AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮನಸ್ಸು ಮಾರಾಟಕ್ಕಿಲ್ಲ, ಸಂಬಂಧದಲ್ಲಿ ಭಾವುಕತೆ ಇರಲಿ, ಭಾವನೆಗಳ ನಿಂದನೆ ಇದ್ದರೆ ಆ ಸಂಬಂಧಗಳಿಂದ ಹೊರಬನ್ನಿ

ಯಾವುದೇ ಸಂಬಂಧವಿರಲಿ ಅದಕ್ಕೆ ಅದರದ್ದೇ ಆದ ಗೌರವವಿದೆ. ಸಂಬಂಧದಲ್ಲಿ ಭಾವುಕತೆ ಇದ್ದಾಗ, ಒಬ್ಬರ ಕಷ್ಟವನ್ನು ಅರ್ಥಮಾಡಿಕೊಂಡಾಗ ಜೀವನ ನಡೆಸುವುದು ಸುಲಭ.

ನಿಮ್ಮ ಮನಸ್ಸು ಮಾರಾಟಕ್ಕಿಲ್ಲ, ಸಂಬಂಧದಲ್ಲಿ ಭಾವುಕತೆ ಇರಲಿ, ಭಾವನೆಗಳ ನಿಂದನೆ ಇದ್ದರೆ ಆ ಸಂಬಂಧಗಳಿಂದ ಹೊರಬನ್ನಿ
ಸಂಬಂಧImage Credit source: Healthshots.com
ನಯನಾ ರಾಜೀವ್
|

Updated on: Jul 28, 2023 | 9:00 AM

Share

ಯಾವುದೇ ಸಂಬಂಧ(Relationship)ವಿರಲಿ ಅದಕ್ಕೆ ಅದರದ್ದೇ ಆದ ಗೌರವವಿದೆ. ಸಂಬಂಧದಲ್ಲಿ ಭಾವುಕತೆ ಇದ್ದಾಗ, ಒಬ್ಬರ ಕಷ್ಟವನ್ನು ಅರ್ಥಮಾಡಿಕೊಂಡಾಗ ಜೀವನ ನಡೆಸುವುದು ಸುಲಭ. ಆದರೆ ಭಾವನೆಗಳ ನಿಂದನೆಯಾದಲ್ಲಿ ಪದೇ ಪದೇ ನಿಮ್ಮ ಭಾವನೆಗಳಿಗೆ ಘಾಸಿ ಉಂಟಾಗುತ್ತಿದ್ದರೆ ನೀವು ಆ ಸಂಬಂಧದಿಂದ ಹೊರ ಬರುವುದೇ ಉತ್ತಮ.

ಸಂಬಂಧದಲ್ಲಿ ಗ್ಯಾಸ್​ಲೈಟಿಂಗ್ ಎನ್ನುವುದು ಮಾನಸಿಕ ನಿಂದನೆಯ ಒಂದು ರೂಪವನ್ನು ಸೂಚಿಸುತ್ತದೆ. ಗ್ಯಾಸ್‌ಲೈಟಿಂಗ್” ಎಂಬ ಪದವು “ಗ್ಯಾಸ್ ಲೈಟ್” ಎಂಬ ನಾಟಕ ಮತ್ತು ಚಲನಚಿತ್ರದಿಂದ ಬಂದಿದೆ, ಅಲ್ಲಿ ಪತಿ ತನ್ನ ಹೆಂಡತಿಯನ್ನು ಮೋಸಗೊಳಿಸಲು ವಿಭಿನ್ನ ವಿಧಾನಗಳನ್ನು ಬಳಸುತ್ತಾನೆ.

ಈ ಹಿಂದೆ ಹೇಳಿದ್ದನ್ನು ಹೇಳಿಯೇ ಇಲ್ಲ ಎಂದು ನಿರೂಪಿಸುವುದು ತಪ್ಪು ಮಾಡಿದವರು ಇನ್ನೊಬ್ಬ ವ್ಯಕ್ತಿ ನೆನಪಿನ ಶಕ್ತಿ ಕಳೆದುಕೊಂಡಿದ್ದಾರೆ, ಆ ರೀತಿ ನಾನು ಹೇಳಿಯೇ ಇಲ್ಲ, ಅಥವಾ ನೀನು ತಿಳಿದುಕೊಂಡಿರುವುದೇ ತಪ್ಪು ಎಂದು ಬಿಂಬಿಸಲು ಮುಂದಾಗುತ್ತಾರೆ.

ಮತ್ತೊಬ್ಬರನ್ನು ದೂಷಿಸುವುದು ನಿನ್ನಿಂದಾಗಿಯೇ ನಮ್ಮ ಸಂಬಂಧ ಹಾಳಾಗಿದೆ, ನೀನು ನಡೆಸುಕೊಂಡ ರೀತಿಯೇ ಸರಿಯಾಗಿಲ್ಲ ಎಂದು ಹೇಳುತ್ತಾ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಮನಸ್ಸು ಮಾಡುವುದೇ ಇಲ್ಲ.

ಭಾವನೆಗಳಿಗೆ ಪ್ರಾಮುಖ್ಯತೆ ಕೊಡದೇ ಇರುವುದು ಭಾವನೆಗಳಿಗೆ ಪ್ರಾಮುಖ್ಯತೆ ಕೊಡದೇ ಇರುವುದು, ಕಾಳಜಿ ತೋರದೆ ಇರುವುದು, ಎಲ್ಲಾ ಮಾತನ್ನು ಇಷ್ಟೆ ಎಂದು ಭಾವಿಸುವುದು, ಬೇರೆಯವರ ಭಾವನೆಗಳು ನಿಷ್ಪ್ರಯೋಜಕ ಎಂದು ಭಾವಿಸುತ್ತಿದ್ದರೆ ನೀವು ಅವರೊಂದಿಗೆ ಇದ್ದು ಯಾವುದೇ ಪ್ರಯೋಜನವಿಲ್ಲ.

ಅಸಭ್ಯ ಭಾಷೆ ಬಳಕೆ ಪದೇ ಪದೇ ನಿಮ್ಮ ಭಾವನೆಗಳಿಗೆ ನೋವುಂಟು ಮಾಡುವುದು, ಅಸಭ್ಯವಾದ ಭಾಷೆಯನ್ನು ಬಳಸುವುದು, ಯಾವುದೇ ಕಲ್ಪನೆಯ ಅಪಹಾಸ್ಯ ಮಾಡುವುದರಿಂದ ಆತ್ಮವಿಶ್ವಾಸ ಕುಸಿಯುತ್ತದೆ.

ಸತ್ಯವನ್ನು ತಿರುಚುವುದು ನಿಮ್ಮ ಭಾವನೆಗಳಿಗೆ ಬೆಲೆ ಕೊಡದೇ ಇರುವವರು ಸತ್ಯವನ್ನು ತಿರುಚುವ ಕೆಲಸ ಮಾಡುತ್ತಾರೆ, ಗೊಂದಲವನ್ನು ಸೃಷ್ಟಿಸುತ್ತಾರೆ, ನಿಮ್ಮನ್ನು ಒಂಟಿಯಾಗಿರಲು ಬಿಡುವುದು, ತಮ್ಮ ಸಂಬಂಧವನ್ನು ಮತ್ತಷ್ಟು ದುರ್ಬಲವಾಗಲು ಬಿಟ್ಟುಬಿಡುತ್ತಾರೆ. ಪದೇ ಪದೇ ಅನುಚಿತವಾಗಿ ವರ್ತಿಸಿ ಮತ್ತೆ ನಿಮಗೆ ಹತ್ತಿರವಾಗಲು ಬಯಸಿದವರಿಂದ ದೂರ ಇರುವುದೇ ಒಳಿತು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!