AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Black Pepper: ಕರಿಮೆಣಸು ಚಿಕ್ಕದಾದರೂ ಆರೋಗ್ಯದ ಮೇಲೆ ಬೀರುವ ಪ್ರಭಾವ ದೊಡ್ಡದು..!

ಕರಿಮೆಣಸು ಮತ್ತು ತುಪ್ಪವನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ವಾಸ್ತವವಾಗಿ, ಕರಿಮೆಣಸು ವಿಟಮಿನ್ಗಳು ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ.

Black Pepper: ಕರಿಮೆಣಸು ಚಿಕ್ಕದಾದರೂ ಆರೋಗ್ಯದ ಮೇಲೆ ಬೀರುವ ಪ್ರಭಾವ ದೊಡ್ಡದು..!
ತುಪ್ಪ, ಕರಿಮೆಣಸು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 29, 2022 | 7:00 AM

Share

ಕರಿಮೆಣಸು ಅಥವಾ ಕಾಳುಮೆಣಸು ಚಿಕ್ಕದಾಗಿದ್ದರೂ ಆರೋಗ್ಯಕ್ಕೆ (Health) ತುಂಬಾ ಪ್ರಯೋಜನಕಾರಿ ಎಂಬುದರಲ್ಲಿ ಎರಡು ಮಾತಿಲ್ಲ. ಕರಿಮೆಣಸು (Black Pepper) ವಿಟಮಿನ್ ಸಿ, ಎ, ಕ್ಯಾರೋಟಿನ್ ಮತ್ತು ಇತರೆ ನಿರೋಧಕಗಳಂತಹ ಗುಣಗಳನ್ನು ಹೊಂದಿದೆ. ಕರಿಮೆಣಸು ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಕರಿಮೆಣಸನ್ನು ಸೇವಿಸುವುದರಿಂದ ಕ್ಯಾನ್ಸರ್ ತಡೆಗಟ್ಟುವ ಸ್ವತಂತ್ರ ರಾಡಿಕಲ್‌ಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಕರಿಮೆಣಸನ್ನು ತುಪ್ಪದೊಂದಿಗೆ ಬೆರೆಸಿ ಸೇವಿಸುವುದರೊಂದಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನಲಾಗುತ್ತದೆ. ಅದೇ ರೀತಿಯಾಗಿ ಕರಿಮೆಣಸಿಣ ಕೆಲ ಪ್ರಯೋಜನಗಳನ್ನು ತಿಳಿಯೋಣ.

ಇದನ್ನೂ ಓದಿ; International Friendship Day 2022: ಮಾನಸಿಕ ಆರೋಗ್ಯದ ಮೇಲೆ ಸ್ನೇಹ ಹೇಗೆ ಪರಿಣಾಮ ಬೀರುತ್ತೆ?

ಒಣ ಕೆಮ್ಮಿಗೆ ಪರಿಹಾರ: 

ಕರಿಮೆಣಸನ್ನು ಸೇವಿಸುವುದರಿಂದ ಒಣ ಕೆಮ್ಮಿನಿಂದ ಶೀಘ್ರ ಮುಕ್ತಿ ಪಡೆಯಬಹುದು. ಒಣ ಕೆಮ್ಮಿನಿಂದ ಮುಕ್ತಿ ಪಡೆಯಲು 1/2 ಚಮಚ ಕರಿಮೆಣಸನ್ನು ಒಂದು ಚಮಚ ದೇಸಿ ತುಪ್ಪದೊಂದಿಗೆ ಬೆರೆಸಿ ಸೇವಿಸಬಹುದು. ಕರಿಮೆಣಸು ಶಾಖವನ್ನು ಕಡಿಮೆ ಮಾಡುವುದರೊಂದಿಗೆ ಇದು ಕೆಮ್ಮಿನಿಂದ ಪರಿಹಾರ ನೀಡುತ್ತದೆ. ಕಾಳುಮೆಣಸನ್ನು ತುಪ್ಪದೊಂದಿಗೆ ಬೆರೆಸಿ ತಿನ್ನುವುದರಿಂದ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ. ಕರಿಮೆಣಸು ವಿಟಮಿನ್ ಸಿಯಿಂದ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನೆಗಡಿ, ಕೆಮ್ಮಿನಂತಹ ಸಮಸ್ಯೆಗಳಿದ್ದರೆ ಕರಿಮೆಣಸಿನ ಪುಡಿಯನ್ನು ತುಪ್ಪದಲ್ಲಿ ಕಲಸಿ ತಿನ್ನುವುದು ಒಳ್ಳೆಯದು.

ಇದನ್ನೂ ಓದಿ; World Nature Conservation Day 2022: ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಉದ್ದೇಶ, ಮಹತ್ವ, ಇತಿಹಾಸದ ಬಗ್ಗೆ ಮಾಹಿತಿ

ದೃಷ್ಟಿ ಸುಧಾರಿಸುವಲ್ಲಿ ಸಹಕಾರಿ:

ದೃಷ್ಟಿ ದುರ್ಬಲವಾಗಿರುವವರಿಗೂ ಕರಿಮೆಣಸು ಸೇವಿಸುವುದರಿಂದ ಸಹ ಪ್ರಯೋಜನಕಾರಿಯಾಗಿದೆ. ಇದಕ್ಕಾಗಿ, ಕೆಲವು ಹನಿ ದೇಸಿ ತುಪ್ಪದಲ್ಲಿ ಕರಿಮೆಣಸಿನ ಪುಡಿಯನ್ನು ಮಿಶ್ರಣ ಮಾಡಿ, ಪ್ರತಿದಿನ ತಿನ್ನಿರಿ. ಜೊತೆಗೆ ಇದನ್ನು ಪಾದದ ಅಡಿಭಾಗಕ್ಕೂ ಅನ್ವಯಿಸಬಹುದಾಗಿದೆ. ದೃಷ್ಟಿ ಸಮಸ್ಯೆ ಇರುವವರಿಗೂ ಇದು ಪ್ರಯೋಜನಕಾರಿಯಾಗಿದೆ.

ಕೀಲು ನೋವು:

ವಯಸ್ಸಾದಂತೆ ಪ್ರತಿಯೊಬ್ಬರಿಗೂ ಕೀಲು ನೋವು ಸಮಸ್ಯೆ ಕಾಣಿಸಿಕೊಳ್ಳುವುದು ಸಾಮಾನ್ಯ. ಈ ಕೀಲು ನೋವಿನಿಂದ ಮುಕ್ತಿ ಹೊಂದಲು ಬಯಸುವವರು ತುಪ್ಪದೊಂದಿಗೆ ಕರಿಮೆಣಸು ಸೇವಿಸುವುದು ಉತ್ತಮ. ಹುರಿದ ಕಾಳುಮೆಣಸಿನೊಂದಿಗೆ ತುಪ್ಪ ಸೇವಿಸಿದರೆ ಕೀಲು ನೋವಿನಿಂದ ತಕ್ಷಣ ಪರಿಹಾರ ಸಿಗುತ್ತದೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್