AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು

ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

United Nations Public Service Day: ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಕುರಿತು ನೀವು ತಿಳಿಯಬೇಕಾದ ವಿಷಯಗಳಿವು
United Nations Public Service Day
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 22, 2024 | 5:55 PM

Share

ಪ್ರಪಂಚದಾದ್ಯಂತ ಪ್ರತಿ ವರ್ಷ ಜೂನ್ 23 ರಂದು ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕ ಸೇವೆಯ ಮೌಲ್ಯದ ಜೊತೆಗೆ ಸಾರ್ವಜನಿಕರು ವಹಿಸುವ ನಿರ್ಣಾಯಕ ಪಾತ್ರ ಮತ್ತು ಅವರನ್ನು ಗೌರವಿಸುವುದು ಈ ನಿರ್ದಿಷ್ಟ ದಿನದ ಪ್ರಮುಖ ಗುರಿಯಾಗಿದೆ. ಇದರ ಜೊತೆಗೆ ಸಾರ್ವಜನಿಕ ವಲಯದಲ್ಲಿ ಯುವಜನತೆಯನ್ನು ಉದ್ಯೋಗ ಪಡೆಯಲು ಪ್ರೋತ್ಸಾಹಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ದಿನದ ಮಹತ್ವ:

ವಿಶ್ವಸಂಸ್ಥೆಯ ಮಹಾಧಿವೇಶನವು ಸಾರ್ವಜನಿಕ ಸೇವಾ ದಿನವನ್ನಾಗಿ ಆಚರಿಸಲು ನಿರ್ಧರಿಸದ್ದು, 2002 ರ ಡಿಸೆಂಬರ್ 20 ರಂದು, ಈ ನಿರ್ಣಯವನ್ನು ಅಂಗೀಕರಿಸುವ ಮೂಲಕ ಜೂನ್ 23 ಅನ್ನು ಸಾರ್ವಜನಿಕ ಸೇವಾ ದಿನವೆಂದು ಅಧಿಕೃತವಾಗಿ ಘೋಷಿಸಿತು. ಈ ಮಹತ್ವದ ದಿನದ ಮಾನ್ಯತೆಯನ್ನು ಹೆಚ್ಚಿಸಲು ಮತ್ತು ಸಾರ್ವಜನಿಕ ಸೇವೆಯ ಮಹತ್ವವನ್ನು ಜನತೆಗೆ ತಿಳಿಸಲು, ವಿಶ್ವಸಂಸ್ಥೆಯು 2003 ರಲ್ಲಿ ಯುಎನ್ ಪಬ್ಲಿಕ್ ಸರ್ವಿಸ್ ಅವಾರ್ಡ್ಸ್ (ಯುಎನ್ಪಿಎಸ್ಎ) ಕಾರ್ಯಕ್ರಮವನ್ನು ಪ್ರಾರಂಭಿಸಿತು.

ಇದನ್ನೂ ಓದಿ: ನೀವು ಅನಿಷ್ಟರಲ್ಲ, ನಮ್ಮೊಳಗೆ ನೀವು ಒಬ್ಬರು

ಪ್ರತಿ ವರ್ಷವೂ ಇದಕ್ಕೆ ಸಂಬಂಧ ಪಟ್ಟಂತೆ ಕೆಲವು ಉನ್ನತ ಮಟ್ಟದ ಸಭೆ ನಡೆಯುತ್ತದೆ. ಈ ಬಗ್ಗೆ ಅನೇಕ ರೀತಿಯ ಚರ್ಚೆಗಳನ್ನು ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ. ಈ ಸಭೆಯಲ್ಲಿ ಸರ್ಕಾರಗಳು ಎದುರಿಸುತ್ತಿರುವ ಸಮಕಾಲೀನ ಸವಾಲುಗಳನ್ನು ಮತ್ತು ಪರಿಹಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More