AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Obesity: ಬೊಜ್ಜಿನಿಂದ ಎದುರಾಗುವ ಆರೋಗ್ಯ ಸಮಸ್ಯೆಗಳ ಸುತ್ತ ಒಂದು ಸುತ್ತು

Obesity: ದೇಹದ ಬೊಜ್ಜು( Obesity) ನಿಮ್ಮನ್ನು ಖಿನ್ನತೆಯವರೆಗೂ ಕೊಂಡೊಯ್ಯಬಹುದು ಎಚ್ಚರವಾಗಿರಿ. ಬೊಜ್ಜಿನ ಸಮಸ್ಯೆ ಎಂಬುದು ಮಕ್ಕಳಿಂದ ಹಿಡಿದು ವಯಸ್ಕರವರನ್ನೂ ಕಾಡುವಂತಹ ಆರೋಗ್ಯ ಸಮಸ್ಯೆಯಾಗಿದೆ.

Obesity: ಬೊಜ್ಜಿನಿಂದ ಎದುರಾಗುವ ಆರೋಗ್ಯ ಸಮಸ್ಯೆಗಳ ಸುತ್ತ ಒಂದು ಸುತ್ತು
Obesity
TV9 Web
| Updated By: ನಯನಾ ರಾಜೀವ್|

Updated on:Jun 11, 2022 | 3:40 PM

Share

ದೇಹದ ಬೊಜ್ಜು( Obesity) ನಿಮ್ಮನ್ನು ಖಿನ್ನತೆಯವರೆಗೂ ಕೊಂಡೊಯ್ಯಬಹುದು ಎಚ್ಚರವಾಗಿರಿ. ಬೊಜ್ಜಿನ ಸಮಸ್ಯೆ ಎಂಬುದು ಮಕ್ಕಳಿಂದ ಹಿಡಿದು ವಯಸ್ಕರವರನ್ನೂ ಕಾಡುವಂತಹ ಆರೋಗ್ಯ ಸಮಸ್ಯೆಯಾಗಿದೆ. ಇತ್ತೀಚೆಗೆ ಮಕ್ಕಳಲ್ಲಿ ದೇಹದ ಕೊಬ್ಬು, ಬಾಡಿ ಮಾಸ್ ಇಂಡೆಕ್ಸ್​ ಪ್ರಮಾಣ ಹೆಚ್ಚಳವಾಗುತ್ತಿದ್ದು, ಸಾವಿನ ಪ್ರಮಾಣವೂ ಅಧಿಕವಾಗುತ್ತಿದೆ. ಜೀವನಶೈಲಿ, ಜೀನ್​, ಒತ್ತಡ, ನಿದ್ರಾಹೀನತೆ ಸೇರಿದಂತೆ ಹಲವು ಸಮಸ್ಯೆಗಳಿಂದಅಗಿ ಒಬೆಸಿಟಿ ತೊಂದರೆ ಕಾಣಿಸಿಕೊಳ್ಳುತ್ತದೆ.

ಅಜೀರ್ಣ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳು ಸಹ ಹೊಟ್ಟೆ ಉಬ್ಬಿದಂತೆ ಕಾಣುವಂತೆ ಮಾಡುತ್ತದೆ. ಹೊಟ್ಟೆಯ ಸುತ್ತ ಇರುವ ಕೆಟ್ಟ ಕೊಬ್ಬು ಯಾವಾಗಲೂ ಆರೋಗ್ಯಕ್ಕೆ ಹಾನಿಕಾರಕ .

ಹಾರ್ಮೋನುಗಳ ಅಸಮತೋಲನ, ಅನಾರೋಗ್ಯಕರ ಆಹಾರ ಪದ್ಧತಿ, ನಿಧಾನ ಜೀರ್ಣಕ್ರಿಯೆ, ಗಂಟೆಗಟ್ಟಲೆ ಕುಳಿತುಕೊಳ್ಳುವುದು, ದೈಹಿಕ ಚಟುವಟಿಕೆಯ ಕೊರತೆ, ಜಂಕ್ ಫುಡ್, ಲಘು ಆಹಾರ ಪದ್ಧತಿ ಮತ್ತು ಒತ್ತಡದಿಂದ ಹೊಟ್ಟೆಯ ಕೊಬ್ಬು ಉಂಟಾಗುತ್ತದೆ.

ಸೂರ್ಯನ ಕಿರಣಗಳಿಗೆ ಒಡ್ಡಿಕೊಳ್ಳುವುದರಿಂದ ಹಾರ್ಮೋನುಗಳನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುವುದರ ಜೊತೆಗೆ ಸೇವಿಸುವ ಆಹಾರದಲ್ಲಿನ ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ. ಬೆಳಗ್ಗೆ ಸೂರ್ಯ ನಮಸ್ಕಾರ ಮಾಡುವುದರಿಂದ ದೇಹಕ್ಕೆ ಚೈತನ್ಯ ಬರುತ್ತದೆ.

ಹೈಪರ್​ಟೆನ್ಷನ್ ಹಾಗೂ ಕೊಲೆಸ್ಟ್ರಾಲ್: ಬೊಜ್ಜಿನ ತೊಂದರೆ ಇರುವವರಲ್ಲಿ ಅಧಿಕ ರಕ್ತದೊತ್ತಡ ಸಮಸ್ಯೆಯೂ ಕಾಡಬಹುದು. ಕೊಬ್ಬು ಕೂಡ ಅಧಿಕವಾಗಿರಬಹುದು. ಇವೆಲ್ಲವೂ ಹೃದಯ ಸಂಬಂಧಿ ಸಮಸ್ಯೆಗಳ ಹುಟ್ಟಿಗೆ ಕಾರಣವಾಗಬಹುದು.

ಮಧುಮೇಹ: ಬೊಜ್ಜು ಟೈಪ್ 2 ಮಾದರಿಯ ಮಧುಮೇಹಕ್ಕೆ ಕಾರಣವಾಗುತ್ತದೆ. ಇದರಿಂದಾಗಿ ರೋಗಿಯು ಇನ್ಸುಲಿನ್ ತೆಗೆದುಕೊಳ್ಳುವಂತಾಗುತ್ತದೆ. ಈ ಇನ್ಸುಲಿನ್ ರಕ್ತದಲ್ಲಿರುವ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ. ಒಂದೊಮ್ಮೆ ಒಬೆಸಿಟಿ ಹೆಚ್ಚಾದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಅಧಿಕಗೊಳ್ಳುವುದು.

ಸಂಧಿನೋವು: ಬೊಜ್ಜು ಸಂಧಿವಾತವನ್ನುಂಟು ಮಾಡುತ್ತದೆ. ಸ್ನಾಯು ಸೆಳೆತ ಉಂಟಾಗಲು ನಡೆಯಲು ಕಷ್ಟವಾಗುವಂತಹ ಪರಿಸ್ಥಿತಿ ಎದುರಾಗುತ್ತದೆ.

ನಿದ್ರಾಹೀನತೆ: ಒಬೆಸಿಟಿಯು ಹೆಚ್ಚಾದಾಗ ಹುಳಿ ತೇಗು ಬಂದಂತಹ ಅನುಭವವಾಗುವುದು, ರಾತ್ರಿ ಎಷ್ಟು ಹೊತ್ತು ಕಳೆದರೂ ನಿದ್ರೆ ಬರುವುದೇ ಇಲ್ಲ, ಉಸಿರಾಟದ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇದೆ.

ಖಿನ್ನತೆ: ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದಾಗಿ ಖಿನ್ನತೆ ಉಂಟಾಗುವ ಸಾಧ್ಯತೆ ಹೆಚ್ಚಿದೆ, ನೀವು ನರ್ವಸ್​ ಆಗಿದ್ದು, ಒಬ್ಬಂಟಿ ಎಂಬ ಮನೋಭಾವ ನಿಮ್ಮನ್ನು ಕಾಡುತ್ತದೆ. ಜನರ ಸಂಪರ್ಕವನ್ನೇ ಕಳೆದುಕೊಳ್ಳುತ್ತಾರೆ.

ಮಕ್ಕಳ ಆರೋಗ್ಯ ಕಾಪಾಡುವುದು ಪೋಷಕರ ಕರ್ತವ್ಯ ಮಕ್ಕಳು ಫಾಸ್ಟ್​ಫುಡ್​ಗಳಿಗೆ ಮೊರೆ ಹೋಗುತ್ತಿದ್ದಾರೆ, ಅವರು ತಿನ್ನುವ ಆಹಾರಗಳು ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತಿದೆ. ಹೀಗಾಗಿ ಕರಿದ ಪದಾರ್ಥಗಳನ್ನು ತಿನ್ನುವುದನ್ನು ಕಡಿಮೆ ಮಾಡಿಸಿ, ನಿತ್ಯ ವಾಕಿಂಗ್, ಸೈಕ್ಲಿಂಗ್, ಜಿಮ್, ಸ್ವಿಮ್ಮಿಂಗ್, ಜೂಂಬಾ, ಓಟ ಸೇರಿದಂತೆ ಹಲವು ಚಟುವಟಿಕೆಗಳಲ್ಲಿ ಅವರನ್ನು ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Sat, 11 June 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ