AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss Tips in Kannada : ನೀವು ಸ್ಲಿಮ್ ಆಗಿ ಕಾಣಬೇಕೆ? ಈ ಪಾನೀಯ ಕುಡಿದರೆ ಬೊಜ್ಜು ಮಂಜಿನಂತೆ ಕರಗುತ್ತೆ

ಇತ್ತೀಚೆಗಿನ ದಿನಗಳಲ್ಲಿ ಒತ್ತಡದ ಜೀವನ ಶೈಲಿ, ಕುಳಿತಲ್ಲಿಯೇ ಕೆಲಸ ಮಾಡುವುದು ಹಾಗೂ ಬದಲಾದ ಆಹಾರ ಪದ್ಧತಿಯಿಂದಾಗಿ ಅತಿಯಾದ ತೂಕ ಸಮಸ್ಯೆಯಿಂದ ಬಳಲುತ್ತಿರುವವರು ಸಂಖ್ಯೆಯೇ ಹೆಚ್ಚು. ಹೀಗಾಗಿ ಹೆಚ್ಚಿನವರು ತಾವು ತೆಳ್ಳಗಾಗಲು ಏನು ಮಾಡಬೇಕು ಎಂದು ಕೇಳುತ್ತಿರುತ್ತಾರೆ. ಹಾಗಾದ್ರೆ ಈ ಕೆಲವು ಪಾನೀಯಗಳನ್ನು ಕುಡಿದರೆ ತೂಕ ಇಳಿಕೆಯಾಗಿ ಬೊಜ್ಜು ಕರಗುವುದಲ್ಲದೆ ಸ್ಲಿಮ್ ಆಗಿ ಕಾಣಿಸಿಕೊಳ್ಳಬಹುದು

Weight Loss Tips in Kannada : ನೀವು ಸ್ಲಿಮ್ ಆಗಿ ಕಾಣಬೇಕೆ? ಈ ಪಾನೀಯ ಕುಡಿದರೆ ಬೊಜ್ಜು ಮಂಜಿನಂತೆ ಕರಗುತ್ತೆ
ಸಾಯಿನಂದಾ
| Edited By: |

Updated on: Apr 26, 2024 | 2:11 PM

Share

ಅತಿಯಾದ ತೂಕವೆನ್ನುವುದು ಎಲ್ಲರ ಸಮಸ್ಯೆಯಾಗಿ ಬಿಟ್ಟಿದೆ. ಹೊಟ್ಟೆ ಕೊಬ್ಬು ಹಾಗೂ ತೂಕ ಇಳಿಕೆಗೆ ಮಾರ್ಗಗಳು ಹಲವರಿದ್ದರೂ ತುಂಬಾ ಸಮಯಗಳ ಕಾಲ ಕಳೆಯಬೇಕಾಗುತ್ತದೆ. ಜಿಮ್‌ನಲ್ಲಿ ಗಂಟೆಗಟ್ಟಲೆ ಬೆವರಿಳಿಸುವುದು, ಡಯಟ್ ಮಾಡುವ ಮೂಲಕ ತೂಕ ಇಳಿಕೆ ಮಾಡಿಕೊಳ್ಳಬಹುದು. ಅಷ್ಟು ಸಮಯವಾಗಲಿ ಹಾಗೂ ತಾಳ್ಮೆಯಾಗಲಿ ಇಂದಿನ ಜನರಿಗೆ ಇಲ್ಲ. ಮನೆಯಲ್ಲೇ ಪಾನೀಯಗಳನ್ನು ತಯಾರಿಸಿ ತೂಕ ಇಳಿಸುವುದು ಸುಲಭ ಮಾರ್ಗವಾಗಿದೆ. ಹೀಗಾಗಿ ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿದರೆ ದೇಹದಲ್ಲಿ ಮ್ಯಾಜಿಕ್ ಆಗುತ್ತದೆ.

ತೂಕ ಇಳಿಕೆಗೆ ಉತ್ತಮ ಪಾನೀಯಗಳು:

ಮೆಂತ್ಯೆ ನೀರು : ರಾತ್ರಿಯ ಒಂದು ಲೋಟ ನೀರಿಗೆ ಮೆಂತ್ಯ ಕಾಳುಗಳನ್ನು ಹಾಕಿ ನೆನೆಸಿಟ್ಟು, ಈ ನೀರನ್ನು ಬಿಸಿ ಮಾಡಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ ತೂಕ ಕಡಿಮೆಯಾಗುವುದಲ್ಲದೆ ಅಸಿಡಿಟಿಯಂತಹ ತೊಂದರೆಗಳು ಶಮನವಾಗುತ್ತದೆ.

ನಿಂಬೆ ನೀರು : ಪ್ರತಿ ದಿನ ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ನೀರಿಗೆ ಅರ್ಧ ನಿಂಬೆ ಹಣ್ಣಿನ ರಸ ಹಾಗೂ ಬೆಲ್ಲವನ್ನು ಬೆರೆಸಿ ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ನಿಂಬೆ ನೀರು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ತೂಕವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಬೆಲ್ಲದ ನೀರು ಕುಡಿದರೆ ಆ ಕಾಯಿಲೆಗಳು ದೂರ!

ಜೀರಿಗೆ ನೀರು : ಪ್ರತಿದಿನ ರಾತ್ರಿ ಒಂದು ಲೋಟ ನೀರಿಗೆ ಒಂದು ಚಮಚ ಜೀರಿಗೆಯನ್ನು ಹಾಕಿ ನೆನೆಸಿಟ್ಟು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಈ ಜೀರಿಗೆ ನೀರು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ತೂಕನಷ್ಟಕ್ಕೆ ಕಾರಣವಾಗುತ್ತದೆ.

ಪುದೀನಾ ನೀರು : ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಪುದೀನಾ ಎಲೆಗಳನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದು ತೂಕ ನಷ್ಟಕ್ಕೆ ಸುಲಭ ಮಾರ್ಗವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಿ ತೂಕ ಕಡಿಮೆಯಾಗುವಂತೆ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು