AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಗುಣಗಳಿದ್ದರೆ ನಿಮ್ಮ ಆಯಸ್ಸು ಬೇಗನೇ ಕಡಿಮೆಯಾಗುತ್ತಂತೆ

ಇಂದಿನ ಜೀವನ ಶೈಲಿ ಹಾಗೂ ಆಹಾರ ಕ್ರಮವು ಆಯಸ್ಸನ್ನು ಹೇಗೆ ಕಡಿಮೆ ಮಾಡುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಮನುಷ್ಯನಲ್ಲಿರುವ ಈ ಕೆಲವು ಕೆಟ್ಟ ಗುಣಗಳು ಸಾವಿಗೆ ಹತ್ತಿರವಾಗುವಂತೆ ಮಾಡುತ್ತದೆಯಂತೆ. ಈ ಬಗ್ಗೆ ವಿದುರ ತನ್ನ ನೀತಿಯಲ್ಲಿ ಉಲ್ಲೇಖ ಮಾಡಿದ್ದು, ಈ ಕೆಟ್ಟ ಗುಣಗಳನ್ನು ಕಡಿಮೆ ಮಾಡಿಕೊಂಡು ಆಯಸ್ಸನ್ನು ಹೆಚ್ಚಿಸಿಕೊಳ್ಳಿ ಎನ್ನುವ ಸಲಹೆಗಳನ್ನು ನೀಡಿದ್ದಾನೆ. ಹಾಗಾದ್ರೆ ಮನುಷ್ಯನ ಆಯಸ್ಸನ್ನು ಕಡಿಮೆಗೊಳಿಸುವ ಆ ಕೆಟ್ಟ ಗುಣಗಳಾವುವು ಎನ್ನುವ ಮಾಹಿತಿ ಇಲ್ಲಿದೆ.

ಈ ಗುಣಗಳಿದ್ದರೆ ನಿಮ್ಮ ಆಯಸ್ಸು ಬೇಗನೇ ಕಡಿಮೆಯಾಗುತ್ತಂತೆ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Mar 15, 2025 | 12:27 PM

Share

ಸಾವು ಎನ್ನುವುದು ಖಚಿತ. ಹೀಗಾಗಿ ಈ ಭೂಮಿಯಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲ ಒಂದು ದಿನ ಇಹಲೋಕವನ್ನು ತ್ಯಜಿಸಲೇ ಬೇಕು. ಆದರೆ ವ್ಯಕ್ತಿಯಲ್ಲಿನ ಈ ಕೆಟ್ಟ ಗುಣಗಳು ಆಯಸ್ಸನ್ನು ಕಡಿಮೆ ಮಾಡಿ, ಸಾವಿಗೆ ಹತ್ತಿರವಾಗುವಂತೆ ಮಾಡುತ್ತದೆ ಎಂದಿದ್ದಾನೆ ವಿದುರ. ಯಾವೊಬ್ಬ ವ್ಯಕ್ತಿಯ ಈ ರೀತಿ ನಡೆದುಕೊಳ್ಳುತ್ತಾನೋ ಆತನ ಆಯಸ್ಸು ಕಡಿಮೆ ಆಗೋದು ಖಂಡಿತ ಎಂದು ಸ್ಪಷ್ಟವಾಗಿ ತಿಳಿಸಿದ್ದಾನೆ. ಹೀಗಾಗಿ ದೀರ್ಘ ಆಯಸ್ಸನ್ನು ಪಡೆಯಲು ಈ ಗುಣಗಳನ್ನು ಬಿಟ್ಟು ಬಿಡುವುದು ಸೂಕ್ತ.

  • ಅತಿಯಾದ ಕೋಪ : ಕೋಪವು ಎಲ್ಲರಿಗೂ ಕೂಡ ಬರುತ್ತದೆ. ಆದರೆ ಸಿಟ್ಟನ್ನು ನಿಯಂತ್ರಿಸುವುದು ತಿಳಿದಿರಬೇಕು. ಕೋಪದ ಕೈಗೆ ಬುದ್ಧಿ ಕೊಟ್ಟು ತಪ್ಪು ಮಾಡುವುದೇ ಹೆಚ್ಚು. ಸಿಟ್ಟಿನಲ್ಲಿದ್ದಾಗ ಸರಿ ತಪ್ಪುಗಳನ್ನು ವಿಮರ್ಶಿಸಲು ಸಾಧ್ಯವಿಲ್ಲ. ಇದರಿಂದ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಅತಿಯಾಗಿ ಕೋಪಿಸಿಕೊಳ್ಳುವವರು ನರಕಕ್ಕೆ ಹೋಗುತ್ತಾರೆ, ಆಯಸ್ಸು ಕೂಡ ಕಡಿಮೆಯಾಗುತ್ತದೆ. ಹೀಗಾಗಿ ಸಿಟ್ಟನ್ನು ಕಡಿಮೆ ಮಾಡಿಕೊಂಡು ತಾಳ್ಮೆಯಿಂದ ಇರುವುದನ್ನು ಕಲಿಯಿರಿ ಎಂದು ತಿಳಿಸಿದ್ದಾನೆ ವಿದುರ.
  • ತಾನೇ ದೊಡ್ಡವನು ಎನ್ನುವ ಅಹಂ ಭಾವ : ತಾನು ತನ್ನಿಂದಲೇ ಎನ್ನುವ ಭಾವನೆಯೂ ವ್ಯಕ್ತಿಯ ವಿನಾಶಕ್ಕೆ ಕಾರಣವಾಗುತ್ತದೆ. ತಾನು ಹೇಳಿದ್ದೆ ಸರಿ ಎನ್ನುವ ಅಹಂಕಾರವಿರುವ ವ್ಯಕ್ತಿಯು ಗುರು ಹಿರಿಯರ ಸಲಹೆಗಳಿಗೆ ಕಿವಿಗೊಡುವುದಿಲ್ಲ. ತಮಗಿಂತ ವಯಸ್ಸಿನಲ್ಲಿ ಹಿರಿಯರನ್ನು ಅವಮಾನಿಸುತ್ತಾರೆ. ತಾನೇ ದೊಡ್ಡವನು ಎನ್ನುವ ಅಹಂಕಾರದಿಂದ ಮೆರೆದರೆ ಆ ವ್ಯಕ್ತಿಯ ಆಯಸ್ಸು ಕಡಿಮೆಯಾಗುತ್ತದೆ ಎಂದು ವಿದುರನು ತನ್ನ ನೀತಿಯಲ್ಲಿ ತಿಳಿಸಿದ್ದಾನೆ.
  • ಸ್ವಾರ್ಥ : ಈ ಜಗತ್ತಿನಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗಳು ಒಂದೊಂದು ರೀತಿಯಲ್ಲಿ ಸ್ವಾರ್ಥಿಗಳೇ ಆಗಿರುತ್ತಾರೆ. ಆದರೆ ಸ್ವಾರ್ಥದ ಮನೋಭಾವವು ಬೇರೆಯವರನ್ನು ಉಪಯೋಗಿಸಿಕೊಳ್ಳುವಂತೆ ಮಾಡುತ್ತದೆ. ಹೀಗಾಗಿ ವಿದುರನು ಹೇಳುವಂತೆ ಸ್ವಾರ್ಥಿಯಾದವನಿಗೆ ಒಳ್ಳೆಯದು ಮತ್ತು ಕೆಟ್ಟದ್ದನ್ನು ಗುರುತಿಸಲು ಸಾಧ್ಯವಾಗುವುದಿಲ್ಲ. ತನಗಾಗಿ ತನ್ನ ಜೊತೆಗಿದ್ದ ವ್ಯಕ್ತಿಗಳನ್ನು ಹೇಗೆ ಬೇಕಾದರೂ ಬಳಸಿಕೊಳ್ಳುತ್ತಾನೆ. ಈ ಗುಣದಿಂದ ವ್ಯಕ್ತಿಯ ಆಯಸ್ಸು ಕಡಿಮೆಯಾಗುತ್ತದೆಯಂತೆ.
  • ಮಾತಿನ ಮೇಲೆ ಹಿಡಿತವಿರಲಿ : ಕೆಲವು ಜನರು ಮಾತಿನಿಂದಲೇ ಮನೆ ಕಟ್ಟುತ್ತಾರೆ. ಕೆಲವರದ್ದು ಬಾಯಿಬಿಟ್ಟರೆ ಸಾಕು ಮಾತು ಬಿಟ್ಟರೆ ಬೇರೇನೂ ಇರುವುದಿಲ್ಲ. ಅಂತಹ ವ್ಯಕ್ತಿಗಳನ್ನು ನೀವು ನಿಮ್ಮ ಸುತ್ತಮುತ್ತಲಿನಲ್ಲಿ ಗಮನಿಸಿದ್ದಿರಬಹುದು. ಹೆಚ್ಚು ಮಾತನಾಡುವ ಜನರು ಸುಳ್ಳನ್ನು ಹೇಳುತ್ತಾರೆ. ತಮ್ಮ ಮಾತಿನಿಂದಲೇ ಎದುಗಿರುವ ವ್ಯಕ್ತಿಯ ಮನಸ್ಸನ್ನು ನೋಯಿಸುತ್ತಾರೆ. ಹೀಗಾಗಿ ಮಾತು ಇತಮಿತವಾಗಿರಬೇಕು. ಅಗತ್ಯವಿರುವಷ್ಟು ಮಾತ್ರ ಮಾತನಾಡಬೇಕು. ಅಗತ್ಯ ಮೀರಿ ಮಾತನಾಡಿದರೆ ವ್ಯಕ್ತಿಯ ವಯಸ್ಸು ಕಡಿಮೆಯಾಗುತ್ತದೆ ಎನ್ನುತ್ತಾನೆ ವಿದುರ.
  • ತ್ಯಾಗದ ಭಾವನೆಯಿರಬೇಕು : ಈಗಿನ ಕಾಲದಲ್ಲಿ ತ್ಯಾಗದ ಗುಣವಿರುವ ಜನರನ್ನು ನೋಡುವುದಕ್ಕೆ ಸಿಗುವುದು ಕಡಿಮೆ. ಆದರೆ ವಿದುರನು, ತನ್ನ ಬಗ್ಗೆ ಯೋಚಿಸುವ ಬದಲು ಇನ್ನೊಬ್ಬರ ಬಗ್ಗೆ ಯೋಚಿಸಬೇಕು. ಏನು ಇಲ್ಲದವರನ್ನು ನೋಡಿ ತನ್ನ ಬಳಿ ಇಷ್ಟದರೂ ಇದೆ ಎಂದು ತೃಪ್ತಿ ಪಟ್ಟುಕೊಳ್ಳಬೇಕು. ಕೈಲಾದರೆ ಸಹಾಯ ಅಥವಾ ತ್ಯಾಗ ಮಾಡುವ ಗುಣವಿರಬೇಕು. ತ್ಯಾಗ ಹಾಗೂ ಸಮರ್ಪಣೆ ಮನೋಭಾವವಿಲ್ಲದೇ ಹೋದಲ್ಲಿ ವ್ಯಕ್ತಿಯ ಆಯಸ್ಸು ಕಡಿಮೆಯಾಗಿ, ಸಾವಿಗೆ ಹತ್ತಿರವಾಗುತ್ತಾನೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ
Image
ದೇಹದ ಈ ಭಾಗಕ್ಕೆ ಒತ್ತಡ ಹಾಕಿದ್ರೆ ಮಗು ಅಳುವುದನ್ನು ನಿಲ್ಲಿಸುತ್ತೆ
Image
3 ದಿನ ಸ್ಮಾರ್ಟ್‌ಫೋನ್‌ನಿಂದ ದೂರವಿದ್ದರೆ ನಿಮ್ಮ ಮೆದುಳಿಗೆ ಹೀಗಾಗುತ್ತದೆ!
Image
ಬೇಸಿಗೆಯಲ್ಲಿ ರಾತ್ರಿ ಸ್ನಾನ ಮಾಡುತ್ತೀರಾ?
Image
ಈ ಚಿತ್ರದಲ್ಲಿ ನಿಮ್ಮ ಆಯ್ಕೆಯ ವೃತ್ತವೇ ನಿಮ್ಮ ವ್ಯಕ್ತಿತ್ವ ಹೇಳುತ್ತೆ

Published On - 12:27 pm, Sat, 15 March 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?