AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varamahalakshmi Vrata 2025: ವರಮಹಾಲಕ್ಷ್ಮಿ ವ್ರತದಂದು ಮಾಡಲೇಬಾರದ ತಪ್ಪುಗಳು ಇವೆ ನೋಡಿ

ವರಲಕ್ಷ್ಮಿ ಈ ಹೆಸರೇ ಸೂಚಿಸುವಂತೆ ವರವನ್ನು ನೀಡುವ ಲಕ್ಷ್ಮಿ ಎಂದರ್ಥ. ಸಮೃದ್ಧಿ ಹಾಗೂ ದೈವಿಕ ರೂಪವಾದ ಲಕ್ಷ್ಮಿಯನ್ನು ಪೂಜಿಸುವ ಸುದಿನವಾಗಿದ್ದು, ಶ್ರಾವಣ ಮಾಸದಲ್ಲಿ ಶುಕ್ಲ ಪಕ್ಷದ ಶುಕ್ರವಾರದಂದು ವರಮಹಾಲಕ್ಷ್ಮಿ ವ್ರತಾಚರಣೆ ಮಾಡಲಾಗುತ್ತದೆ. ಆದರೆ ಹಿಂದೂ ಸಂಪ್ರದಾಯದಲ್ಲಿ ಈ ದಿನ ಬಹಳ ವಿಶೇಷ ಮಹತ್ವ ನೀಡಲಾಗಿದ್ದು, ಈ ದಿನ ನೀವು ಮಾಡುವ ಈ ಕೆಲವು ತಪ್ಪುಗಳಿಂದ ಲಕ್ಷ್ಮಿ ದೇವಿಯ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಹೀಗಾಗಿ ವ್ರತಾಚರಣೆಯ ವೇಳೆ ಈ ಕೆಲವು ತಪ್ಪುಗಳು ನಿಮ್ಮಿಂದ ಅಪ್ಪಿತಪ್ಪಿಯೂ ಆಗದಂತೆ ನೋಡಿಕೊಳ್ಳಿ.

Varamahalakshmi Vrata 2025: ವರಮಹಾಲಕ್ಷ್ಮಿ ವ್ರತದಂದು ಮಾಡಲೇಬಾರದ ತಪ್ಪುಗಳು ಇವೆ ನೋಡಿ
ವರಮಹಾಲಕ್ಷ್ಮಿ ವ್ರತ
ಸಾಯಿನಂದಾ
|

Updated on: Aug 03, 2025 | 6:53 PM

Share

ಹಿಂದೂ ಧರ್ಮದ ಪ್ರಕಾರವಾಗಿ ಸಂಪತ್ತಿನ ದೇವತೆಯಾಗಿ ಲಕ್ಷ್ಮಿದೇವಿಯನ್ನು ಆರಾಧಿಸಲಾಗುತ್ತದೆ. ಹೀಗಾಗಿ ವರಮಹಾಲಕ್ಷ್ಮಿ ವ್ರತ (Varamahalakshmi Vrata)ಆಚರಣೆಗೆ ವಿಶೇಷ ಮಹತ್ವವನ್ನು ನೀಡಲಾಗಿದ್ದು, ಶ್ರಾವಣ ಮಾಸದಲ್ಲಿ ಶುಕ್ಲ ಪಕ್ಷದ ಶುಕ್ರವಾರದಂದು ಆಚರಿಸಲಾಗುವುದು ವಾಡಿಕೆ. ಆದರೆ ಈ ವರ್ಷ ಆಗಸ್ಟ್ 8ರಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತಿದೆ. ಸುಮಂಗಲಿಯರು ಬಹಳ ಶ್ರದ್ಧಾ ಭಕ್ತಿಯಿಂದ ಮನೆಯಲ್ಲಿ ವರಮಹಾಲಕ್ಷ್ಮಿಯನ್ನು ಕೂರಿಸಿ ಶಾಸ್ತ್ರಬದ್ಧವಾಗಿ ಪೂಜಿಸುತ್ತಾರೆ. ಆದರೆ ಈ ವರಮಹಾಲಕ್ಷ್ಮಿ ಹಬ್ಬ ಅಥವಾ ವ್ರತದ ದಿನ ಈ ತಪ್ಪುಗಳನ್ನು ಮಾಡಲೇಬಾರದು ಎನ್ನಲಾಗುತ್ತದೆ, ಆ ಕುರಿತಾದ ಮಾಹಿತಿ ಇಲ್ಲಿದೆ.

ವರಮಹಾಲಕ್ಷ್ಮಿ ಹಬ್ಬದ ದಿನ ಈ ತಪ್ಪುಗಳು ನಿಮ್ಮಿಂದ ಆಗದಿರಲಿ:

  •  ವರಮಹಾಲಕ್ಷ್ಮಿ ಹಬ್ಬದ ದಿನ ಪೂಜೆ ಮಾಡುವ ಸ್ಥಳದಲ್ಲಿ ಅಥವಾ ದೇವರ ಕೋಣೆಯಲ್ಲಿ ಮುರಿದ ವಿಗ್ರಹಗಳನ್ನು ಇಡಬಾರದು.
  • ವರಮಹಾಲಕ್ಷ್ಮಿ ಮರದ ಕುರ್ಚಿ ಮೇಲೆ ಕೂರಿಸಿ. ಅಪ್ಪಿತಪ್ಪಿಯೂ ಕಬ್ಬಿಣದ ಕುರ್ಚಿ ಮೇಲೆ ಲಕ್ಷ್ಮಿಯನ್ನು ಕೂರಿಸಿ ಪೂಜೆ ಮಾಡಬೇಡಿ.
  • ಅಲಂಕಾರಕ್ಕಾಗಿ ಪ್ಲಾಸ್ಟಿಕ್ ಹೂವುಗಳು ಹಾಗೂ ಹಣ್ಣುಗಳನ್ನು ಬಳಸಿ ವರಮಹಾಲಕ್ಷ್ಮಿ ವ್ರತಾಚರಣೆ ಮಾಡಬೇಡಿ.
  • ಕಲಶವಿಟ್ಟು ಪೂಜೆ ಮಾಡುವ ಪದ್ಧತಿ ನಿಮ್ಮ ಮನೆಯಿಲ್ಲದ್ದರೆ ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ. ಲಕ್ಷ್ಮಿ ಫೋಟೋಗೆ ಪೂಜೆ ಮಾಡಿದರೂ ದೇವಿಯ ಕೃಪೆಗೆ ಪಾತ್ರರಾಗುತ್ತೀರಿ.
  • ನೀವೇನಾದ್ರೂ ಕಲಶವಿಟ್ಟು ಪೂಜೆ ಮಾಡುತ್ತೀರಿ ಅಂತಾದರೆ ತ್ರಾಮದ ಕಲಶವನ್ನು ಬಳಸುವುದು ಸೂಕ್ತ. ಪೂಜೆಯ ವೇಳೆ ಮನಸ್ಸು ಶುದ್ಧವಾಗಿರಲಿ, ಕೆಟ್ಟ ಆಲೋಚನೆಗಳನ್ನು ಮಾಡಬೇಡಿ.
  • ಈ ವ್ರತಾಚರಣೆಗೆ ಸಾಲವಾಗಿ ತಂದ ಹಣವನ್ನಾಗಲಿ ಹಾಗೂ ಆಭರಣಗಳನ್ನು ಬಳಸಬೇಡಿ. ಇದರಿಂದ ಲಕ್ಷ್ಮಿ ದೇವಿಯೂ ಮುನಿಸಿಕೊಳ್ಳುತ್ತಾಳೆ. ತುಕ್ಕು ಹಿಡಿದ ಆಭರಣಗಳನ್ನು ಎಂದಿಗೂ ಬಳಸುವುದು ತಪ್ಪಿಸಿ.

ಇದನ್ನೂ ಓದಿ: Nag Panchami 2025: ನಾಗನಿಗೆ ಹಿಂಗಾರ ಏಕೆ ಪ್ರಿಯ; ಈ ಬಗ್ಗೆ ಕಶೆಕೋಡಿ ಸೂರ್ಯನಾರಾಯಣ ಭಟ್‌ ಏನು ಹೇಳಿದ್ದಾರೆ ನೋಡಿ

ಇದನ್ನೂ ಓದಿ
Image
ನಾಗನಿಗೆ ಹಿಂಗಾರ ಹೂವು ಏಕೆ ಪ್ರಿಯ
Image
ನಾಗದರ್ಶನ ಹಾಗೂ ನಾಗ ಮಂಡಲದ ನಡುವಿನ ವ್ಯತ್ಯಾಸವೇನು? ಏನಿದರ ವಿಶೇಷತೆ?
Image
ನಾಗರಹಾವುಗಳ ಬಗ್ಗೆ ಜನರಿಗಿರುವ ತಪ್ಪು ಕಲ್ಪನೆಗಳೇನು?
Image
ನೋಡ ಬನ್ನಿ ಉತ್ತರ ಕರ್ನಾಟಕದ ನಾಗರ ಪಂಚಮಿ ಹಬ್ಬದ ಸಡಗರ
  •  ದೀಪ ಬೆಳಗಿಸಲು ಅಡುಗೆಗೆ ಬಳಸಿದ ಎಣ್ಣೆಯನ್ನು ಯಾವುದೇ ಕಾರಣಕ್ಕೂ ಬಳಸಬಾರದು. ಇದರಿಂದ ಪೂಜೆಗೆ ತಕ್ಕ ಫಲವು ಸಿಗುವುದಿಲ್ಲ.
  •  ಲಕ್ಷ್ಮಿ ದೇವಿಯನ್ನು ಮೆಟ್ಟಿಲುಗಳ ಕೆಳಗೆ, ಶೌಚಾಲಯ, ಸ್ನಾನಗೃಹದ ಹತ್ತಿರ ಹಾಗೂ ಸ್ವಚ್ಛವಲ್ಲದ ಸ್ಥಳಗಳಲ್ಲಿ ಕೂರಿಸಬೇಡಿ. ಪೂಜೆ ಮಾಡುವ ಸ್ಥಳದ ಸ್ವಚ್ಛತೆಗೆ ಹೆಚ್ಚು ಆದ್ಯತೆ ಕೊಡಿ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ