AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss Tips in Kannada : ನೀವು ಸ್ಲಿಮ್ ಆಗಿ ಕಾಣಬೇಕೆ? ಈ ಪಾನೀಯ ಕುಡಿದರೆ ಬೊಜ್ಜು ಮಂಜಿನಂತೆ ಕರಗುತ್ತೆ

ಇತ್ತೀಚೆಗಿನ ದಿನಗಳಲ್ಲಿ ಒತ್ತಡದ ಜೀವನ ಶೈಲಿ, ಕುಳಿತಲ್ಲಿಯೇ ಕೆಲಸ ಮಾಡುವುದು ಹಾಗೂ ಬದಲಾದ ಆಹಾರ ಪದ್ಧತಿಯಿಂದಾಗಿ ಅತಿಯಾದ ತೂಕ ಸಮಸ್ಯೆಯಿಂದ ಬಳಲುತ್ತಿರುವವರು ಸಂಖ್ಯೆಯೇ ಹೆಚ್ಚು. ಹೀಗಾಗಿ ಹೆಚ್ಚಿನವರು ತಾವು ತೆಳ್ಳಗಾಗಲು ಏನು ಮಾಡಬೇಕು ಎಂದು ಕೇಳುತ್ತಿರುತ್ತಾರೆ. ಹಾಗಾದ್ರೆ ಈ ಕೆಲವು ಪಾನೀಯಗಳನ್ನು ಕುಡಿದರೆ ತೂಕ ಇಳಿಕೆಯಾಗಿ ಬೊಜ್ಜು ಕರಗುವುದಲ್ಲದೆ ಸ್ಲಿಮ್ ಆಗಿ ಕಾಣಿಸಿಕೊಳ್ಳಬಹುದು

Weight Loss Tips in Kannada : ನೀವು ಸ್ಲಿಮ್ ಆಗಿ ಕಾಣಬೇಕೆ? ಈ ಪಾನೀಯ ಕುಡಿದರೆ ಬೊಜ್ಜು ಮಂಜಿನಂತೆ ಕರಗುತ್ತೆ
ಸಾಯಿನಂದಾ
| Edited By: |

Updated on: Apr 26, 2024 | 2:11 PM

Share

ಅತಿಯಾದ ತೂಕವೆನ್ನುವುದು ಎಲ್ಲರ ಸಮಸ್ಯೆಯಾಗಿ ಬಿಟ್ಟಿದೆ. ಹೊಟ್ಟೆ ಕೊಬ್ಬು ಹಾಗೂ ತೂಕ ಇಳಿಕೆಗೆ ಮಾರ್ಗಗಳು ಹಲವರಿದ್ದರೂ ತುಂಬಾ ಸಮಯಗಳ ಕಾಲ ಕಳೆಯಬೇಕಾಗುತ್ತದೆ. ಜಿಮ್‌ನಲ್ಲಿ ಗಂಟೆಗಟ್ಟಲೆ ಬೆವರಿಳಿಸುವುದು, ಡಯಟ್ ಮಾಡುವ ಮೂಲಕ ತೂಕ ಇಳಿಕೆ ಮಾಡಿಕೊಳ್ಳಬಹುದು. ಅಷ್ಟು ಸಮಯವಾಗಲಿ ಹಾಗೂ ತಾಳ್ಮೆಯಾಗಲಿ ಇಂದಿನ ಜನರಿಗೆ ಇಲ್ಲ. ಮನೆಯಲ್ಲೇ ಪಾನೀಯಗಳನ್ನು ತಯಾರಿಸಿ ತೂಕ ಇಳಿಸುವುದು ಸುಲಭ ಮಾರ್ಗವಾಗಿದೆ. ಹೀಗಾಗಿ ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿದರೆ ದೇಹದಲ್ಲಿ ಮ್ಯಾಜಿಕ್ ಆಗುತ್ತದೆ.

ತೂಕ ಇಳಿಕೆಗೆ ಉತ್ತಮ ಪಾನೀಯಗಳು:

ಮೆಂತ್ಯೆ ನೀರು : ರಾತ್ರಿಯ ಒಂದು ಲೋಟ ನೀರಿಗೆ ಮೆಂತ್ಯ ಕಾಳುಗಳನ್ನು ಹಾಕಿ ನೆನೆಸಿಟ್ಟು, ಈ ನೀರನ್ನು ಬಿಸಿ ಮಾಡಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ ತೂಕ ಕಡಿಮೆಯಾಗುವುದಲ್ಲದೆ ಅಸಿಡಿಟಿಯಂತಹ ತೊಂದರೆಗಳು ಶಮನವಾಗುತ್ತದೆ.

ನಿಂಬೆ ನೀರು : ಪ್ರತಿ ದಿನ ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ನೀರಿಗೆ ಅರ್ಧ ನಿಂಬೆ ಹಣ್ಣಿನ ರಸ ಹಾಗೂ ಬೆಲ್ಲವನ್ನು ಬೆರೆಸಿ ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ನಿಂಬೆ ನೀರು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ತೂಕವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಬೆಲ್ಲದ ನೀರು ಕುಡಿದರೆ ಆ ಕಾಯಿಲೆಗಳು ದೂರ!

ಜೀರಿಗೆ ನೀರು : ಪ್ರತಿದಿನ ರಾತ್ರಿ ಒಂದು ಲೋಟ ನೀರಿಗೆ ಒಂದು ಚಮಚ ಜೀರಿಗೆಯನ್ನು ಹಾಕಿ ನೆನೆಸಿಟ್ಟು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಈ ಜೀರಿಗೆ ನೀರು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ತೂಕನಷ್ಟಕ್ಕೆ ಕಾರಣವಾಗುತ್ತದೆ.

ಪುದೀನಾ ನೀರು : ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಪುದೀನಾ ಎಲೆಗಳನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದು ತೂಕ ನಷ್ಟಕ್ಕೆ ಸುಲಭ ಮಾರ್ಗವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಿ ತೂಕ ಕಡಿಮೆಯಾಗುವಂತೆ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!