AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮನಸ್ಸು ಮಾರಾಟಕ್ಕಿಲ್ಲ, ಸಂಬಂಧದಲ್ಲಿ ಭಾವುಕತೆ ಇರಲಿ, ಭಾವನೆಗಳ ನಿಂದನೆ ಇದ್ದರೆ ಆ ಸಂಬಂಧಗಳಿಂದ ಹೊರಬನ್ನಿ

ಯಾವುದೇ ಸಂಬಂಧವಿರಲಿ ಅದಕ್ಕೆ ಅದರದ್ದೇ ಆದ ಗೌರವವಿದೆ. ಸಂಬಂಧದಲ್ಲಿ ಭಾವುಕತೆ ಇದ್ದಾಗ, ಒಬ್ಬರ ಕಷ್ಟವನ್ನು ಅರ್ಥಮಾಡಿಕೊಂಡಾಗ ಜೀವನ ನಡೆಸುವುದು ಸುಲಭ.

ನಿಮ್ಮ ಮನಸ್ಸು ಮಾರಾಟಕ್ಕಿಲ್ಲ, ಸಂಬಂಧದಲ್ಲಿ ಭಾವುಕತೆ ಇರಲಿ, ಭಾವನೆಗಳ ನಿಂದನೆ ಇದ್ದರೆ ಆ ಸಂಬಂಧಗಳಿಂದ ಹೊರಬನ್ನಿ
ಸಂಬಂಧImage Credit source: Healthshots.com
ನಯನಾ ರಾಜೀವ್
|

Updated on: Jul 28, 2023 | 9:00 AM

Share

ಯಾವುದೇ ಸಂಬಂಧ(Relationship)ವಿರಲಿ ಅದಕ್ಕೆ ಅದರದ್ದೇ ಆದ ಗೌರವವಿದೆ. ಸಂಬಂಧದಲ್ಲಿ ಭಾವುಕತೆ ಇದ್ದಾಗ, ಒಬ್ಬರ ಕಷ್ಟವನ್ನು ಅರ್ಥಮಾಡಿಕೊಂಡಾಗ ಜೀವನ ನಡೆಸುವುದು ಸುಲಭ. ಆದರೆ ಭಾವನೆಗಳ ನಿಂದನೆಯಾದಲ್ಲಿ ಪದೇ ಪದೇ ನಿಮ್ಮ ಭಾವನೆಗಳಿಗೆ ಘಾಸಿ ಉಂಟಾಗುತ್ತಿದ್ದರೆ ನೀವು ಆ ಸಂಬಂಧದಿಂದ ಹೊರ ಬರುವುದೇ ಉತ್ತಮ.

ಸಂಬಂಧದಲ್ಲಿ ಗ್ಯಾಸ್​ಲೈಟಿಂಗ್ ಎನ್ನುವುದು ಮಾನಸಿಕ ನಿಂದನೆಯ ಒಂದು ರೂಪವನ್ನು ಸೂಚಿಸುತ್ತದೆ. ಗ್ಯಾಸ್‌ಲೈಟಿಂಗ್” ಎಂಬ ಪದವು “ಗ್ಯಾಸ್ ಲೈಟ್” ಎಂಬ ನಾಟಕ ಮತ್ತು ಚಲನಚಿತ್ರದಿಂದ ಬಂದಿದೆ, ಅಲ್ಲಿ ಪತಿ ತನ್ನ ಹೆಂಡತಿಯನ್ನು ಮೋಸಗೊಳಿಸಲು ವಿಭಿನ್ನ ವಿಧಾನಗಳನ್ನು ಬಳಸುತ್ತಾನೆ.

ಈ ಹಿಂದೆ ಹೇಳಿದ್ದನ್ನು ಹೇಳಿಯೇ ಇಲ್ಲ ಎಂದು ನಿರೂಪಿಸುವುದು ತಪ್ಪು ಮಾಡಿದವರು ಇನ್ನೊಬ್ಬ ವ್ಯಕ್ತಿ ನೆನಪಿನ ಶಕ್ತಿ ಕಳೆದುಕೊಂಡಿದ್ದಾರೆ, ಆ ರೀತಿ ನಾನು ಹೇಳಿಯೇ ಇಲ್ಲ, ಅಥವಾ ನೀನು ತಿಳಿದುಕೊಂಡಿರುವುದೇ ತಪ್ಪು ಎಂದು ಬಿಂಬಿಸಲು ಮುಂದಾಗುತ್ತಾರೆ.

ಮತ್ತೊಬ್ಬರನ್ನು ದೂಷಿಸುವುದು ನಿನ್ನಿಂದಾಗಿಯೇ ನಮ್ಮ ಸಂಬಂಧ ಹಾಳಾಗಿದೆ, ನೀನು ನಡೆಸುಕೊಂಡ ರೀತಿಯೇ ಸರಿಯಾಗಿಲ್ಲ ಎಂದು ಹೇಳುತ್ತಾ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಮನಸ್ಸು ಮಾಡುವುದೇ ಇಲ್ಲ.

ಭಾವನೆಗಳಿಗೆ ಪ್ರಾಮುಖ್ಯತೆ ಕೊಡದೇ ಇರುವುದು ಭಾವನೆಗಳಿಗೆ ಪ್ರಾಮುಖ್ಯತೆ ಕೊಡದೇ ಇರುವುದು, ಕಾಳಜಿ ತೋರದೆ ಇರುವುದು, ಎಲ್ಲಾ ಮಾತನ್ನು ಇಷ್ಟೆ ಎಂದು ಭಾವಿಸುವುದು, ಬೇರೆಯವರ ಭಾವನೆಗಳು ನಿಷ್ಪ್ರಯೋಜಕ ಎಂದು ಭಾವಿಸುತ್ತಿದ್ದರೆ ನೀವು ಅವರೊಂದಿಗೆ ಇದ್ದು ಯಾವುದೇ ಪ್ರಯೋಜನವಿಲ್ಲ.

ಅಸಭ್ಯ ಭಾಷೆ ಬಳಕೆ ಪದೇ ಪದೇ ನಿಮ್ಮ ಭಾವನೆಗಳಿಗೆ ನೋವುಂಟು ಮಾಡುವುದು, ಅಸಭ್ಯವಾದ ಭಾಷೆಯನ್ನು ಬಳಸುವುದು, ಯಾವುದೇ ಕಲ್ಪನೆಯ ಅಪಹಾಸ್ಯ ಮಾಡುವುದರಿಂದ ಆತ್ಮವಿಶ್ವಾಸ ಕುಸಿಯುತ್ತದೆ.

ಸತ್ಯವನ್ನು ತಿರುಚುವುದು ನಿಮ್ಮ ಭಾವನೆಗಳಿಗೆ ಬೆಲೆ ಕೊಡದೇ ಇರುವವರು ಸತ್ಯವನ್ನು ತಿರುಚುವ ಕೆಲಸ ಮಾಡುತ್ತಾರೆ, ಗೊಂದಲವನ್ನು ಸೃಷ್ಟಿಸುತ್ತಾರೆ, ನಿಮ್ಮನ್ನು ಒಂಟಿಯಾಗಿರಲು ಬಿಡುವುದು, ತಮ್ಮ ಸಂಬಂಧವನ್ನು ಮತ್ತಷ್ಟು ದುರ್ಬಲವಾಗಲು ಬಿಟ್ಟುಬಿಡುತ್ತಾರೆ. ಪದೇ ಪದೇ ಅನುಚಿತವಾಗಿ ವರ್ತಿಸಿ ಮತ್ತೆ ನಿಮಗೆ ಹತ್ತಿರವಾಗಲು ಬಯಸಿದವರಿಂದ ದೂರ ಇರುವುದೇ ಒಳಿತು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ