AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Water Drinking Tips: ನೀರು ಕುಡಿಯಲು ಸರಿಯಾದ ಸಮಯವಿದೆಯೇ ತಜ್ಞರು ಹೇಳುವುದೇನು?

ಬಿಸಿನೀರು ಕುಡಿಯಬೇಕೇ, ತಣ್ಣೀರು ಕುಡಿಯಬೇಕೆ, ಯಾವ ಪ್ರಮಾಣದಲ್ಲಿ ನೀರು ಕುಡಿಯಬೇಕು, ನೀರು ಹೆಚ್ಚು ಕುಡಿದರೆ ಏನಾಗುತ್ತೆ, ಕಡಿಮೆ ಕುಡಿದರೆ ಏನಾಗುತ್ತೆ, ಯಾವ ಸಮಯದಲ್ಲಿ ನೀರು ಕುಡಿದರೆ ಉತ್ತಮ ಇವೆಲ್ಲಾ ಪ್ರಶ್ನೆಗಳು ಒಮ್ಮೆಯಾದರೂ ನಿಮ್ಮ ಮನಸ್ಸಿನಲ್ಲಿ ಬಂದೇ ಬಂದಿರುತ್ತದೆ. ನಿಮ್ಮ ಮನಸ್ಸಿನಲ್ಲಿರುವ ತಳಮಳಕ್ಕೆ ಆರೋಗ್ಯ ತಜ್ಞರು ಏನು ಉತ್ತರ ಕೊಡುತ್ತಾರೆ ಎಂಬುದನ್ನು ನೋಡೋಣ.

Water Drinking Tips: ನೀರು ಕುಡಿಯಲು ಸರಿಯಾದ ಸಮಯವಿದೆಯೇ ತಜ್ಞರು ಹೇಳುವುದೇನು?
ನೀರು
Follow us
ನಯನಾ ರಾಜೀವ್
|

Updated on: Feb 22, 2023 | 8:00 AM

ಬಿಸಿನೀರು ಕುಡಿಯಬೇಕೇ, ತಣ್ಣೀರು ಕುಡಿಯಬೇಕೆ, ಯಾವ ಪ್ರಮಾಣದಲ್ಲಿ ನೀರು ಕುಡಿಯಬೇಕು, ನೀರು ಹೆಚ್ಚು ಕುಡಿದರೆ ಏನಾಗುತ್ತೆ, ಕಡಿಮೆ ಕುಡಿದರೆ ಏನಾಗುತ್ತೆ, ಯಾವ ಸಮಯದಲ್ಲಿ ನೀರು ಕುಡಿದರೆ ಉತ್ತಮ ಇವೆಲ್ಲಾ ಪ್ರಶ್ನೆಗಳು ಒಮ್ಮೆಯಾದರೂ ನಿಮ್ಮ ಮನಸ್ಸಿನಲ್ಲಿ ಬಂದೇ ಬಂದಿರುತ್ತದೆ. ನಿಮ್ಮ ಮನಸ್ಸಿನಲ್ಲಿರುವ ತಳಮಳಕ್ಕೆ ಆರೋಗ್ಯ ತಜ್ಞರು ಏನು ಉತ್ತರ ಕೊಡುತ್ತಾರೆ ಎಂಬುದನ್ನು ನೋಡೋಣ.

ನಿಮ್ಮ ದೇಹದ ಎಲ್ಲಾ ಭಾಗಗಳು ಸರಿಯಾಗಿ ಕಾರ್ಯನಿರ್ವಹಿಸಲು ನೀರಿನ ಅಗತ್ಯವಿದೆ. ನಿಮ್ಮ ದೇಹದಲ್ಲಿ ನೀರಿನ ಕೊರತೆಯಿದ್ದರೆ, ನೀವು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತೀರಿ. ಅದಕ್ಕಾಗಿಯೇ ಪ್ರತಿಯೊಬ್ಬರೂ ಉತ್ತಮ ಆರೋಗ್ಯಕ್ಕಾಗಿ ಸಾಕಷ್ಟು ನೀರು ಕುಡಿಯಲು ಸಲಹೆ ನೀಡುತ್ತಾರೆ.

ಕೆಲವರು ಬೆಳಗ್ಗೆ ಎದ್ದ ತಕ್ಷಣ ಮೊದಲು ನೀರು ಕುಡಿಯಬೇಕು ಎಂದು ಹೇಳುತ್ತಾರೆ. ಅದೇ ಸಮಯದಲ್ಲಿ, ಆಹಾರವನ್ನು ಸೇವಿಸಿದ ತಕ್ಷಣ ನೀರನ್ನು ಕುಡಿಯಬಾರದು ಎಂದು ಅನೇಕರು ಸಲಹೆ ನೀಡುತ್ತಾರೆ.

ಹಾಗಾಗಿ ನೀರು ಕುಡಿಯಲು ಸರಿಯಾದ ಸಮಯ ಎಂಬ ಗೊಂದಲ ನಿಮಗೂ ಇದ್ದಲ್ಲಿ ಪೌಷ್ಟಿಕಾಂಶ ತಜ್ಞ ಲವನೀತ್ ಬಾತ್ರಾ ಈ ನಿಟ್ಟಿನಲ್ಲಿ ಸೂಕ್ತ ಸಲಹೆ ನೀಡುತ್ತಿದ್ದಾರೆ.

ಮತ್ತಷ್ಟು ಓದಿ: ನೀರು ಹೆಚ್ಚು ಕುಡಿಯುವುದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಬಹುದು

ನೀರು ಕುಡಿಯಲು ಉತ್ತಮ ಸಮಯ ಯಾವುದು?

1. ಬೆಳಗ್ಗೆ ಎದ್ದ ನಂತರ: ತಜ್ಞರು ಬೆಳಗ್ಗೆ ನೀವು ಮೊದಲು ನೀರನ್ನು ಕುಡಿಯಬೇಕು ಎಂದು ಶಿಫಾರಸು ಮಾಡುತ್ತಾರೆ. ಉತ್ತಮ ನಿದ್ರೆಯ ನಂತರ, ನಿಮ್ಮ ದೇಹದ ಭಾಗಗಳು ಸಕ್ರಿಯಗೊಳ್ಳುತ್ತವೆ.

2. ವ್ಯಾಯಾಮದ ನಂತರ: ವ್ಯಾಯಾಮದ ನಂತರ ನೀವು ಸಾಕಷ್ಟು ನೀರು ಕುಡಿದರೆ, ಅದು ನಿಮ್ಮ ಹೃದಯ ಬಡಿತವನ್ನು ಸಾಮಾನ್ಯಗೊಳಿಸುತ್ತದೆ. ಹೇಗಾದರೂ, ಬೆವರುವಿಕೆಯಿಂದ ನಿಮ್ಮ ದೇಹದಲ್ಲಿ ನೀರಿನ ಪ್ರಮಾಣವು ಕಡಿಮೆಯಾಗುತ್ತದೆ. ಆದ್ದರಿಂದ, ವ್ಯಾಯಾಮದ ನಂತರ ನೀರನ್ನು ಕುಡಿಯುವುದು ನಿರ್ಜಲೀಕರಣವನ್ನು ತಪ್ಪಿಸಲು ಸಹಾಯ ಮಾಡುತ್ತದೆ.

3. ಆಹಾರ ಸೇವಿಸುವ ಮುನ್ನ: ಆಹಾರ ಸೇವಿಸುವ ಅರ್ಧ ಗಂಟೆ ಮೊದಲು ನೀರು ಕುಡಿಯುವುದು ಪ್ರಯೋಜನಕಾರಿ ಎನ್ನುತ್ತಾರೆ ಪೌಷ್ಟಿಕತಜ್ಞರು. ಮತ್ತೊಂದೆಡೆ, ಆಹಾರವನ್ನು ಸೇವಿಸಿದ ನಂತರ ನೀರು ಕುಡಿಯುವುದು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು.

4. ಅನಾರೋಗ್ಯದ ಸಂದರ್ಭದಲ್ಲಿ: ನೀವು ಅನಾರೋಗ್ಯದಿಂದ ಬಳಲುತ್ತಿರುವಾಗ, ನಿಮ್ಮ ದೇಹಕ್ಕೆ ಬಹಳಷ್ಟು ದ್ರವಗಳು ಬೇಕಾಗುತ್ತವೆ. ಇದು ದೇಹದ ಕಾರ್ಯನಿರ್ವಹಣೆಯೊಂದಿಗೆ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ.

5. ದಣಿವು: ನಿಮ್ಮ ದೇಹವು ನಿರ್ಜಲೀಕರಣಗೊಂಡಾಗ, ನಿಮಗೆ ದಣಿದ ಅನುಭವವಾಗಬಹುದು. ಆದ್ದರಿಂದ ನಿಮ್ಮ ದೇಹವನ್ನು ರೀಚಾರ್ಜ್ ಮಾಡಿ ಮತ್ತು ಫ್ರೆಶ್ ಆಗಿರಿಸಲು ನೀರು ಕುಡಿಯಬೇಕು.

ದೇಹದಲ್ಲಿ ನೀರಿನ ಕೊರತೆಯಾದಾಗ ಕಾಣಿಸಿಕೊಳ್ಳುವ ಲಕ್ಷಣಗಳು ಗಾಢ ಬಣ್ಣದ ಮೂತ್ರ ತಲೆತಿರುಗುವಿಕೆ ಬಾಯಿ ಒಣಗುವುದು ನಿಶ್ಯಕ್ತಿ ದೌರ್ಬಲ್ಯ

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?