ.

ಕಳೆದೊಂದು ವಾರದಿಂದ ಹಂತಹಂತವಾಗಿ ಅಗತ್ಯ ಭದ್ರತೆಗೆ ಸಂಬಂಧಿಸಿದ ನವೀಕರಣಗಳನ್ನು ಮಾಡುತ್ತಿರುವುದರಿಂದ ಕೆಲವು ನೋಂದಣಿ ಅಥವಾ ನವೀಕರಣ ಕೇಂದ್ರಗಳಲ್ಲಿ ನೋಂದಣಿ ಮತ್ತು ಮೊಬೈಲ್ ನವೀಕರಣ ಸೇವಾ ಸೌಲಭ್ಯದಲ್ಲಿ ಮಾತ್ರ ಕೆಲವು ಮಧ್ಯಂತರ ಸೇವಾ ಅಡಚಣೆಗಳು ವರದಿಯಾಗಿತ್ತು. ಈಗ ಇದು ಕೂಡ ಉತ್ತಮವಾಗಿಯೇ ಕಾರ್ಯ ನಿರ್ವಹಿಸುತ್ತಿದೆ ಎಂದು ಯುಐಡಿಎಐ ಮಾಹಿತಿ ನೀಡಿದೆ.

2021ರ ಆಗಸ್ಟ್ 20ರಂದು ಉನ್ನತೀಕರಣ ಪ್ರಕ್ರಿಯೆಯ ಆರಂಭದಿಂದ ಕಳೆದ 9 ದಿನಗಳಲ್ಲಿ 51 ಲಕ್ಷಕ್ಕೂ ಅಧಿಕ ನಿವಾಸಿಗಳು (ದಿನಕ್ಕೆ ಸರಾಸರಿ 5.68 ಲಕ್ಷ ನಿವಾಸಿಗಳು) ನೋಂದಾಯಿಸಿಕೊಂಡಿದ್ದಾರೆ. ಪ್ಯಾನ್ ಅಥವಾ ಇಪಿಎಫ್​ಒ ಜೊತೆಗೆ ಆಧಾರ್ ಲಿಂಕ್ ಮಾಡುವಲ್ಲಿ ಯುಐಡಿಎಐ ಸಿಸ್ಟಂ ಸ್ಥಗಿತವಾಗಿದೆ ಎಂಬ ವದಂತಿ ಸುಳ್ಳು ಎಂದು ಯುಐಡಿಎಐ ಖಚಿತಪಡಿಸಿದೆ.

ಆಧಾರ್ ಕಾರ್ಡ್ ಜೊತೆ ಇಪಿಎಫ್​ ಮತ್ತು ಪ್ಯಾನ್ ಲಿಂಕ್ ಮಾಡಲು ಇಂದು ಕೊನೆಯ ದಿನ. ಲಿಂಕ್ ಮಾಡದಿದ್ದರೆ ಪಿಎಫ್​ ಖಾತೆಗೆ ನೀವು ಲಾಗಿನ್ ಆಗಲು ಕಷ್ಟವಾಗುತ್ತದೆ. ನಿಗದಿತ ಅವಧಿಯೊಳಗೆ ಯಾರಾದರೂ ತನ್ನ ಪ್ಯಾನ್ ಅನ್ನು ಆಧಾರ್ ಜೊತೆಗೆ ಲಿಂಕ್ ಮಾಡದಿದ್ದರೆ, ಆತ ಭಾರೀ ದಂಡವನ್ನು ಪಾವತಿಸಬೇಕಾಗಬಹುದು. ಪ್ಯಾನ್ ಕಾರ್ಡ್‌ನೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದೇ ಹೋದರೆ, ಪ್ಯಾನ್ ಕಾರ್ಡ್ ಬಳಸಲು ಸಾಧ್ಯವಾಗುವುದಿಲ್ಲ. ಯಾಕಂದರೆ ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ. ಬ್ಯಾಂಕ್ ಖಾತೆ ತೆರೆಯುವಾಗ, ಯಾವುದೇ ಸರ್ಕಾರಿ ಯೋಜನೆಯ ಲಾಭವನ್ನು ಪಡೆದುಕೊಳ್ಳುವಾಗ ಇದರಿಂದ ಸಮಸ್ಯೆಗಳು ಎದುರಾಗುತ್ತವೆ.

ಇದನ್ನೂ ಓದಿ: LIC Aadhar Shila Plan: ಎಲ್​ಐಸಿ ಆಧಾರ್ ಶಿಲಾ ಯೋಜನೆಗೆ ದಿನಕ್ಕೆ ರೂ. 29ರಂತೆ ಉಳಿಸಿ, 4 ಲಕ್ಷ ರೂ. ಪಡೆಯಿರಿ

PF- Aadhaar Seeding: ಸೆಪ್ಟೆಂಬರ್​ 1ರಿಂದ ಪಿಎಫ್​- ಆಧಾರ್ ಜೋಡಣೆ ಕಡ್ಡಾಯ; ಆನ್​ಲೈನ್ ಪ್ರಕ್ರಿಯೆ ಹೇಗೆ?

(UIDAI said all the Services are Stable to Aaadhaar Link with EPFO and PAN)

ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ