AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Success Story: ಹಳೇ ಶೂಸ್ ಮಾರಿ ಕೋಟಿ-ಕೋಟಿ ಗಳಿಸಿದ 23 ವರ್ಷದ ಯುವಕ!

ವೇದಾಂತ ಲಂಬಾ ಅವರ ಕಂಪನಿಯು ಈಗ ಸ್ನೀಕರ್ಸ್, ಟಿ-ಶರ್ಟ್‌ಗಳು ಮತ್ತು ಹೂಡೀಸ್ ಸೇರಿದಂತೆ 3000 ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ. ಮುಂಬೈ ಮೂಲದ ಈ ಸ್ಟಾರ್ಟಪ್‌ನ ಮಾಸಿಕ ಆದಾಯ 5 ಕೋಟಿ ರೂ. ದಾಟಿದೆ.

Success Story: ಹಳೇ ಶೂಸ್ ಮಾರಿ ಕೋಟಿ-ಕೋಟಿ ಗಳಿಸಿದ 23 ವರ್ಷದ ಯುವಕ!
ವೇದಾಂತ ಲಂಬಾ
ಸುಷ್ಮಾ ಚಕ್ರೆ
|

Updated on:Sep 01, 2023 | 6:57 PM

Share

‘ಮನಸ್ಸಿದ್ದರೆ ಮಾರ್ಗ’ ಎಂಬ ಮಾತು ಸುಳ್ಳಲ್ಲ. ವೇದಾಂತ ಲಂಬಾ (Vedanta Lamba) ಎಂಬ ಯುವಕನೊಬ್ಬ ಓದಲು ಇಷ್ಟವಿಲ್ಲದೆ ಅರ್ಧದಲ್ಲೇ ಕಾಲೇಜು ಬಿಟ್ಟಿದ್ದರು. ಆ ಬಳಿಕ 2017ರಲ್ಲಿ ಲೈಫ್​ಸ್ಟೈಲ್​ನ ಯೂಟ್ಯೂಬ್ ಚಾನೆಲ್ ಒಂದನ್ನು ಪ್ರಾರಂಭಿಸಿದರು. ಸುಮ್ಮನೆ ಟೈಂಪಾಸ್​ಗೆಂದು ಯೂಟ್ಯೂಬ್ ಚಾನೆಲ್ ಮಾಡಿದ್ದ ಅವರು ನಂತರ ಆನ್​ಲೈನಲ್ಲೇ ಸ್ನೀಕರ್ಸ್ ಮರುಮಾರಾಟ ಮಾಡುವ ಕೆಲಸ ಶುರು ಮಾಡಿದರು. 23 ವರ್ಷದ ಈ ಯುವಕ 100 ಕೋಟಿ ರೂ. ಮೌಲ್ಯದ ಸ್ನೀಕರ್ಸ್​ ಮಾರಿ 24 ಕೋಟಿ ರೂ. ಹಣ ಸಂಪಾದನೆ ಮಾಡುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದ್ದಾರೆ.

ಮೇನ್‌ಸ್ಟ್ರೀಟ್ ಮಾರ್ಕೆಟ್‌ಪ್ಲೇಸ್ (Mainstreet Marketplace) ಎಂಬ ಆನ್‌ಲೈನ್ ಸ್ನೀಕರ್ ಶಾಪ್ ಆರಂಭಿಸಿದ ವೇದಾಂತ ಇದೀಗ ಕೋಟ್ಯಧಿಪತಿಯಾಗಿದ್ದಾರೆ. ಕೇವಲ 23 ವರ್ಷದಲ್ಲೇ ಯಶಸ್ವಿ ಉದ್ಯಮಿಯಾಗಿರುವ ವೇದಾಂತ ಅವರಿಗೆ ರಣಬೀರ್ ಕಪೂರ್, ಕರಣ್ ಜೋಹರ್ ಸೇರಿದಂತೆ ಅನೇಕ ಸೆಲೆಬ್ರಿಟಿ ಗ್ರಾಹಕರಿದ್ದಾರೆ.

ಇದನ್ನೂ ಓದಿ: Soros Successor: ಅಪ್ಪನನ್ನು ಮೀರಿಸುವ ಮಗ; ಉದಾರ ದಾನಿ ಜಾರ್ಜ್ ಸೋರೋಸ್ ಸಾಮ್ರಾಜ್ಯ ಮಗನ ಕೈಗೆ; ಅಪ್ಪನಿಗಿಂತ ಹೆಚ್ಚು ರಾಜಕೀಯ ಗುರಿಕಾರ ಮಗ

ವೇದಾಂತ ಲಂಬಾ ಅವರ ಕಂಪನಿಯು ಈಗ ಸ್ನೀಕರ್ಸ್, ಟಿ-ಶರ್ಟ್‌ಗಳು ಮತ್ತು ಹೂಡೀಸ್ ಸೇರಿದಂತೆ 3000 ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ. ಮುಂಬೈ ಮೂಲದ ಈ ಸ್ಟಾರ್ಟಪ್‌ನ ಮಾಸಿಕ ಆದಾಯ 5 ಕೋಟಿ ರೂ. ದಾಟಿದೆ. ರಣಬೀರ್ ಕಪೂರ್, ರಣವೀರ್ ಸಿಂಗ್ ಮತ್ತು ಕರಣ್ ಜೋಹರ್ ಅವರಂತಹ ಸೆಲೆಬ್ರಿಟಿಗಳು ತಮ್ಮ ಗ್ರಾಹಕರಾಗಿದ್ದರು ಎಂದು ವೇದಾಂತ ಲಂಬಾ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Post Office: ಭಾರತದ ಅಂಚೆ ಕಚೇರಿ ಮತ್ತು ಯುಪಿಐ ವ್ಯವಸ್ಥೆ ವಿಶ್ವಕ್ಕೆ ಮಾದರಿ ಎಂದ ಯೂನಿವರ್ಸಲ್ ಪೋಸ್ಟಲ್ ಯೂನಿಯನ್​ನ ಮಸಾಹಿಕೋ ಮೆಟೋಕಿ

ಈ ಕಂಪನಿಯು ಮುಂಬೈ, ದೆಹಲಿ, ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ ಇಲ್ಲಿಯವರೆಗೆ 50,000 ಸ್ನೀಕರ್‌ಗಳನ್ನು ಮಾರಾಟ ಮಾಡಿದೆ. ಈ ಕಂಪನಿಯು ಮುಂಬೈನಲ್ಲಿ ಎರಡು ಅಂಗಡಿಗಳನ್ನು ಹೊಂದಿದೆ. ಹಾಗೇ, ದೆಹಲಿಯಲ್ಲೂ ಒಂದು ಮಳಿಗೆಯನ್ನು ಹೊಂದಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:55 pm, Fri, 1 September 23

Follow Us
ಬೆಳಗ್ಗೆ ಎದ್ದು ಮನೆ ಮುಂದೆ ನೀರು ಹಾಕುವುದರಿಂದ ಏನೆಲ್ಲಾ ಲಾಭ ಇದೆ ಗೊತ್ತಾ?
ಬೆಳಗ್ಗೆ ಎದ್ದು ಮನೆ ಮುಂದೆ ನೀರು ಹಾಕುವುದರಿಂದ ಏನೆಲ್ಲಾ ಲಾಭ ಇದೆ ಗೊತ್ತಾ?
Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಾಗಮನ!
Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಾಗಮನ!
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ವಿಜಯ್ ರಾಘವೇಂದ್ರ ಭಾವುಕ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ವಿಜಯ್ ರಾಘವೇಂದ್ರ ಭಾವುಕ ಮಾತು
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು