AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿನಿತ್ಯ ಪುಸ್ತಕ ಓದುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಈಗಿನ ಜನರಂತೂ ಸೋಷಿಯಲ್‌ ಮೀಡಿಯಾವನ್ನು ನೋಡೋದರಲ್ಲಿಯೇ ಸಮಯ ಕಳೆಯುತ್ತಿದ್ದಾರೆ. ಅತಿ ಹೆಚ್ಚು ಮೊಬೈಲ್‌ ನೋಡೋದರಿಂದ ಒತ್ತಡ ಹೆಚ್ಚಾಗುತ್ತದೆಯೇ ವಿನಃ ಯಾವುದೇ ಪ್ರಯೋಜನಗಳು ಲಭಿಸುವುದಿಲ್ಲ. ಇದರ ಬದಲು ಸ್ವಲ್ಪ ಹೊತ್ತು ಪುಸ್ತಕ ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಇದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅವು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಪ್ರತಿನಿತ್ಯ ಪುಸ್ತಕ ಓದುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
ಸಾಂದರ್ಭಿಕ ಚಿತ್ರ Image Credit source: Pexels
ಮಾಲಾಶ್ರೀ ಅಂಚನ್​
|

Updated on: Dec 17, 2025 | 10:21 AM

Share

ಪುಸ್ತಕ (books) ಮನುಷ್ಯನ ಅತ್ಯುತ್ತಮ ಸ್ನೇಹಿತ ಎಂದು ಹೇಳ್ತಾರೆ. ಪುಸ್ತಕವನ್ನು ಓದುವುದರಿಂದ ಜ್ಞಾನವನ್ನು ಗಳಿಸುವುದರ ಜೊತೆಗೆ ಸಾಕಷ್ಟು ಪ್ರಯೋಜನಗಳನ್ನೂ ಪಡೆಯಬಹುದು. ಆದರೆ ಇಂದಿನ ಈ ಡಿಜಿಟಲ್‌ ಯುಗದಲ್ಲಿ ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗಿದೆ. ಬಹುತೇಕರು ಸ್ಮಾರ್ಟ್‌ ಫೋನ್‌ನಲ್ಲಿಯೇ ಸಮಯ ಕಳೆಯುತ್ತಿದ್ದಾರೆ. ಇದರಿಂದ ಒತ್ತಡ ಹೆಚ್ಚಾಗುತ್ತದೆಯೇ ವಿನಃ ಯಾವುದೇ ಲಾಭಗಳಿಲ್ಲ. ಹೀಗಿರುವಾಗ ಮೊಬೈಲ್‌ ಪಕ್ಕಕ್ಕಿಟ್ಟು ಪ್ರತಿನಿತ್ಯ ಸ್ವಲ್ಪ ಹೊತ್ತು ಕಥೆ, ಕಾದಂಬರಿ ಸೇರಿದಂತೆ ನಿಮ್ಮಿಷ್ಟದ ಪುಸ್ತಕ ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಈ ಒಂದು ಅಭ್ಯಾಸದಿಂದ ಏನೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಪುಸ್ತಕ ಓದುವುದರಿಂದ ಲಭಿಸುವ ಪ್ರಯೋಜನಗಳೇನು?

ಓದುವುದು ಮೆದುಳಿನ ವ್ಯಾಯಾಮದ ಒಂದು ರೂಪ. ನಾವು ಓದಿದಾಗ, ನಮ್ಮ ಮೆದುಳು ಸಕ್ರಿಯವಾಗುತ್ತದೆ ಮತ್ತು ಹಲವಾರು ವಿಚಾರಗಳು, ಆಲೋಚನೆಗಳು ಮತ್ತು ಸಂಗತಿಗಳನ್ನು ಪ್ರಕ್ರಿಯೆಗೊಳಿಸುತ್ತದೆ. ನಿಯಮಿತವಾಗಿ ಓದುವುದರಿಂದ ಮೆದುಳಿನ ಕಾರ್ಯವನ್ನು ಸುಧಾರಣೆಯಾಗುತ್ತದೆ ಮತ್ತು ಆಲೋಚನೆ ಮತ್ತು ಗ್ರಹಿಕೆಯ ಸಾಮರ್ಥ್ಯಗಳನ್ನು ಸುಧಾರಿಸುತ್ತದೆ, ಇದು ಮಾನಸಿಕ ನಮ್ಯತೆಯನ್ನು ಹೆಚ್ಚಿಸುತ್ತದೆ ಎಂದು ಸಂಶೋಧನೆಗಳು ಸಾಬೀತುಪಡಿಸಿವೆ. ಅಲ್ಲದೆ ದೈನಂದಿನ ಓದುವ ಅಭ್ಯಾಸವು ಆಲ್ಝೈಮರ್ ಮತ್ತು ಬುದ್ಧಿಮಾಂದ್ಯತೆಯಂತಹ ಮಾನಸಿಕ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದಂತೆ.

ಒತ್ತಡ ಕಡಿಮೆಯಾಗುತ್ತದೆ: ಇಂದಿನ ವೇಗದ ಜೀವನದಲ್ಲಿ, ಪ್ರತಿಯೊಬ್ಬರೂ ಒಂದಲ್ಲ ಒಂದು ವಿಷಯದ ಬಗ್ಗೆ ಚಿಂತಿತರಾಗಿರುತ್ತಾರೆ, ಒತ್ತಡದಲ್ಲಿರುತ್ತಾರೆ. ಹೀಗಿರುವಾಗ ಪುಸ್ತಕವನ್ನು ಓದುವ ಮೂಲಕ ಒತ್ತಡದಿಂದ ಮುಕ್ತಿ ಪಡೆಯಬಹುದು. ನೀವು ಒತ್ತಡ, ಖಿನ್ನತೆ ಅಥವಾ ಆತಂಕವನ್ನು ಅನುಭವಿಸಿದಾಗಲೆಲ್ಲಾ, ಪುಸ್ತಕವನ್ನು ಓದಿ.

ಭಾಷೆ ಸುಧಾರಣೆ: ಪ್ರತಿದಿನ ಪುಸ್ತಕಗಳನ್ನು ಓದುವುದರಿಂದ ನಿಮ್ಮ ಶಬ್ದಕೋಶ ಹೆಚ್ಚಾಗುತ್ತದೆ. ನೀವು ಹೊಸ ಪದಗಳನ್ನು ಕಲಿಯುತ್ತೀರಿ, ಇದು ನಿಮ್ಮ ಮಾತನಾಡುವ ಮತ್ತು ಬರೆಯುವ ಕೌಶಲ್ಯವನ್ನು ಸುಧಾರಿಸುತ್ತದೆ. ಪುಸ್ತಕಗಳನ್ನು ಓದುವ ಮಕ್ಕಳು ಮತ್ತು ವಯಸ್ಕರು ಇತರರಿಗಿಂತ ಉತ್ತಮ ಭಾಷಾ ಕೌಶಲ್ಯವನ್ನು ಹೊಂದಿರುತ್ತಾರೆ.

ನಿದ್ರೆಯನ್ನು ಸುಧಾರಿಸುತ್ತದೆ: ಪುಸ್ತಕಗಳನ್ನು ಓದುವುದರಿಂದ ನಿದ್ರಾಹೀನತೆ ದೂರವಾಗುತ್ತದೆ. ಓದುವುದರಿಂದ ಮನಸ್ಸಿಗೆ ವಿಶ್ರಾಂತಿ ಸಿಗುತ್ತದೆ, ಇದು ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸಲು ತುಂಬಾನೃ ಸಹಕಾರಿಯಾಗಿದೆ.  ಉತ್ತಮ ನಿದ್ರೆ ಪಡೆಯಲು ಬಯಸಿದರೆ ನೀವು ಸಹ ಮಲಗುವ ಮುನ್ನ ಪುಸ್ತಕ ಓದುವುದನ್ನು ರೂಢಿಸಿಕೊಳ್ಳಿ.

ಇದನ್ನೂ ಓದಿ: ಹೊಳೆಯುವ ತ್ವಚೆ ನಿಮ್ಮದಾಗಲು ಸ್ನಾನಕ್ಕೂ ಮುನ್ನ ದೇಹಕ್ಕೆ ಎಣ್ಣೆಯ ಮಸಾಜ್‌ ಮಾಡಿಕೊಳ್ಳಿ

ಗಮನವನ್ನು ಹೆಚ್ಚಿಸುತ್ತದೆ: ನೀವು ಪುಸ್ತಕವನ್ನು ಓದುವಾಗ, ನಿಮ್ಮ ಸಂಪೂರ್ಣ ಗಮನವು ಕಥೆ ಅಥವಾ ಮಾಹಿತಿಯ ಮೇಲೆ ಕೇಂದ್ರೀಕೃತವಾಗಿರುತ್ತದೆ. ಈ ಅಭ್ಯಾಸವು ನಿಮ್ಮ ಗಮನವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಓದು ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ, ಅತ್ಯಂತ ಸವಾಲಿನ ಸಂದರ್ಭಗಳನ್ನು ಸಹ ಸುಲಭವಾಗಿ ಎದುರಿಸಲು ನಿಮಗೆ ಅನುವು ಮಾಡಿಕೊಡುತ್ತದೆ. ಪುಸ್ತಕಗಳು ಜೀವನದ ವಿವಿಧ ಅಂಶಗಳ ಬಗ್ಗೆ ತಿಳಿದುಕೊಳ್ಳಲು ನಿಮಗೆ ಸಹಾಯ ಮಾಡುತ್ತವೆ, ಎಲ್ಲಾ ರೀತಿಯ ಸಮಸ್ಯೆಗಳನ್ನು ಉತ್ತಮವಾಗಿ ನಿಭಾಯಿಸಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್