AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ 5 ನಿಮಿಷ ಈ ಆಸನ ಮಾಡಿ; ಹೊಟ್ಟೆಯ ಬೊಜ್ಜು ಕರಗಿಸಿ

ಪ್ರತಿನಿತ್ಯ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವವರಿಗೆ ಭುಜಂಗಾಸನ ತುಂಬಾ ಉಪಯುಕ್ತ. ಇದು ಬೆನ್ನುನೋವಿನಿಂದಲೂ ಪರಿಹಾರ ನೀಡುತ್ತದೆ.ಯಾವುದೇ ವಯಸ್ಸಿನವರು ಈ ಆಸನವನ್ನು ಸುಲಭವಾಗಿ ಮಾಡಬಹುದು. ಇದರ ಇತರ ಪ್ರಯೋಜನಗಳೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಪ್ರತಿದಿನ 5 ನಿಮಿಷ ಈ ಆಸನ ಮಾಡಿ; ಹೊಟ್ಟೆಯ ಬೊಜ್ಜು ಕರಗಿಸಿ
Bhujangasana
ಅಕ್ಷತಾ ವರ್ಕಾಡಿ
|

Updated on:Feb 09, 2024 | 6:37 PM

Share

ಯೋಗದಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಅದಲ್ಲದೆ ಯೋಗದಿಂದ ಸೌಂದರ್ಯವನ್ನೂ ಹೆಚ್ಚಿಸಬಹುದು. ಯೋಗದಲ್ಲಿ ನೂರಾರು ವಿಧದ ಆಸನಗಳಿವೆ. ನೀವು ಯೋಗದಲ್ಲಿ ಕೆಲವು ರೀತಿಯ ಆಸನಗಳನ್ನು ನಿಯಮಿತವಾಗಿ ಅಭ್ಯಾಸ ಮಾಡಿದರೆ, ಸಾಕಷ್ಟು ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಪ್ರತಿದಿನ ಕಾಲು ಗಂಟೆ ಭುಜಂಗಾಸನ ಮಾಡಿದರೆ ಕೆಲವೇ ದಿನಗಳಲ್ಲಿ ಹೊಟ್ಟೆ ಚಪ್ಪಟೆಯಾಗುತ್ತದೆ. ‘ಯಾವುದೇ ವಯಸ್ಸಿನವರು ಈ ಆಸನವನ್ನು ಸುಲಭವಾಗಿ ಮಾಡಬಹುದು. ಇದರ ಇತರ ಪ್ರಯೋಜನಗಳೇನು ಎಂಬುದನ್ನು ಈಗ ನೋಡೋಣ.

ಭುಜಂಗಾಸನ ಮಾಡುವುದು ಹೇಗೆ?

ಮೊದಲು ಶಾಂತವಾಗಿ ಕುಳಿತುಕೊಳ್ಳಿ. ಅದರ ನಂತರ ನೆಲಕ್ಕೆ ಮುಖ ಮಾಡಿ ಮಲಗಿ. ಈಗ ಎದೆಯ ಭಾಗವನ್ನು ಕೈಗಳ ಮೇಲೆ ಇಟ್ಟುಕೊಂಡು ನಿಧಾನವಾಗಿ ಮೇಲಕ್ಕೆತ್ತಿ. ಅದರ ನಂತರ, ತಲೆ ಎತ್ತಿ ನೋಡಿ. ಇದು ಐದು ನಿಮಿಷ ಇರಬೇಕು. ಅದರ ನಂತರ ಸಾಮಾನ್ಯ ಸ್ಥಿತಿಗೆ ಬನ್ನಿ. ನಿಮ್ಮ ಭಂಗಿಯು ಮೇಲಿನ ಚಿತ್ರದಲ್ಲಿ ನೋಡಿದಂತೆ ಇರಬೇಕು.

ಇದನ್ನೂ ಓದಿ: ವಾಕಿಂಗ್​ನಿಂದ ಆಗುವ ಪ್ರಯೋಜನೆಗಳೇನು?; ನಡಿಗೆಯನ್ನು ಹೆಚ್ಚಿಸುವುದು ಹೇಗೆ?

ಭುಜಂಗ ಆಸನದ ಪ್ರಯೋಜನಗಳು:

  • ಈ ಆಸನ ಮಾಡುವುದರಿಂದ ಭುಜ ಮತ್ತು ಕತ್ತಿನ ಭಾಗಗಳು ವಿಶ್ರಾಂತಿ ಪಡೆಯುತ್ತವೆ. ಯಾವುದೇ ನೋವು ಇದ್ದರೆ, ನೀವು ಅದರಿಂದ ಪರಿಹಾರವನ್ನು ಪಡೆಯುತ್ತೀರಿ.
  • ಪ್ರತಿನಿತ್ಯ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವವರಿಗೆ ಈ ಆಸನ ತುಂಬಾ ಉಪಯುಕ್ತ. ಇದು ಬೆನ್ನುನೋವಿನಿಂದಲೂ ಪರಿಹಾರ ನೀಡುತ್ತದೆ.
  • ಈ ಆಸನ ಮಾಡುವುದರಿಂದ ಎದೆ ಮತ್ತು ಹೊಟ್ಟೆಯ ಸ್ನಾಯುಗಳು ಬಲಗೊಳ್ಳುತ್ತವೆ. ಇದು ಕಿಬ್ಬೊಟ್ಟೆಯ ಸ್ನಾಯುಗಳ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಇದರಿಂದ ಹೊಟ್ಟೆಯ ಬಳಿ ಇರುವ ಕೊಬ್ಬು ಕರಗುತ್ತದೆ. ಈ ಆಸನವನ್ನು ಒಂದು ತಿಂಗಳು ಮಾಡಿದರೆ ಹೊಟ್ಟೆ ತುಂಬಾ ಕುಗ್ಗುತ್ತದೆ.
  • ಆದರೆ, ಉಸಿರಾಟದ ತೊಂದರೆ ಇರುವವರು ಮತ್ತು ಕೈಯಲ್ಲಿ ತೀವ್ರ ನೋವು ಇರುವವರು ಈ ಆಸನವನ್ನು ಮಾಡಬಾರದು. ಈ ಆಸನವನ್ನು ಬೇರೆ ಯಾರು ಬೇಕಾದರೂ ಮಾಡಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 9 February 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?