AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಣಗಿದ ನಿಂಬೆಯನ್ನು ಎಸೆಯುವ ಬದಲು ಈ ರೀತಿಯಾಗಿ ಉಪಯೋಗಿಸಿಕೊಳ್ಳಿ

ಮಾರುಕಟ್ಟೆಯಿಂದ ತಂದಂತಹ ನಿಂಬೆ ಹಣ್ಣುಗಳು ಕೆಲವೇ ದಿನಗಳಲ್ಲಿ ಒಣಗಿಬಿಡುತ್ತದೆ. ಈ ಒಣಗಿದ ನಿಂಬೆ ವ್ಯರ್ಥ, ಅದರಿಂದ ಯಾವುದೇ ಉಪಯೋಗವಿಲ್ಲ ಎಂದು ಬಹುತೇಕ ಹೆಚ್ಚಿನವರು ಅದನ್ನು ಎಸೆದು ಬಿಡುತ್ತಾರೆ. ಆದರೆ ಅವುಗಳಿಂದಲೂ ಹಲವು ಉಪಯೋಗಳಿವೆ. ಹೌದು ಅವುಗಳನ್ನು ಮನೆ ಕೆಲಸಗಳನ್ನು ಮಾಡಲು ಬಳಸಬಹುದು. ಒಣಗಿದ ನಿಂಬೆಹಣ್ಣಿನಿಂದ ಏನೆಲ್ಲಾ ಉಪಯೋಗಗಳಿವೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಒಣಗಿದ ನಿಂಬೆಯನ್ನು ಎಸೆಯುವ ಬದಲು ಈ ರೀತಿಯಾಗಿ ಉಪಯೋಗಿಸಿಕೊಳ್ಳಿ
ಸಾಂದರ್ಭಿಕ ಚಿತ್ರ Image Credit source: Pinterest
ಮಾಲಾಶ್ರೀ ಅಂಚನ್​
|

Updated on: Jun 10, 2026 | 7:42 PM

Share

ಹಿಂದಿನ ಕಾಲದಿಂದಲೂ ನಿಂಬೆ ಹಣ್ಣಿನ (lemon) ಬಳಕೆ ಹೆಚ್ಚಾಗಿದೆ. ವಿಟಮಿನ್‌ ಸಿ ಹೇರಳವಾಗಿರುವ ಈ ಹಣ್ಣನಿಂದ ವಿವಿಧ ಬಗೆಯ ಪಾನೀಯ, ಉಪ್ಪಿನಕಾಯಿಯನ್ನು ತಯಾರಿಸಲಾಗುತ್ತದೆ. ಅಲ್ಲದೆ ಅಡುಗೆಯಲ್ಲೂ ಬಳಸಲಾಗುತ್ತದೆ. ಹಾಗಾಗಿ ಎಲ್ಲರೂ ಪ್ರತಿ ಬಾರಿ ಮಾರುಕಟ್ಟೆಗೆ ಹೋದ ಸಂದರ್ಭದಲ್ಲಿ ಜಾಸ್ತಿ ಪ್ರಮಾಣದಲ್ಲಿಯೇ ನಿಂಬೆ ಹಣ್ಣನ್ನು ಖರೀದಿ ಮಾಡುತ್ತಾರೆ. ಖರೀದಿ ಮಾಡಿ ತಂದಂತಹ ಈ ನಿಂಬೆ ಹಣ್ಣುಗಳು ಕೆಲವೇ ಕೆಲವು ದಿನಗಳಲ್ಲಿ ಒಣಗಿಬಿಡುತ್ತವೆ. ಅನೇಕ ಜನರು ಅವುಗಳನ್ನು ನಿಷ್ಪ್ರಯೋಜಕವೆಂದು ಭಾವಿಸಿ ಎಸೆಯುತ್ತಾರೆ. ವಾಸ್ತವವಾಗಿ, ಒಣಗಿದ ನಿಂಬೆಹಣ್ಣುಗಳಿಂದಲೂ ಹಲವು ಉಪಯೋಗಗಳಿವೆ. ಹೌದು  ಅವುಗಳಲ್ಲಿರುವ ನೈಸರ್ಗಿಕ ಆಮ್ಲಗಳು ಮನೆ ಶುಚಿಗೊಳಿಸುವುಕೆಗೆ ತುಂಬಾನೇ ಪರಿಣಾಮಕಾರಿ. ಒಣಗಿದ ನಿಂಬೆ ಹಣ್ಣಿನಿಂದ ಯಾವೆಲ್ಲಾ ಉಪಯೋಗಗಳಿವೆ ಎಂಬುದನ್ನು ನೋಡೋಣ ಬನ್ನಿ.

ಒಣಗಿದ ನಿಂಬೆಯ ಉಪಯೋಗಗಳೇನು?

ಸಿಂಕ್ ಅನ್ನು ಸ್ವಚ್ಛಗೊಳಿಸಬಹುದು: ಒಣಗಿದ ನಿಂಬೆಹಣ್ಣನ್ನು ಎರಡು ತುಂಡುಗಳಾಗಿ ಕತ್ತರಿಸಿ ಅದನ್ನು ಸಿಂಕ್ ಅನ್ನು ಸ್ವಚ್ಛಗೊಳಿಸಲು ಬಳಸಿ. ಇದು ನೈಸರ್ಗಿಕ ಕ್ಲೀನರ್ ಆಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಇದು ಸಿಂಕ್‌ನಲ್ಲಿ ಸಂಗ್ರಹವಾಗುವ ಬ್ಯಾಕ್ಟೀರಿಯಾ ಮತ್ತು ವಾಸನೆಯನ್ನು ಸಂಪೂರ್ಣವಾಗಿ ನಿವಾರಿಸುತ್ತದೆ.

ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಸಹಕಾರಿ: ಒಣಗಿದರೂ ನಿಂಬೆಹಣ್ಣಿನ ಸುವಾಸನೆ ಹೋಗುವುದಿಲ್ಲ ಮತ್ತು ಅವು ತಾಜಾವಾಗಿರುತ್ತವೆ. ಆದ್ದರಿಂದ, ಅವುಗಳನ್ನು ಎರಡು ಭಾಗಗಳಾಗಿ ಕತ್ತರಿಸಿ,  ಅದಕ್ಕೆ ಅಡುಗೆ ಸೋಡಾ ಸಿಂಪಡಿಸಿ ಬೆರೆಸಿ ಫ್ರಿಡ್ಜ್, ಶೂ ರ್ಯಾಕ್ ಮತ್ತು ಕಪಾಟುಗಳಲ್ಲಿ ಇರಿಸಿ.

ಪಾತ್ರೆಗಳನ್ನು ಪಾಲಿಶ್ ಮಾಡಲು ಬಳಸಬಹುದು: ನಿಂಬೆಹಣ್ಣುಗಳು ಹಿತ್ತಾಳೆ ಪಾತ್ರೆಗಳನ್ನು ಹೊಳೆಯುವಂತೆ ಮಾಡುವ ಶಕ್ತಿಯನ್ನು ಹೊಂದಿವೆ. ಹಿತ್ತಾಳೆ ಪಾತ್ರೆಗಳನ್ನು ಸ್ವಚ್ಛಗೊಳಿಸಲು ಈ ಒಣ ನಿಂಬೆಯನ್ನು ಬಳಸಿಕೊಳ್ಳಬಹುದು. ಮ್ಮ ಉಕ್ಕಿನ ಅಥವಾ ತಾಮ್ರದ ಪಾತ್ರೆಗಳ ಮೇಲೆ ಸ್ವಲ್ಪ ಉಪ್ಪನ್ನು ಸಿಂಪಡಿಸಿ ಮತ್ತು ಒಣಗಿದ ನಿಂಬೆಹಣ್ಣಿನ ತುಂಡಿನಿಂದ ಚೆನ್ನಾಗಿ ಉಜ್ಜಿ. ಇದು ಮೊಂಡುತನದ ಕಲೆಗಳನ್ನು ತೆಗೆದುಹಾಕಿ ಅವುಗಳನ್ನು ಹೊಳೆಯುವಂತೆ ಮಾಡುತ್ತದೆ.

ಇದನ್ನೂ ಓದಿ: ಹಳೆಯ ಟೂತ್‌ಬ್ರಷ್‌ ಎಸೆಯುವ ಬದಲು ಮನೆಯ ಎಲ್ಲಾ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳಿ

ಕೀಟಗಳನ್ನು ನಿವಾರಿಸಲು ಸಹಕಾರಿ: ಇರುವೆಗಳು, ಕೀಟಗಳು ನಿಂಬೆಯ ವಾಸನೆಯನ್ನು ಇಷ್ಟಪಡುವುದಿಲ್ಲ. ಹಾಗಾಗಿ ಒಣಗಿದ ನಿಂಬೆಹಣ್ಣನ್ನು ಎರಡು ಹೋಳುಗಳಾಗಿ  ಕತ್ತರಿಸಿ ನಿಂಬೆ ಅಡುಗೆಮನೆಯ ಮೂಲೆಗಳಲ್ಲಿ  ಇರಿಸಿ. ಇದು ಆಹಾರದ ಮೇಲೆ ಕೀಟಗಳು ಆವರಿಸಿಕೊಳ್ಳುವುದನ್ನು  ತಡೆಯುತ್ತವೆ.

ಗಿಡಮೂಲಿಕೆ ಚಹಾ ಮಾಡಿ: ಒಣಗಿದ ನಿಂಬೆಹಣ್ಣಿನಿಂದ ನೀವು ಗಿಡಮೂಲಿಕೆ ಚಹಾ ಸಹ ತಯಾರಿಸಬಹುದು. ಚರ್ಮದ ಹೊಳಪನ್ನು ಸುಧಾರಿಸುವುದರಿಂದ ಹಿಡಿದು ತೂಕ ಇಳಿಸುವವರೆಗೆ ಇದು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದನ್ನು ಮಾಡಲು, ಒಣಗಿದ ನಿಂಬೆಹಣ್ಣನ್ನು ಕೆಲವು ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ, ರಾತ್ರಿಯಿಡೀ ನೆನೆಸಿಟ್ಟರೆ  ಉತ್ತಮ. ನಂತರ, ಬೆಳಿಗ್ಗೆ ನೀರನ್ನು ಚೆನ್ನಾಗಿ ಕುದಿಸಿ. ಜೇನುತುಪ್ಪ ಸೇರಿಸಿ ಕುಡಿಯಿರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನೆಹರು ದಾಖಲೆ ಮುರಿದ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ
ನೆಹರು ದಾಖಲೆ ಮುರಿದ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ
ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ
ಅಪ್ರಾಪ್ತನಿಗೆ ಸಿಗರೇಟ್ ಸೇದಿಸಿ,ಬ್ಲಾಕ್‌ಮೇಲ್ ಮಾಡಿ 120 ಗ್ರಾಂ ಚಿನ್ನ ದರೋಡ
ಅಪ್ರಾಪ್ತನಿಗೆ ಸಿಗರೇಟ್ ಸೇದಿಸಿ,ಬ್ಲಾಕ್‌ಮೇಲ್ ಮಾಡಿ 120 ಗ್ರಾಂ ಚಿನ್ನ ದರೋಡ