AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss Tips in Kannada : ನೀವು ಸ್ಲಿಮ್ ಆಗಿ ಕಾಣಬೇಕೆ? ಈ ಪಾನೀಯ ಕುಡಿದರೆ ಬೊಜ್ಜು ಮಂಜಿನಂತೆ ಕರಗುತ್ತೆ

ಇತ್ತೀಚೆಗಿನ ದಿನಗಳಲ್ಲಿ ಒತ್ತಡದ ಜೀವನ ಶೈಲಿ, ಕುಳಿತಲ್ಲಿಯೇ ಕೆಲಸ ಮಾಡುವುದು ಹಾಗೂ ಬದಲಾದ ಆಹಾರ ಪದ್ಧತಿಯಿಂದಾಗಿ ಅತಿಯಾದ ತೂಕ ಸಮಸ್ಯೆಯಿಂದ ಬಳಲುತ್ತಿರುವವರು ಸಂಖ್ಯೆಯೇ ಹೆಚ್ಚು. ಹೀಗಾಗಿ ಹೆಚ್ಚಿನವರು ತಾವು ತೆಳ್ಳಗಾಗಲು ಏನು ಮಾಡಬೇಕು ಎಂದು ಕೇಳುತ್ತಿರುತ್ತಾರೆ. ಹಾಗಾದ್ರೆ ಈ ಕೆಲವು ಪಾನೀಯಗಳನ್ನು ಕುಡಿದರೆ ತೂಕ ಇಳಿಕೆಯಾಗಿ ಬೊಜ್ಜು ಕರಗುವುದಲ್ಲದೆ ಸ್ಲಿಮ್ ಆಗಿ ಕಾಣಿಸಿಕೊಳ್ಳಬಹುದು

Weight Loss Tips in Kannada : ನೀವು ಸ್ಲಿಮ್ ಆಗಿ ಕಾಣಬೇಕೆ? ಈ ಪಾನೀಯ ಕುಡಿದರೆ ಬೊಜ್ಜು ಮಂಜಿನಂತೆ ಕರಗುತ್ತೆ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 26, 2024 | 2:11 PM

ಅತಿಯಾದ ತೂಕವೆನ್ನುವುದು ಎಲ್ಲರ ಸಮಸ್ಯೆಯಾಗಿ ಬಿಟ್ಟಿದೆ. ಹೊಟ್ಟೆ ಕೊಬ್ಬು ಹಾಗೂ ತೂಕ ಇಳಿಕೆಗೆ ಮಾರ್ಗಗಳು ಹಲವರಿದ್ದರೂ ತುಂಬಾ ಸಮಯಗಳ ಕಾಲ ಕಳೆಯಬೇಕಾಗುತ್ತದೆ. ಜಿಮ್‌ನಲ್ಲಿ ಗಂಟೆಗಟ್ಟಲೆ ಬೆವರಿಳಿಸುವುದು, ಡಯಟ್ ಮಾಡುವ ಮೂಲಕ ತೂಕ ಇಳಿಕೆ ಮಾಡಿಕೊಳ್ಳಬಹುದು. ಅಷ್ಟು ಸಮಯವಾಗಲಿ ಹಾಗೂ ತಾಳ್ಮೆಯಾಗಲಿ ಇಂದಿನ ಜನರಿಗೆ ಇಲ್ಲ. ಮನೆಯಲ್ಲೇ ಪಾನೀಯಗಳನ್ನು ತಯಾರಿಸಿ ತೂಕ ಇಳಿಸುವುದು ಸುಲಭ ಮಾರ್ಗವಾಗಿದೆ. ಹೀಗಾಗಿ ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿದರೆ ದೇಹದಲ್ಲಿ ಮ್ಯಾಜಿಕ್ ಆಗುತ್ತದೆ.

ತೂಕ ಇಳಿಕೆಗೆ ಉತ್ತಮ ಪಾನೀಯಗಳು:

ಮೆಂತ್ಯೆ ನೀರು : ರಾತ್ರಿಯ ಒಂದು ಲೋಟ ನೀರಿಗೆ ಮೆಂತ್ಯ ಕಾಳುಗಳನ್ನು ಹಾಕಿ ನೆನೆಸಿಟ್ಟು, ಈ ನೀರನ್ನು ಬಿಸಿ ಮಾಡಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ ತೂಕ ಕಡಿಮೆಯಾಗುವುದಲ್ಲದೆ ಅಸಿಡಿಟಿಯಂತಹ ತೊಂದರೆಗಳು ಶಮನವಾಗುತ್ತದೆ.

ನಿಂಬೆ ನೀರು : ಪ್ರತಿ ದಿನ ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ನೀರಿಗೆ ಅರ್ಧ ನಿಂಬೆ ಹಣ್ಣಿನ ರಸ ಹಾಗೂ ಬೆಲ್ಲವನ್ನು ಬೆರೆಸಿ ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ನಿಂಬೆ ನೀರು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ತೂಕವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಬೆಲ್ಲದ ನೀರು ಕುಡಿದರೆ ಆ ಕಾಯಿಲೆಗಳು ದೂರ!

ಜೀರಿಗೆ ನೀರು : ಪ್ರತಿದಿನ ರಾತ್ರಿ ಒಂದು ಲೋಟ ನೀರಿಗೆ ಒಂದು ಚಮಚ ಜೀರಿಗೆಯನ್ನು ಹಾಕಿ ನೆನೆಸಿಟ್ಟು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಈ ಜೀರಿಗೆ ನೀರು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ತೂಕನಷ್ಟಕ್ಕೆ ಕಾರಣವಾಗುತ್ತದೆ.

ಪುದೀನಾ ನೀರು : ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಪುದೀನಾ ಎಲೆಗಳನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದು ತೂಕ ನಷ್ಟಕ್ಕೆ ಸುಲಭ ಮಾರ್ಗವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಿ ತೂಕ ಕಡಿಮೆಯಾಗುವಂತೆ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?