AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫೀಸ್​ ಅಲ್ಲಿ ಕೆಲಸದ ಮಧ್ಯೆ ಹಸಿವಾದರೆ ಈ ಆರೋಗ್ಯಕರ ಆಹಾರಗಳನ್ನು ಸೇವಿಸಿ

ಪದೇ ಪದೇ ಆಹಾರವನ್ನು ಸೇವಿಸುವುದರಿಂದ ನಿಮ್ಮ ತೂಕ ಹೆಚ್ಚಳವಾಗುವುದಿಲ್ಲ, ನೀವು ಯಾವ ರೀತಿಯ ಆಹಾರವನ್ನು ಸೇವಿಸುತ್ತೀರಿ ಎಂಬುದು ಮುಖ್ಯವಾಗುತ್ತದೆ.

ಆಫೀಸ್​ ಅಲ್ಲಿ ಕೆಲಸದ ಮಧ್ಯೆ ಹಸಿವಾದರೆ ಈ ಆರೋಗ್ಯಕರ ಆಹಾರಗಳನ್ನು ಸೇವಿಸಿ
Food
TV9 Web
| Edited By: |

Updated on: Aug 25, 2022 | 10:21 AM

Share

ಪದೇ ಪದೇ ಆಹಾರವನ್ನು ಸೇವಿಸುವುದರಿಂದ ನಿಮ್ಮ ತೂಕ ಹೆಚ್ಚಳವಾಗುವುದಿಲ್ಲ, ನೀವು ಯಾವ ರೀತಿಯ ಆಹಾರವನ್ನು ಸೇವಿಸುತ್ತೀರಿ ಎಂಬುದು ಮುಖ್ಯವಾಗುತ್ತದೆ. ನೀವು ಕಚೇರಿಯಲ್ಲಿದ್ದಾಗ ಕೆಲಸದ ಮಧ್ಯೆ ಹಸಿವಾದಾಗ ಎಲ್ಲೋ ಹೋಗಿ ತಿಂಡಿ ತಿಂದು ಬರಲು ಸಾಧ್ಯವಿಲ್ಲ, ಹೀಗಾಗಿ ಈ ತಿನಿಸುಗಳು ನಿಮ್ಮ ಹೊಟ್ಟೆಯನ್ನು ತುಂಬಿಸುವುದರ ಜತೆಗೆ ನಿಮ್ಮ ತೂಕವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತವೆ.

ಈ ಆಹಾರವನ್ನು ಸೇವಿಸಿ ಬಾದಾಮಿ: ನೀವು ನಿಮ್ಮ ಡಯೆಟ್​ನಲ್ಲಿ ಬಾದಾಮಿಯನ್ನು ಸೇರಿಸಿಕೊಳ್ಳಬಹುದು, ಇದರಲ್ಲಿ ಸಾಕಷ್ಟು ಪೋಷಕಾಂಶಗಳು ಇರುತ್ತವೆ. ಅಷ್ಟೇ ಅಲ್ಲದೆ ಫೈಬರ್, ಪ್ರೋಟೀನ್, ಆರೋಗ್ಯಕರ ಕೊಬ್ಬು, ವಿಟಮಿನ್ ಈ ಹಾಗೂ ಆ್ಯಂಡಿಆಕ್ಸಿಡೆಂಟ್ಸ್​ಗಳು ಇರುತ್ತವೆ. ಪ್ರೋಟೀನ್ ಹಾಗೂ ಫೈಬರ್​ನಿಂದಾಗಿ ನೀವು ಸಾಕಷ್ಟು ಸಮಯಗಳ ಕಾಲ ಹೊಟ್ಟೆ ತುಂಬಿದ ಅನುಭವವಾಗುವುದು.

ಪಾಪ್​ಕಾರ್ನ್​: ಪಾಪ್​ಕಾರ್ನ್​ನಲ್ಲಿ ಫೈಬರ್ ಅಂಶ ಉತ್ತಮವಾಗಿರಲಿದೆ. ಪಾಪ್​ಕಾರ್ನ್​ ನಿಮ್ಮನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದು ಕೂಡ ನಿಮ್ಮ ಹೊಟ್ಟೆಯನ್ನು ತುಂಬಿದಂತಿಡಲು ನೆರವಾಗುತ್ತದೆ. ನೀವು ಪಾಪ್​ಕಾರ್ನ್ ಅನ್ನು ನಿಮ್ಮ ಡಯೆಟ್​ನಲ್ಲಿ ಸೇರಿಸಬಹುದು.

ಮೊಳಕೆಕಾಳು: ನಿಮ್ಮ ಆಹಾರದಲ್ಲಿ ಮೊಳಕೆಕಅಳುಗಳನ್ನು ಸೇರಿಸಿಕೊಳ್ಳಬಹುದು. ಈ ಮೊಳಕೆಕಾಳುಗಳು ತುಂಬಾ ಆರೋಗ್ಯಕರ ಮತ್ತು ಟೇಸ್ಟಿ. ಇದರಲ್ಲಿ ಫೈಬರ್ ಮತ್ತು ಪ್ರೊಟೀನ್ ಸಮೃದ್ಧವಾಗಿದೆ. ಇದರಿಂದ ನೀವು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇದರೊಂದಿಗೆ ನೀವು ಅನಾರೋಗ್ಯಕರ ಆಹಾರವನ್ನು ಸೇವಿಸುವುದಿಲ್ಲ. ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

ಓಟ್ಸ್:  ನೀವು ಓಟ್ಸ್ ಸೇವಿಸಬಹುದು. ಇದು ತುಂಬಾ ಆರೋಗ್ಯಕರ ಮತ್ತು ರುಚಿಕರವಾಗಿದೆ. ಇದು ಫೈಬರ್ ಅನ್ನು ಹೊಂದಿರುತ್ತದೆ. ಇದನ್ನು ಸೇವಿಸಿದ ನಂತರ, ನೀವು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದಂತಾಗುತ್ತದೆ. ಈ ಕಾರಣದಿಂದಾಗಿ ನೀವು ಹೆಚ್ಚು ಅನಾರೋಗ್ಯಕರ ಆಹಾರವನ್ನು ಸೇವಿಸಲು ಸಾಧ್ಯವಾಗುವುದಿಲ್ಲ.

ಹಣ್ಣು: ನಿಮ್ಮ ಆಹಾರದಲ್ಲಿ ಋತುಮಾನದ ಹಣ್ಣುಗಳನ್ನು ಸೇರಿಸಿಕೊಳ್ಳಬಹುದು. ಅವು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಹಣ್ಣುಗಳಲ್ಲಿ ಹೆಚ್ಚಿನ ನೀರಿನ ಅಂಶವಿದೆ. ಇದರಿಂದ ನೀವು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು