AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಉದ್ಘಾಟನೆಯಂದು ಮನೆಯಲ್ಲಿ ಹಾಲು ಪಾಯಸ ಮಾಡಿ ಸವಿಯಿರಿ!

ಹಲವು ದಿನಗಳಿಂದ ಕಾತುರದಿಂದ ಕಾಯುತ್ತಿರುವ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಇನ್ನೇನು ಒಂದೆರಡು ದಿನಗಳಷ್ಟೆ ಬಾಕಿಯಿವೆ. ಜನವರಿ 22ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಸಿದ್ಧತೆಗಳು ಜೋರಾಗಿಯೇ ನಡೆಯುತ್ತಿವೆ. ಕೆಲವರು ತಮ್ಮ ತಮ್ಮ ಮನೆಯಲ್ಲಿ ಆ ದಿನ ಹಬ್ಬದಂತೆ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಹಬ್ಬದ ಅಡುಗೆ ಮಾಡಲು ಪ್ಲಾನ್ ಮಾಡಿಕೊಂಡಿದ್ದರೆ, ಆ ಲಿಸ್ಟ್ ನಲ್ಲಿ ಹಾಲು ಪಾಯಸವನ್ನು ಸೇರಿಸಿಕೊಳ್ಳಬಹುದು.

ರಾಮ ಮಂದಿರ ಉದ್ಘಾಟನೆಯಂದು ಮನೆಯಲ್ಲಿ ಹಾಲು ಪಾಯಸ ಮಾಡಿ ಸವಿಯಿರಿ!
Milk PayasImage Credit source: Pinterest
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on:Jan 22, 2024 | 4:22 PM

Share

ಹಬ್ಬವೆಂದರೆ ಎಲ್ಲರಿಗೂ ಕೂಡ ಸಂಭ್ರಮವೇ. ಇದೀಗ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಯಂದು ಎಲ್ಲರ ಮನೆ ಮನೆಯಲ್ಲಿ ಹಬ್ಬದ ಸಂಭ್ರಮವು ಮನೆ ಮಾಡುವಂತಿದೆ. ಮನೆಯನ್ನು ಸಿಂಗರಿಸಿ, ಹಬ್ಬದಡುಗೆ ಮಾಡಿ ಸವಿಯಬೇಕು ಎಂದು ಕೊಂಡವರು ಹಲವರಿದ್ದಾರೆ. ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಹಾಲು ಪಾಯಸ ಮಾಡಿ ಸವಿಯಬಹುದಾಗಿದೆ. ಹಾಲು ಪಾಯಸದ ಮಾಡುವ ವಿಧಾನದ ಬಗ್ಗೆ ತಿಳಿಯೋಣ ಬನ್ನಿ.

ಹಾಲು ಪಾಯಸ ಮಾಡಲು ಬೇಕಾಗುವ ಸಾಮಗ್ರಿಗಳು:

ಹಾಲು-4 ಕಪ್, ಅಕ್ಕಿ-2 ಟೇಬಲ್ ಸ್ಪೂನ್, ತುಪ್ಪ-1 ಟೀ ಸ್ಪೂನ್, ಸಕ್ಕರೆ-1/4 ಕಪ್, ಕೇಸರಿದಳ-5 ಎಸಳು, ಏಲಕ್ಕಿ ಪುಡಿ-ಚಿಟಿಕೆ.

ಇದನ್ನೂ ಓದಿ: ರವೆ ಬರ್ಫಿ ಮಾಡುವ ಮೂಲಕ ರಾಮ ಮಂದಿರ ಉದ್ಘಾಟನೆಯನ್ನು ಸಂಭ್ರಮಿಸಿ

ಹಾಲು ಪಾಯಸ ಮಾಡುವ ವಿಧಾನ:

  • ಮೊದಲಿಗೆ ಗ್ಯಾಸ್ ಸ್ಟವ್ ಮೇಲೆ ಒಂದು ಪ್ಯಾನ್ ಇಟ್ಟು ತುಪ್ಪ ಹಾಕಿ, ಬಿಸಿಯಾಗುತ್ತಿದ್ದಂತೆ ಬಾಸುಮತಿ ಅಕ್ಕಿ ಸೇರಿಸಿ ಕೆಂಪಗಾಗುವವರೆಗೆ ಹುರಿದುಕೊಳ್ಳಿ.
  • ಹುರಿದುಕೊಂಡ ಬಾಸುಮತಿ ಅಕ್ಕಿಯನ್ನು ತಣ್ಣಗಾದ ಬಳಿಕ ನೀರು ಹಾಕದೇನೇ ಮಿಕ್ಸಿ ಜಾರಿನಲ್ಲಿ ತರಿ ತರಿಯಾಗಿ ರುಬ್ಬಿಕೊಳ್ಳಿ.
  • ನಂತರ ಒಂದು ಕುಕ್ಕರ್ ಗೆ ಎರಡು ಚಮಚ ತುಪ್ಪ ಹಾಕಿ, ಹಾಲು ಹಾಕಿ ಕುದಿಸಿಕೊಳ್ಳಿ. ಕುದಿಸ ಬಳಿಕ ಈಗಾಗಲೇ ರುಬ್ಬಿದ ಅಕ್ಕಿ ಸೇರಿಸಿ ಕುದಿಸಿ.
  • ಕುದಿಯುತ್ತಿದ್ದಂತೆ ಕುಕ್ಕರ್ ಮುಚ್ಚಳ ಮುಚ್ಚಿ. ಆದರೆ ಕುಕ್ಕರ್ ಸೀಟಿ ಹೊಡೆಯುತ್ತಿದ್ದಂತೆ ಮುಂಚೆಯೇ ಮುಚ್ಚಳ ತೆಗೆದು ಹಾಲು ದಪ್ಪಗಾಗುವವರೆಗೆ ಕುದಿಸಿ ಸಕ್ಕರೆ ಹಾಕಿ ಬೇಯಿಸಿಕೊಳ್ಳಿ.
  • ಕೊನೆಗೆ ಕೇಸರಿ ದಳ, ಏಲ್ಕಕಿ ಪುಡಿ ಸೇರಿಸಿ ಒಮ್ಮೆ ಕಲಸಿಕೊಂಡು, ಬಿಸಿಬಿಸಿಯಾದ ಹಾಲು ಪಾಯಸ ಸವಿಯಿರಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Published On - 2:52 pm, Sun, 21 January 24

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?