ತೂಕ ಇಳಿಸಿಕೊಳ್ಳಲು ಮಧ್ಯಂತರ ಉಪವಾಸ ಮಹಿಳೆಯರಿಗೆ ಸುರಕ್ಷಿತವೇ?

ಮಧ್ಯಂತರ ಉಪವಾಸವು ಜನರು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡ ಮತ್ತು ಕೊಬ್ಬಿನ ಉತ್ತಮ ನಿಯಂತ್ರಣದೊಂದಿಗೆ ಉತ್ತಮ ಆರೋಗ್ಯವನ್ನು ಪಡೆಯಲು ಸಹಾಯ ಮಾಡುತ್ತದೆ ಎಂಬುದು ನಿಜ. ಆದರೆ, ತಜ್ಞರ ಪ್ರಕಾರ, ಈ ಮಧ್ಯಂತರ ಉಪವಾಸ ಆಹಾರ ಯೋಜನೆ ಮಹಿಳೆಯರಿಗೆ ಒಳ್ಳೆಯದಲ್ಲ.

ತೂಕ ಇಳಿಸಿಕೊಳ್ಳಲು ಮಧ್ಯಂತರ ಉಪವಾಸ ಮಹಿಳೆಯರಿಗೆ ಸುರಕ್ಷಿತವೇ?
ಸಾಂದರ್ಭಿಕ ಚಿತ್ರ
Follow us
|

Updated on: Mar 30, 2024 | 2:02 PM

ಪುರುಷರಿಗೆ ಹೋಲಿಸಿದರೆ ಮಹಿಳೆಯರಲ್ಲಿ ಮಧ್ಯಂತರ ಉಪವಾಸದ ಆರೋಗ್ಯದ ಪರಿಣಾಮವು ವಿಭಿನ್ನವಾಗಿರುತ್ತದೆ. “ಸ್ತ್ರೀ ಹಾರ್ಮೋನುಗಳು ಈಸ್ಟ್ರೊಜೆನ್ ಮತ್ತು ಪ್ರೊಜೆಸ್ಟರಾನ್ ಮೇಲೆ ಪ್ರಭಾವ ಬೀರುತ್ತವೆ. ಇದು ಮಹಿಳೆಯರ ಪಿರಿಯಡ್ಸ್ ಮತ್ತು ಫಲವತ್ತತೆಯ ಮೇಲೆ ಪರಿಣಾಮ ಬೀರಬಹುದು ಎಂದು ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯ ಕ್ಲಿನಿಕಲ್ ನ್ಯೂಟ್ರಿಷನ್ ಮತ್ತು ಡಯೆಟಿಕ್ಸ್ ವಿಭಾಗದ ಸೇವೆಗಳ ಮುಖ್ಯಸ್ಥ ಎಡ್ವಿನಾ ರಾಜ್ ಮಾಹಿತಿ ನೀಡಿದ್ದಾರೆ.

ಮಧ್ಯಂತರ ಉಪವಾಸವು ಮಹಿಳೆಯರ ಆರೋಗ್ಯವನ್ನು ಹೇಗೆ ಅಡ್ಡಿಪಡಿಸುತ್ತದೆ?:

ಮಹಿಳೆಯರ ಪಿರಿಯಡ್ಸ್​ನಲ್ಲಿ ಹಾರ್ಮೋನ್‌ಗಳ ಏರಿಕೆ ಮತ್ತು ಕುಸಿತವನ್ನು GnRH ಎಂಬ ಮತ್ತೊಂದು ಹಾರ್ಮೋನ್ ನಿಯಂತ್ರಿಸುತ್ತದೆ. ಮಹಿಳೆ ಉಪವಾಸ ಮಾಡುವಾಗ GnRH ಹಾರ್ಮೋನ್ ತೊಂದರೆಗೊಳಗಾಗುತ್ತದೆ. ಆದ್ದರಿಂದ ಈಸ್ಟ್ರೊಜೆನ್ ಮತ್ತು ಪ್ರೊಜೆಸ್ಟರಾನ್ ಸಮತೋಲನದ ಮೇಲೆ ಪರಿಣಾಮ ಬೀರುತ್ತದೆ. ಈಸ್ಟ್ರೊಜೆನ್ ಮತ್ತು ಪ್ರೊಜೆಸ್ಟರಾನ್‌ನಲ್ಲಿನ ಅಡಚಣೆಯಿಂದಾಗಿ ಮಹಿಳೆಯರು ತಲೆನೋವು ಅನುಭವಿಸಬಹುದು, ಕಡಿಮೆ ಲೈಂಗಿಕ ಬಯಕೆಯನ್ನು ಪಡೆಯಬಹುದು ಮತ್ತು ನಿದ್ರೆಯಲ್ಲಿ ತೊಂದರೆ ಅನುಭವಿಸಬಹುದು ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: Health Tips: ಮಧ್ಯಂತರ ಉಪವಾಸ ಮಾಡುತ್ತೀರಾ? ತಜ್ಞರ ಈ ಸಲಹೆಗಳನ್ನು ನೆನಪಿನಲ್ಲಿಟ್ಟುಕೊಳ್ಳಿ

ಮಧ್ಯಂತರ ಉಪವಾಸವು ಯಾವುದೇ ಮಹಿಳೆಯ ಆರೋಗ್ಯದಲ್ಲಿ ಅಡ್ಡಿ ಉಂಟುಮಾಡಬಹುದು. ಇದು ಗರ್ಭಿಣಿಯಾಗಲು ಪ್ರಯತ್ನಿಸುತ್ತಿರುವವರಿಗೆ ಗರ್ಭಿಣಿ ಅಥವಾ ಹಾಲುಣಿಸುವವರಿಗೆ ಹೆಚ್ಚು ತೊಂದರೆ ಉಂಟುಮಾಡಬಹುದು. ಗರ್ಭಿಣಿಯಾಗಲು ಪ್ರಯತ್ನಿಸುತ್ತಿರುವ ಮಹಿಳೆಯರು ಉಪವಾಸವನ್ನು ತಪ್ಪಿಸಬೇಕು. ಏಕೆಂದರೆ ಇದು ಅಂಡೋತ್ಪತ್ತಿ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದರಿಂದ ಗರ್ಭಿಣಿಯಾಗಲು ಕಷ್ಟವಾಗುತ್ತದೆ.

ನಿಮ್ಮ ಋತುಚಕ್ರದ ಸಮಯದಲ್ಲಿ ಉಪವಾಸ ಮಾಡಲು ಉತ್ತಮ ಸಮಯವೆಂದರೆ ನಿಮ್ಮ ಪಿರಿಯಡ್ಸ್ ಪ್ರಾರಂಭವಾದ 1 ದಿನ ಅಥವಾ 2 ದಿನಗಳ ನಂತರ. ಅಥವಾ 1 ವಾರದ ನಂತರ. ಹೆಚ್ಚಿನ ಪ್ರೊಟೀನ್ ಅಥವಾ ಹೆಚ್ಚಿನ ಫೈಬರ್ ಊಟದೊಂದಿಗೆ ನಿಮ್ಮ ಉಪವಾಸವನ್ನು ಅಂತ್ಯಗೊಳಿಸಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ