AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಯಾಮ ಮಾಡದೆಯೂ ದೇಹದ ತೂಕ ಇಳಿಸಿಕೊಳ್ಳಿ: ಇಲ್ಲಿದೆ ಸರಳ ಉಪಾಯ

Weight Loss Tips: ವ್ಯಾಯಾಮಕ್ಕೆ ಬೇಕಾದ ಸೂಕ್ತ ಮಾರ್ಗದರ್ಶನದ ಕೊರತೆ ಇತ್ಯಾದಿ. ಕೆಲವೊಮ್ಮೆ ಸರಿಯಾದ ಕ್ರಮದಲ್ಲಿ ವ್ಯಾಯಾಮ ಮಾಡದಿದ್ದರೆ ಅದರಿಂದಲೇ ಅನಾರೋಗ್ಯ ಉಂಟಾಗುವ ಸಾಧ್ಯತೆಗಳಿರುತ್ತವೆ, ಹೀಗಾಗಿ ವ್ಯಾಯಾಮ ಮಾಡದೆ ಅಥವಾ ಜಿಮ್ ಗೆ ಹೋಗದೆಯೂ ದೇಹದ ತೂಕವನ್ನು ಇಳಿಸಿಕೊಳ್ಳುವತ್ತ ಗಮನಹರಿಸುವವರ ಸಂಖ್ಯೆ ಹೆಚ್ಚಾಗಿದೆ.

ವ್ಯಾಯಾಮ ಮಾಡದೆಯೂ ದೇಹದ ತೂಕ ಇಳಿಸಿಕೊಳ್ಳಿ: ಇಲ್ಲಿದೆ ಸರಳ ಉಪಾಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 04, 2021 | 2:55 PM

Share

ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಅತಿಯಾದ ದೇಹದ ತೂಕ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೊರೋನಾ ಬಳಿಕವಂತೂ ಜಿಮ್ ಗಳು ಸರಿಯಾಗಿ ತೆರೆದಿರದ ಕಾರಣ ದೇಹದ ತೂಕ ಇಳಿಸಿಕೊಳ್ಳಲು ಹಲವು ದಾರಿಗಳನ್ನು ಹುಡುಕುವಂತಾಗಿದೆ. ಹೀಗಾಗಿ ಈಗ ಜಿಮ್​ಗೆ ಹೋಗದೆ, ಮನೆಯಲ್ಲಿ ವ್ಯಾಯಾಮ ಮಾಡಲು ಇಷ್ಟವಾಗದೆ ದೇಹದ ತೂಕ ಇಳಿಸಿಕೊಳ್ಳುವತ್ತ ಹೊಸ ಉಪಾಯಗಳನ್ನು ಹುಡುಕುತ್ತಿದ್ದಾರೆ.

ವೈದ್ಯರು ಹೆಚ್ಚಾಗಿ ವ್ಯಾಯಾಮವನ್ನೇ ಶಿಫಾರಸ್ಸು ಮಾಡುತ್ತಾರೆ. ಏಕೆಂದರೆ ವ್ಯಾಯಾಮದ ದೇಹದಲ್ಲಿರುವ ಅನಗತ್ಯ ಕ್ಯಾಲೋರಿಗಳನ್ನು ತೆಗೆದು ಸದೃಢ ದೇಹವನ್ನು ಹೊಂದಲು ಸಹಕಾರಿಯಾಗಿದೆ. ಜತೆಗೆ ಅತಿಯಾದ ದೇಹದ ತೂಕವನ್ನೂ ಕಡಿಮೆ ಮಾಡಿ ದೇಹವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತದೆ. ಆದರೆ ಕೆಲವರು ವ್ಯಾಯಾಮ ಮಾಡಲು ಇಷ್ಟಪಡುವುದಿಲ್ಲ. ಅದಕ್ಕೆ ಕಾರಣಗಳು ಹಲವಿರಬಹುದು. ಉದಾಹರಣೆಗೆ ಸಮಯದ ಅಭಾವ, ಯೋಗ ಅಥವಾ ವ್ಯಾಯಾಮಕ್ಕೆ ಬೇಕಾದ ಸೂಕ್ತ ಮಾರ್ಗದರ್ಶನದ ಕೊರತೆ ಇತ್ಯಾದಿ. ಕೆಲವೊಮ್ಮೆ ಸರಿಯಾದ ಕ್ರಮದಲ್ಲಿ ವ್ಯಾಯಾಮ ಮಾಡದಿದ್ದರೆ ಅದರಿಂದಲೇ ಅನಾರೋಗ್ಯ ಉಂಟಾಗುವ ಸಾಧ್ಯತೆಗಳಿರುತ್ತವೆ, ಹೀಗಾಗಿ ವ್ಯಾಯಾಮ ಮಾಡದೆ ಅಥವಾ ಜಿಮ್ ಗೆ ಹೋಗದೆಯೂ ದೇಹದ ತೂಕವನ್ನು ಇಳಿಸಿಕೊಳ್ಳುವತ್ತ ಗಮನಹರಿಸುವವರ ಸಂಖ್ಯೆ ಹೆಚ್ಚಾಗಿದೆ. ವ್ಯಾಯಾಮ ಮಾಡದೆ ದೇಹದತೂಕವನ್ನು ಕಡಿಮೆ ಮಾಡಿಕೊಳ್ಳುವುದ ಹೇಗೇ ಅಂತೀರಾ? ಇಲ್ಲಿದೆ ಸರಳ ಉಪಾಯ ನೋಡಿ,

ಸರಿಯಾದ ಪ್ರಮಾಣದಲ್ಲಿ ನೀರಿನ ಸೇವನೆ

ದಿನದಲ್ಲಿ3-4 ಲೀಟರ್ ನಷ್ಟಾದರೂ ನೀರನ್ನು ಕುಡಿಯಬೇಕು. ನೀರಿನ ಸೇವನೆಯಿಂದ ದೇಹದಲ್ಲಿನ ಅತಿಯಾದ ಬೊಜ್ಜು ಕರಗುತ್ತದೆ. ಅಲ್ಲದೆ ಬೇಗನೆ ಹಸಿವಾಗುವುದಿಲ್ಲ. ಇದರಿಂದ ಪದೇ ಪದೇ ತಿನ್ನುವ ಅಭ್ಯಾಸಕ್ಕೆ ಕಡಿವಾಣ ಹಾಕಬಹುದುಮುಖ್ಯವಾಗಿ ಬಿಸಿನೀರಿನ ಸೇವನೆಯಿಂದ ಹೊಟ್ಟೆಯ ಬೊಜ್ಜು ಕರಗಿಸಲು ಸಹಾಯಕವಾಗಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ಉಗುರು ಬೆಚ್ಚಗಿನ ನೀರಿನ ಸೇವನೆ ತೂಕ ಇಳಿಕೆಗೆ ಉತ್ತಮ ಹಾಗು ಸರಳ ಮಾರ್ಗವಾಗಿದೆ.

ಬೆಳಗ್ಗಿನ ತಿಂಡಿ ಸರಿಯಾಗಿರಲಿ

ಬೆಳಗ್ಗಿನ ತಿಂಡಿ ದೇಹಕ್ಕೆ ಹೊಸ ಹುರುಪು ನೀಡುತ್ತದೆ. ಇಡೀ ದಿನದ ಕಾರ್ಯಶೀಲತೆಗೆ ಸರಿಯಾದ ತಿಂಡಿ ಅವಶ್ಯಕವಾಗಿದೆ. ಆದ್ದರಿಂದ ಮೊಳಕೆಯೊಡೆದ ಹೆಸರುಕಾಳು, ಹಣ್ಣುಗಳು, ಮೊಟ್ಟೆ, ಓಟ್ಸ್, ತರಕಾರಿ ಜ್ಯೂಸ್​ಗಳನ್ನು ಸೇವನೆ ಒಳ್ಳೆಯದು. ತಿಂಗಳಿಗೊಮ್ಮೆಯಾದರೂ ಉಪವಾಸದ ಅಭ್ಯಾಸವಿರಲಿ. ಉಪವಾಸದಿಂದ ದೇಹ ಶುದ್ಧಗೊಳ್ಳುತ್ತದೆ. ದೇಹದಲ್ಲಿನ ಅನಾವಶ್ಯಕ ಕ್ಯಾಲೊರಿಗಳು ಕಡಿಮೆಯಾಗುತ್ತದೆ. ಇದರಿಂದ ಸರಳವಾಗಿ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ.

ಸಿಹಿತಿನಿಸುಗಳ ಬಳಕೆಗೆ ಕಡಿವಾಣವಿರಲಿ

ಸಕ್ಕರೆಯು ದೇಹದ ತೂಕವನ್ನು ಹೆಚ್ಚಿಸುತ್ತದೆ. ಸಕ್ಕರೆಯ ಅತಿಯಾದ ಬಳಕೆಯಿಂದ ಬೊಜ್ಜು, ಮಧುಮೇಹದಂತಹ ಕಾಯಿಲೆಗಳು ಸುಲಭವಾಗಿ ದೇಹವನ್ನು ಆಕ್ರಮಿಸಿಕೊಳ್ಳುತ್ತವೆ. ಸಿಹಿತಿನಿಸುಗಳನ್ನು ತಿನ್ನಬೇಕೆನಿಸಿದಾಗ ಬೆಲ್ಲ ಅಥವಾ ಜೇನುತುಪ್ಪದ ಸೇವನೆ ಆರೋಗ್ಯವನ್ನು ಬಲಪಡಿಸುವಲ್ಲಿ ಸಹಾಯಕವಾಗಿದೆ

ಕೊರೋನಾದಂತಹ ಕಾಯಿಲೆಗಳಿಂದಲೂ ದೂರವಿರಲು ಉತ್ತಮ ದಿನಚರಿ ಅವಶ್ಕವಾಗಿದೆ.  ಹೀಗಾಗಿ ಈ ಮೇಲಿನ ಸರಳವಿಧಾನಗಳನ್ನು ಅನುಸರಿಸಿದರೆ ವ್ಯಾಯಾಮ ಮಾಡದೆ ಮನೆಯಲ್ಲಿಯೇ ಸುಲಭವಾಗಿ ಅತಿಯಾದ ದೇಹದ ತೂಕವನ್ನು ಇಳಿಸಿಕೊಳ್ಳಬಹುದಾಗಿದೆ.  ಜತಗೆ ಆರೋಗ್ಯಯುತ  ದೇಹವನ್ನು ಕಾಪಾಡಿಕೊಳ್ಳಬಹುದಾಗಿದೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು