AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಉದ್ಘಾಟನೆಯಂದು ಮನೆಯಲ್ಲಿ ಹಾಲು ಪಾಯಸ ಮಾಡಿ ಸವಿಯಿರಿ!

ಹಲವು ದಿನಗಳಿಂದ ಕಾತುರದಿಂದ ಕಾಯುತ್ತಿರುವ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಇನ್ನೇನು ಒಂದೆರಡು ದಿನಗಳಷ್ಟೆ ಬಾಕಿಯಿವೆ. ಜನವರಿ 22ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಸಿದ್ಧತೆಗಳು ಜೋರಾಗಿಯೇ ನಡೆಯುತ್ತಿವೆ. ಕೆಲವರು ತಮ್ಮ ತಮ್ಮ ಮನೆಯಲ್ಲಿ ಆ ದಿನ ಹಬ್ಬದಂತೆ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಹಬ್ಬದ ಅಡುಗೆ ಮಾಡಲು ಪ್ಲಾನ್ ಮಾಡಿಕೊಂಡಿದ್ದರೆ, ಆ ಲಿಸ್ಟ್ ನಲ್ಲಿ ಹಾಲು ಪಾಯಸವನ್ನು ಸೇರಿಸಿಕೊಳ್ಳಬಹುದು.

ರಾಮ ಮಂದಿರ ಉದ್ಘಾಟನೆಯಂದು ಮನೆಯಲ್ಲಿ ಹಾಲು ಪಾಯಸ ಮಾಡಿ ಸವಿಯಿರಿ!
Milk PayasImage Credit source: Pinterest
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 22, 2024 | 4:22 PM

ಹಬ್ಬವೆಂದರೆ ಎಲ್ಲರಿಗೂ ಕೂಡ ಸಂಭ್ರಮವೇ. ಇದೀಗ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಯಂದು ಎಲ್ಲರ ಮನೆ ಮನೆಯಲ್ಲಿ ಹಬ್ಬದ ಸಂಭ್ರಮವು ಮನೆ ಮಾಡುವಂತಿದೆ. ಮನೆಯನ್ನು ಸಿಂಗರಿಸಿ, ಹಬ್ಬದಡುಗೆ ಮಾಡಿ ಸವಿಯಬೇಕು ಎಂದು ಕೊಂಡವರು ಹಲವರಿದ್ದಾರೆ. ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಹಾಲು ಪಾಯಸ ಮಾಡಿ ಸವಿಯಬಹುದಾಗಿದೆ. ಹಾಲು ಪಾಯಸದ ಮಾಡುವ ವಿಧಾನದ ಬಗ್ಗೆ ತಿಳಿಯೋಣ ಬನ್ನಿ.

ಹಾಲು ಪಾಯಸ ಮಾಡಲು ಬೇಕಾಗುವ ಸಾಮಗ್ರಿಗಳು:

ಹಾಲು-4 ಕಪ್, ಅಕ್ಕಿ-2 ಟೇಬಲ್ ಸ್ಪೂನ್, ತುಪ್ಪ-1 ಟೀ ಸ್ಪೂನ್, ಸಕ್ಕರೆ-1/4 ಕಪ್, ಕೇಸರಿದಳ-5 ಎಸಳು, ಏಲಕ್ಕಿ ಪುಡಿ-ಚಿಟಿಕೆ.

ಇದನ್ನೂ ಓದಿ: ರವೆ ಬರ್ಫಿ ಮಾಡುವ ಮೂಲಕ ರಾಮ ಮಂದಿರ ಉದ್ಘಾಟನೆಯನ್ನು ಸಂಭ್ರಮಿಸಿ

ಹಾಲು ಪಾಯಸ ಮಾಡುವ ವಿಧಾನ:

  • ಮೊದಲಿಗೆ ಗ್ಯಾಸ್ ಸ್ಟವ್ ಮೇಲೆ ಒಂದು ಪ್ಯಾನ್ ಇಟ್ಟು ತುಪ್ಪ ಹಾಕಿ, ಬಿಸಿಯಾಗುತ್ತಿದ್ದಂತೆ ಬಾಸುಮತಿ ಅಕ್ಕಿ ಸೇರಿಸಿ ಕೆಂಪಗಾಗುವವರೆಗೆ ಹುರಿದುಕೊಳ್ಳಿ.
  • ಹುರಿದುಕೊಂಡ ಬಾಸುಮತಿ ಅಕ್ಕಿಯನ್ನು ತಣ್ಣಗಾದ ಬಳಿಕ ನೀರು ಹಾಕದೇನೇ ಮಿಕ್ಸಿ ಜಾರಿನಲ್ಲಿ ತರಿ ತರಿಯಾಗಿ ರುಬ್ಬಿಕೊಳ್ಳಿ.
  • ನಂತರ ಒಂದು ಕುಕ್ಕರ್ ಗೆ ಎರಡು ಚಮಚ ತುಪ್ಪ ಹಾಕಿ, ಹಾಲು ಹಾಕಿ ಕುದಿಸಿಕೊಳ್ಳಿ. ಕುದಿಸ ಬಳಿಕ ಈಗಾಗಲೇ ರುಬ್ಬಿದ ಅಕ್ಕಿ ಸೇರಿಸಿ ಕುದಿಸಿ.
  • ಕುದಿಯುತ್ತಿದ್ದಂತೆ ಕುಕ್ಕರ್ ಮುಚ್ಚಳ ಮುಚ್ಚಿ. ಆದರೆ ಕುಕ್ಕರ್ ಸೀಟಿ ಹೊಡೆಯುತ್ತಿದ್ದಂತೆ ಮುಂಚೆಯೇ ಮುಚ್ಚಳ ತೆಗೆದು ಹಾಲು ದಪ್ಪಗಾಗುವವರೆಗೆ ಕುದಿಸಿ ಸಕ್ಕರೆ ಹಾಕಿ ಬೇಯಿಸಿಕೊಳ್ಳಿ.
  • ಕೊನೆಗೆ ಕೇಸರಿ ದಳ, ಏಲ್ಕಕಿ ಪುಡಿ ಸೇರಿಸಿ ಒಮ್ಮೆ ಕಲಸಿಕೊಂಡು, ಬಿಸಿಬಿಸಿಯಾದ ಹಾಲು ಪಾಯಸ ಸವಿಯಿರಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Published On - 2:52 pm, Sun, 21 January 24

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು