AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Menstual Hygiene: ಕೆಲಸದ ಸ್ಥಳಗಳಲ್ಲಿ ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಮಾರ್ಗಗಳು

ಋತುಚಕ್ರದ ನೈರ್ಮಲ್ಯ ನಿರ್ವಹಣೆಯಲ್ಲಿ ಭಾರತವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆಯಾದರೂ, ಸಾಮಾಜಿಕವಾಗಿ ಕೆಲಸದ ಸ್ಥಳಗಳಲ್ಲಿ ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿಯನ್ನು ಮೂಡಿಸುವುದು ಮುಖ್ಯವಾಗಿದೆ.

Menstual Hygiene: ಕೆಲಸದ ಸ್ಥಳಗಳಲ್ಲಿ ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಮಾರ್ಗಗಳು
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: May 30, 2023 | 6:20 PM

Share

ಋತುಚಕ್ರವು ಪ್ರತಿ ತಿಂಗಳು ಮಹಿಳೆಯರು ಅನುಭವಿಸುವ ನೈಸರ್ಗಿಕ ಪ್ರಕ್ರಿಯೆಯಾಗಿದೆ. ಅದರಲ್ಲೂ ಮುಟ್ಟಿನ ಸಮಯದಲ್ಲಿ ಉಂಟಾಗುವ ತೀವ್ರವಾದ ನೋವಿನಿಂದ ಸಾಮಾನ್ಯವಾಗಿ ಮಹಿಳೆಯರಿಗೆ ತಮ್ಮ ಕೆಲಸದ ಸ್ಥಳಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಕಷ್ಟಸಾಧ್ಯವಾಗಬಹುದು. ಇಂತಹ ಸಮಯದಲ್ಲಿ ಅವರಿಗೆ ವಿಶ್ರಾಂತಿಯ ಅಗತ್ಯವಿರುತ್ತದೆ. ಆ ಕಾರಣ ಕೆಲಸದ ಸ್ಥಳಗಳಲ್ಲಿ ಆರೋಗ್ಯಕರ ವಾತಾವರಣವನ್ನು ನಿರ್ಮಿಸುವ ಮೂಲಕ ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯದ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. ಮಹಿಳೆಯರು ಉತ್ತಮ ಮುಟ್ಟಿನ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಸಮರ್ಥರಾದಾಗ, ಅವರು ಹೆಚ್ಚು ಆತ್ಮವಿಶ್ವಾಸದಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ. ಸಂಸ್ಥೆಗಳು ಮುಟ್ಟಿಗೆ ಸಂಬಂಧಿಸಿದ ಉತ್ಪನ್ನಗಳು ಮತ್ತು ವೈದ್ಯಕೀಯ ಸೌಲಭ್ಯಗಳನ್ನು ನಿರ್ವಹಿಸುವುದು ಮುಂತಾದ ಮೂಲಭೂತ ಕ್ರಮಗಳನ್ನು ಕೈಗೊಳ್ಳಬೇಕು. ಹಾಗೂ ಮುಟ್ಟಿನ ನೈರ್ಮಲ್ಯದ ಬಗ್ಗೆ ವಿವಿಧ ಕಾರ್ಯಕ್ರಮಗಳು ಮತ್ತು ತರಬೇತಿಗಳನ್ನು ನಡೆಸುವ ಮೂಲಕ ಜಾಗೃತಿ ಮೂಡಿಸಬೇಕು. ಇದು ಕೇವಲ ಮಹಿಳಾ ಸಹೋದ್ಯೋಗಿಗಳಿಗೆ ಸೀಮಿತವಾಗಿರದೆ ಈ ವಿಷಯದ ಬಗ್ಗೆ ಆರೋಗ್ಯಕರ ಸಂಭಾಷಣೆ ಮುಕ್ತವಾಗಿರಬೇಕು. ಈ ಚಟುವಟಿಕೆಗಳು ಮಹಿಳಾ ಉದ್ಯೋಗಿಗಳಿಗೆ ಅವರು ಅನುಭವಿಸುವ ಒತ್ತಡ ಮತ್ತು ನೋವಿನ ಬಗ್ಗೆ ಹೆಚ್ಚು ಮುಕ್ತವಾಗಿ ಮಾತನಾಡಲು ಸಹಾಯಕವಾಗುತ್ತದೆ.

ಕೆಲಸದ ಸ್ಥಳದಲ್ಲಿ ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಲು ಇರುವ ಮಾರ್ಗಗಳು:

ಶಿಕ್ಷಣ ಮತ್ತು ತರಬೇತಿ: ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಸಮಗ್ರ ಶಿಕ್ಷಣವನ್ನು ಒದಗಿಸುವುದು ಕೆಲಸದ ಸ್ಥಳಗಳಲ್ಲಿ ಮಹಿಳೆಯರು ಆರಾಮದಾಯಕ ವಾತಾವರಣವನ್ನು ಅನುಭವಿಸಲು ಇರುವ ಅತ್ಯಗತ್ಯ ಮಾರ್ಗವಾಗಿದೆ. ಈ ನೈಸರ್ಗಿಕ ಪ್ರಕ್ರಿಯೆಯ ಬಗೆಗಿನ ಮಾಹಿತಿ, ಇದರಿಂದ ಉಂಟಾಗುವ ಆರೋಗ್ಯದ ಮೇಲಿನ ಪರಿಣಾಮ, ಮತ್ತು ಕೆಲಸದ ಸ್ಥಳಗಳಲ್ಲಿ ವಹಿಸಬಹುದಾದ ಸಾಮಾನ್ಯ ಕಾಳಜಿಗಳನ್ನು ಚರ್ಚಿಸಲು ತಜ್ಞರು ಅಥವಾ ಆರೋಗ್ಯ ವೃತ್ತಿಪರರ ನೇತೃತ್ವದಲ್ಲಿ ಕಾರ್ಯಗಾರಗಳನ್ನು ಆಯೋಜಿಸಿ. ಇದರಿಂದ ಕೆಲಸದ ಸ್ಥಳದಲ್ಲಿ ಮುಟ್ಟಿನ ನೋವು ನಿರ್ವಹಣೆ, ನೈರ್ಮಲ್ಯದಂತಹ ವಿಷಯಗಳ ಬಗ್ಗೆ ಪ್ರತಿಯೊಬ್ಬರೂ ಆಳವಾದ ತಿಳುವಳಿಕೆಯನ್ನು ಹೊಂದಲು ಸಹಾಯಕವಾಗುತ್ತದೆ.

ಮುಟ್ಟಿನ ರಜೆ: ಋತುಚಕ್ರದ ರಜೆ ನಿಡುವ ಮೂಲಕ ಮಹಿಳಾ ಸಹೋದ್ಯೋಗಿಗಳು ತಮ್ಮ ಮುಟ್ಟಿನ ನೋವಿನ ಒತ್ತಡವನ್ನು ನಿರ್ವಹಿಸಲು ಸಹಾಯ ಮಾಡಬಹುದು. ಉದ್ಯೋಗದ ಸ್ಥಳಗಳಲ್ಲಿ ಕೆಲಸಗಳು ಒತ್ತಡದಿಂದ ಸಾಗುತ್ತಿರುತ್ತವೆ. ಹೀಗಿರುವಾಗ ಮಹಿಳೆಯರು ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಹಾಗೂ ತೀವ್ರವಾದ ನೋವಿನಿಂದ ಕೆಲಸವನ್ನು ನಿರ್ವಹಿಸಲು ಕಷ್ಟಸಾಧ್ಯವಾಗಬಹುದು. ಆದ್ದರಿಂದ ಮುಟ್ಟಿನ ರಜೆಯನ್ನು ನೀಡುವ ಮೂಲಕ ವಿಶ್ರಾಂತಿಯನ್ನು ಒದಗಿಸಬೇಕು.

ಆರಾಮದಾಯಕ ಪರಿಸರವನ್ನು ರಚಿಸಿ: ಮುಟ್ಟಿನ ಸಮಯದಲ್ಲಿ ಆ ಮಹಿಳಾ ಉದ್ಯೋಗಿಗಳಿಗೆ ಆರಾಮದಾಯಕ ಮತ್ತು ಬೆಂಬಲ ವಾತಾವರಣವನ್ನು ಸೃಷ್ಟಿಸಲು ಕ್ರಮಗಳನ್ನು ತೆಗೆದುಕೊಳ್ಳಿ. ನೈರ್ಮಲ್ಯ ಉತ್ಪನ್ನಗಳಿಗೆ ಸರಿಯಾದ ವಿಲೇವಾರಿ ಆಯ್ಕೆಗಳನ್ನು ಒದಗಿಸಿ. ಮುಟ್ಟಿನ ಸಮಯದಲ್ಲಿ ಮಹಿಳೆಯರು ತೀವ್ರವಾದ ನೋವು, ನಿದ್ರಾಹೀನತೆ ಅಥವಾ ಅನಾರೋಗ್ಯದಿಂದ ಹೋರಾಡುತ್ತಿರುತ್ತಾರೆ. ಇಂತಹ ನೋವನ್ನು ತಗ್ಗಿಸಲು ಮತ್ತು ವಿಶ್ರಾಂತಿ ಪಡೆಯಲು ಉದ್ಯೋಗಿಗಳಿಗೆ ವಿಶ್ರಾಂತಿ ಪಡೆಯಲು ವಿಶ್ರಾಂತಿ ಕೊಠಡಿಯನ್ನು ಒದಗಿಸಬೇಕು.

ಇದನ್ನೂ ಓದಿ:ಚಿತ್ರದುರ್ಗ: ಋತುಚಕ್ರದ ವೇಳೆ ಹಟ್ಟಿಯಿಂದ ಹೊರ ಉಳಿದ ಮಹಿಳೆಯರನ್ನು ಮನೆ ಒಳಗೆ ಬಿಟ್ಟು, ಮೌಢ್ಯ ಆಚರಣೆ ನಿಲ್ಲಿಸುವಂತೆ ಗ್ರಾಮಸ್ಥರಿಗೆ ಶಾಸಕಿ ಪೂರ್ಣಿಮಾ ತರಾಟೆ

ನೈರ್ಮಲ್ಯದ ಉತ್ಪನ್ನವನ್ನು ಒದಗಿಸಿ: ಮುಟ್ಟಿನ ಸಮಯದಲ್ಲಿ ಮಹಿಳೆಯರು ನೈರ್ಮಲ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅವಶ್ಯಕ. ಆದ್ದರಿಂದ ಕೆಲಸದ ಸ್ಥಳದಲ್ಲಿ ಉಚಿತ ಅಥವಾ ಸಬ್ಸಿಡಿ ಸ್ತ್ರಿ ನೈರ್ಮಲ್ಯ ಉತ್ಪನ್ನಗಳನ್ನು ನೀಡುವುದು ಋತುಚಕ್ರದ ಉದ್ಯೋಗಿಗಳಿಗೆ ಬೆಂಬಲವನ್ನು ಪ್ರದರ್ಶಿಸುವ ಸರಳ ಹಾಗೂ ಪರಿಣಾಮಕಾರಿ ಮಾರ್ಗವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ