AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫೀಸ್​ ಅಲ್ಲಿ ಕೆಲಸದ ಮಧ್ಯೆ ಹಸಿವಾದರೆ ಈ ಆರೋಗ್ಯಕರ ಆಹಾರಗಳನ್ನು ಸೇವಿಸಿ

ಪದೇ ಪದೇ ಆಹಾರವನ್ನು ಸೇವಿಸುವುದರಿಂದ ನಿಮ್ಮ ತೂಕ ಹೆಚ್ಚಳವಾಗುವುದಿಲ್ಲ, ನೀವು ಯಾವ ರೀತಿಯ ಆಹಾರವನ್ನು ಸೇವಿಸುತ್ತೀರಿ ಎಂಬುದು ಮುಖ್ಯವಾಗುತ್ತದೆ.

ಆಫೀಸ್​ ಅಲ್ಲಿ ಕೆಲಸದ ಮಧ್ಯೆ ಹಸಿವಾದರೆ ಈ ಆರೋಗ್ಯಕರ ಆಹಾರಗಳನ್ನು ಸೇವಿಸಿ
Food
TV9 Web
| Edited By: |

Updated on: Aug 25, 2022 | 10:21 AM

Share

ಪದೇ ಪದೇ ಆಹಾರವನ್ನು ಸೇವಿಸುವುದರಿಂದ ನಿಮ್ಮ ತೂಕ ಹೆಚ್ಚಳವಾಗುವುದಿಲ್ಲ, ನೀವು ಯಾವ ರೀತಿಯ ಆಹಾರವನ್ನು ಸೇವಿಸುತ್ತೀರಿ ಎಂಬುದು ಮುಖ್ಯವಾಗುತ್ತದೆ. ನೀವು ಕಚೇರಿಯಲ್ಲಿದ್ದಾಗ ಕೆಲಸದ ಮಧ್ಯೆ ಹಸಿವಾದಾಗ ಎಲ್ಲೋ ಹೋಗಿ ತಿಂಡಿ ತಿಂದು ಬರಲು ಸಾಧ್ಯವಿಲ್ಲ, ಹೀಗಾಗಿ ಈ ತಿನಿಸುಗಳು ನಿಮ್ಮ ಹೊಟ್ಟೆಯನ್ನು ತುಂಬಿಸುವುದರ ಜತೆಗೆ ನಿಮ್ಮ ತೂಕವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತವೆ.

ಈ ಆಹಾರವನ್ನು ಸೇವಿಸಿ ಬಾದಾಮಿ: ನೀವು ನಿಮ್ಮ ಡಯೆಟ್​ನಲ್ಲಿ ಬಾದಾಮಿಯನ್ನು ಸೇರಿಸಿಕೊಳ್ಳಬಹುದು, ಇದರಲ್ಲಿ ಸಾಕಷ್ಟು ಪೋಷಕಾಂಶಗಳು ಇರುತ್ತವೆ. ಅಷ್ಟೇ ಅಲ್ಲದೆ ಫೈಬರ್, ಪ್ರೋಟೀನ್, ಆರೋಗ್ಯಕರ ಕೊಬ್ಬು, ವಿಟಮಿನ್ ಈ ಹಾಗೂ ಆ್ಯಂಡಿಆಕ್ಸಿಡೆಂಟ್ಸ್​ಗಳು ಇರುತ್ತವೆ. ಪ್ರೋಟೀನ್ ಹಾಗೂ ಫೈಬರ್​ನಿಂದಾಗಿ ನೀವು ಸಾಕಷ್ಟು ಸಮಯಗಳ ಕಾಲ ಹೊಟ್ಟೆ ತುಂಬಿದ ಅನುಭವವಾಗುವುದು.

ಪಾಪ್​ಕಾರ್ನ್​: ಪಾಪ್​ಕಾರ್ನ್​ನಲ್ಲಿ ಫೈಬರ್ ಅಂಶ ಉತ್ತಮವಾಗಿರಲಿದೆ. ಪಾಪ್​ಕಾರ್ನ್​ ನಿಮ್ಮನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದು ಕೂಡ ನಿಮ್ಮ ಹೊಟ್ಟೆಯನ್ನು ತುಂಬಿದಂತಿಡಲು ನೆರವಾಗುತ್ತದೆ. ನೀವು ಪಾಪ್​ಕಾರ್ನ್ ಅನ್ನು ನಿಮ್ಮ ಡಯೆಟ್​ನಲ್ಲಿ ಸೇರಿಸಬಹುದು.

ಮೊಳಕೆಕಾಳು: ನಿಮ್ಮ ಆಹಾರದಲ್ಲಿ ಮೊಳಕೆಕಅಳುಗಳನ್ನು ಸೇರಿಸಿಕೊಳ್ಳಬಹುದು. ಈ ಮೊಳಕೆಕಾಳುಗಳು ತುಂಬಾ ಆರೋಗ್ಯಕರ ಮತ್ತು ಟೇಸ್ಟಿ. ಇದರಲ್ಲಿ ಫೈಬರ್ ಮತ್ತು ಪ್ರೊಟೀನ್ ಸಮೃದ್ಧವಾಗಿದೆ. ಇದರಿಂದ ನೀವು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಇದರೊಂದಿಗೆ ನೀವು ಅನಾರೋಗ್ಯಕರ ಆಹಾರವನ್ನು ಸೇವಿಸುವುದಿಲ್ಲ. ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

ಓಟ್ಸ್:  ನೀವು ಓಟ್ಸ್ ಸೇವಿಸಬಹುದು. ಇದು ತುಂಬಾ ಆರೋಗ್ಯಕರ ಮತ್ತು ರುಚಿಕರವಾಗಿದೆ. ಇದು ಫೈಬರ್ ಅನ್ನು ಹೊಂದಿರುತ್ತದೆ. ಇದನ್ನು ಸೇವಿಸಿದ ನಂತರ, ನೀವು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದಂತಾಗುತ್ತದೆ. ಈ ಕಾರಣದಿಂದಾಗಿ ನೀವು ಹೆಚ್ಚು ಅನಾರೋಗ್ಯಕರ ಆಹಾರವನ್ನು ಸೇವಿಸಲು ಸಾಧ್ಯವಾಗುವುದಿಲ್ಲ.

ಹಣ್ಣು: ನಿಮ್ಮ ಆಹಾರದಲ್ಲಿ ಋತುಮಾನದ ಹಣ್ಣುಗಳನ್ನು ಸೇರಿಸಿಕೊಳ್ಳಬಹುದು. ಅವು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಹಣ್ಣುಗಳಲ್ಲಿ ಹೆಚ್ಚಿನ ನೀರಿನ ಅಂಶವಿದೆ. ಇದರಿಂದ ನೀವು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್