AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Side Effect : ಲೈಂಗಿಕ ತೃಪ್ತಿಗಾಗಿ ಪದೇ ಪದೇ ವಯಾಗ್ರ ಮಾತ್ರೆ ಸೇವಿಸಿದರೆ ಹೃದಯಾಘಾತ ಖಂಡಿತ

ಸೆಕ್ಸ್ ಲೈಫ್ ಚೆನ್ನಾಗಿರಬೇಕು ಎಂದು ಬಯಸುವುದು ಸಹಜ. ಹೀಗಾಗಿ ಪುರುಷರು ಲೈಂಗಿಕ ತೃಪ್ತಿಗಾಗಿ ನಾನಾ ರೀತಿಯ ಕಸರತ್ತು ಮಾಡಿ ಎಡವಟ್ಟುಗಳಿಗೆ ಸಿಲುಕಿ ಹಾಕಿರುವ ಘಟನೆಗಳು ಈಗಾಗಲೇ ಬೆಳಕಿಗೆ ಬಂದಿದೆ. ಲೈಂಗಿಕ ತೃಪ್ತಿಗಾಗಿ ತೆಗೆದುಕೊಳ್ಳುವ ವಯಾಗ್ರದಂತಹ ಮಾತ್ರೆಗಳು ದೇಹದಲ್ಲಿ ಉತ್ತಮ ರಕ್ತದ ಹರಿವಿಗೆ ರಕ್ತನಾಳಗಳನ್ನು ವಿಸ್ತರಿಸುವ ಮೂಲಕ ಕೆಲಸ ಮಾಡುತ್ತವೆ ಎಂದಿದ್ದಾರೆ. ಅದಲ್ಲದೇ ಈ ಮಾತ್ರೆಗಳಿಂದ ಆರೋಗ್ಯದ ಮೇಲಾಗುವ ನಾನಾ ರೀತಿಯ ಸಮಸ್ಯೆಗಳ ಕುರಿತು ಅಚ್ಚರಿಕಾರಿ ಅಂಶಗಳನ್ನು ಬಹಿರಂಗ ಪಡಿಸಿದ್ದಾರೆ.

Side Effect : ಲೈಂಗಿಕ ತೃಪ್ತಿಗಾಗಿ ಪದೇ ಪದೇ ವಯಾಗ್ರ ಮಾತ್ರೆ ಸೇವಿಸಿದರೆ ಹೃದಯಾಘಾತ ಖಂಡಿತ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Mar 19, 2024 | 2:18 PM

Share

ಒತ್ತಡದ ಜೀವನ ಶೈಲಿ, ಆಹಾರ ಪದ್ಧತಿಯಲ್ಲಿ ಬದಲಾವಣೆಯಿಂದಾಗಿ ಪುರುಷರಲ್ಲಿ ಲೈಂಗಿಕ ಸಮಸ್ಯೆಗಳು ಹೆಚ್ಚಾಗುತ್ತಿವೆ. ಹೀಗಾಗಿ ಹೆಚ್ಚಿನವರು ಪುರುಷರು ನಿಮಿರುವಿಕೆ ಸಮಸ್ಯೆಯಿಂದ ಮುಕ್ತಿ ಪಡೆಯಲೆಂದು ವಯಾಗ್ರ ಮಾತ್ರೆಗಳನ್ನು ಸೇವಿಸುತ್ತಾರೆ. ಸಾಮಾನ್ಯವಾಗಿ ಈ ವಯಾಗ್ರ ಮಾತ್ರೆಗಳು ನಿಮಿರುವಿಕೆಯ ಅಸಾಮಾನ್ಯ ಕ್ರಿಯೆಗೆ ಔಷಧಿಯಾಗಿ ಕೆಲಸ ಮಾಡುತ್ತದೆ. ಆದರೆ ನೀಲಿ ಮಾತ್ರೆಗಳ ಸೇವನೆಯಿಂದಾಗಿ ಹೃದಯಾಘಾತ ಮತ್ತು ಮೆದುಳಿನ ರಕ್ತಸ್ರಾವದಂತಹ ಮಾರಣಾಂತಿಕ ಕಾಯಿಲೆಗಳ ಅಪಾಯದ ಮಟ್ಟವು ಹೆಚ್ಚಾಗಬಹುದು ಎನ್ನಲಾಗಿದೆ.

ವಯಾಗ್ರದಂತಹ ಮಾತ್ರೆಗಳ ಸೇವನೆಯಿಂದ ಈ ಸಮಸ್ಯೆಗಳು ದೂರ

ವಯಾಗ್ರದಂತಹ ಇಡಿ ಮಾತ್ರೆಗಳು ದೇಹದಲ್ಲಿ ಉತ್ತಮ ರಕ್ತದ ಹರಿವಿಗೆ ರಕ್ತನಾಳಗಳನ್ನು ವಿಸ್ತರಿಸುವ ಮೂಲಕ ಕೆಲಸ ಮಾಡುತ್ತವೆ ಎಂದು ಸಂಶೋಧಕರು ತಿಳಿಸಿದ್ದಾರೆ. ಶ್ವಾಸಕೋಶದ ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳಿಗೆ ಈ ಮಾತ್ರೆಗಳು ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಅದಲ್ಲದೇ ಜೆಟ್ ಲ್ಯಾಗ್, ಎತ್ತರದ ಕಾಯಿಲೆ ಮತ್ತು ಆಲ್ಫ್ಮರ್ನ ಕಾಯಿಲೆಯಿಂದ ವೇಗವಾಗಿ ಚೇತರಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ಈ ಯುವತಿಗೆ ಎರಡು ಗರ್ಭಕೋಶ, ಎರಡು ಯೋನಿ, ಇದು ಗರ್ಭಾಶಯದ ಡಿಡೆಲ್ಸಿಸ್ ಕಾಯಿಲೆ?

ವಯಾಗ್ರದಂತಹ ಇಡಿ ಮಾತ್ರೆಗಳ ಸೇವನೆಯಿಂದ ಸಾವಿನ ಅಪಾಯವಿದೆಯೇ?

ಯಾವುದೇ ಸಾವುಗಳು ನೇರವಾಗಿ ವಯಾಗ್ರದಂತಹ ಇಡಿ ಮಾತ್ರೆಗಳೊಂದಿಗೆ ಸಂಬಂಧ ಹೊಂದಿಲ್ಲ ಎಂದು ತಜ್ಞರು ಹೇಳುತ್ತಿದ್ದರೂ, ಅವುಗಳ ಬಳಕೆಯ ಒಂದು ಅಂಶವು ಸಾವಿಗೆ ಕಾರಣವಾಗಬಹುದು ಎನ್ನಲಾಗಿದೆ. ಆದರೆ ಹೆಚ್ಚಿನ ಸಾವುಗಳು ಈ ಸಮಸ್ಯೆಗಳಿಂದ ಬಳಲುತ್ತಿರುವ ಹಾಗೂ ಲೈಂಗಿಕತೆಯನ್ನು ಹೊಂದಿರುವ ಪುರುಷರಲ್ಲಿ ಕಂಡುಬರುತ್ತವೆ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ. ಈ ವಯಾಗ್ರ ಮಾತ್ರೆಗಳನ್ನು ಬಳಸುವ 60 ವರ್ಷ ವಯಸ್ಸಿನ ಜನರಲ್ಲಿ ಹೆಚ್ಚಿನ ಸಂಖ್ಯೆಯ ಸಾವುಗಳು ವರದಿಯಾಗಿವೆ. ಅದರಲ್ಲಿಯೂ ಶೇಕಡಾ 31ರಷ್ಟು ಜನರು ಹೃದಯಾಘಾತದಂತಹ ಕಾಯಿಲೆಗಳಿಗೆ ತುತ್ತಾಗಿದ್ದಾರೆ ಎನ್ನಲಾಗಿದೆ. ಮಿದುಳಿನ ರಕ್ತಸ್ರಾವದಿಂದಾಗಿ ಹೆಚ್ಚಿನ ಸಂಖ್ಯೆಯ ಸಾವುಗಳು ಸಂಭವಿಸಿವೆ. ಈ ಮಾತ್ರೆಗಳ ಸೇವನೆಯೂ ಪಾರ್ಶ್ವವಾಯುವಿಗೂ ಕಾರಣವಾಗಿದೆ ಎನ್ನಲಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ