AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಡು ಬೇಸಿಗೆಯಲ್ಲಿ ಆರಾಮದಾಯಕವಾಗಿರಲು ಈ ಬಣ್ಣದ ಬಟ್ಟೆಗಳನ್ನು ಧರಿಸುವುದು ಸೂಕ್ತ

ಈ ಸುಡು ಬೇಸಿಗೆಯಲ್ಲಿ ಉಂಟಾಗುವ ಉರಿ, ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು, ಈ ಋತುವಿಗೆ ಸೂಕ್ತವಾದ ಬಣ್ಣದ ಬಟ್ಟೆಗಳನ್ನೇ ಧರಿಸಬೇಕು. ಸರಿಯಾದ ಬಣ್ಣದ ಹಾಗೂ ಸೂಕ್ತ ಬಟ್ಟೆಗಳು ಆರಾಮದಾಯಕವಾಗಿರುವುದಲ್ಲದೆ, ಈ ಬಟ್ಟೆಗಳನ್ನು ಧರಿಸುವುದರಿಂದ ಸುಡು ಬಿಸಿಲಿನಲ್ಲೂ ದೇಹ ಕೂಲ್‌ ಆಗಿರುತ್ತದೆ. ಹಾಗಿದ್ರೆ ಈ ಬೇಸಿಗೆಯಲ್ಲಿ ಯಾವ ಬಣ್ಣದ ಬಟ್ಟೆಗಳನ್ನು ಧರಿಸಬೇಕು ಎಂಬುದನ್ನು ತಪ್ಪದೆ ತಿಳಿಯಿರಿ.

ಸುಡು ಬೇಸಿಗೆಯಲ್ಲಿ ಆರಾಮದಾಯಕವಾಗಿರಲು ಈ ಬಣ್ಣದ ಬಟ್ಟೆಗಳನ್ನು ಧರಿಸುವುದು ಸೂಕ್ತ
ಸಾಂದರ್ಭಿಕ ಚಿತ್ರ Image Credit source: Pinterest
ಮಾಲಾಶ್ರೀ ಅಂಚನ್​
|

Updated on: Mar 08, 2026 | 4:58 PM

Share

ಬೇಸಿಗೆ  (summer) ಈಗಾಗ್ಲೆ ಆರಂಭವಾಗಿದ್ದು, ಸುಡು ಬೇಸಿಗೆಯಲ್ಲಿ ವಾತಾವರಣ ಮಾತ್ರವಲ್ಲ ದೇಹ ಕೂಡ ತುಂಬಾನೆ ಬಿಸಿಯಾಗಿರುತ್ತದೆ. ಈ ತಾಪಮಾಣದ ಕಾರಣದಿಂದಾಗಿ ನಿರ್ಜಲೀಕರಣ, ಆಯಾಸದಂತಹ ಸಮಸ್ಯೆಗಳ ಜೊತೆಗೆ ಕಿರಿಕಿರಿಯೂ ಉಂಟಾಗುತ್ತದೆ. ಈ ಕಿರಿಕಿರಿಯನ್ನು ತಪ್ಪಿಸಿ ಆರಾಮದಾಯಕವಾಗಿರಲು, ಬಿಸಿಲಿನ ತಾಪದಿಂದ ದೇಹವನ್ನು ರಕ್ಷಿಸಿಕೊಳ್ಳಲು ಸೂಕ್ತ ಬಣ್ಣದ ಬಟ್ಟೆಗಳನ್ನು ಧರಿಸುವುದು ತುಂಬಾನೇ ಮುಖ್ಯ. ಹೌದು ಬೇಸಿಗೆಯಲ್ಲಿ ತೀವ್ರವಾದ ಸೂರ್ಯನ ಬೆಳಕು ಮತ್ತು ಶಾಖ ಇರುವುದರಿಂದ ಈ ಸಮಯದಲ್ಲಿ ದೇಹವನ್ನು ತಂಪಾಗಿ ಮತ್ತು ಆರಾಮದಾಯಕವಾಗಿಡಲು ತಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು ಒಳ್ಳೆಯದು.

ಬೇಸಿಗೆಯಲ್ಲಿ ಯಾವ ಬಣ್ಣದ ಬಟ್ಟೆಗಳನ್ನು ಧರಿಸುವುದು ಸೂಕ್ತ?

ಪೀಚ್‌ ಬಣ್ಣದ ಬಟ್ಟೆ: ಸೂರ್ಯನ ಕಿರಣಗಳು ಗಾಢ ಬಣ್ಣದ ಬಟ್ಟೆಗಳ ಮೇಲೆ ಬಿದ್ದಾಗ, ನಮ್ಮ ದೇಹವು ಬೆಚ್ಚಗಾಗುತ್ತದೆ. ಕೆಲವೊಮ್ಮೆ ಶಾಖ ತುಂಬಾ ತೀವ್ರವಾಗಿರುವುದರಿಂದ ಚರ್ಮವು ಉರಿಯಲು ಪ್ರಾರಂಭಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪೀಚ್‌ ಬಣ್ಣದಂತಹ ತಿಳಿ ಬಣ್ಣದ ಬಟ್ಟೆ ಧರಿಸಬೇಕು. ಇದು ಆರಾಮದಾಯಕವಾಗಿರುತ್ತದೆ.

 ಆಕಾಶನೀಲಿ ಬಣ್ಣ: ಬೇಸಿಗೆಯಲ್ಲಿ ಆರಾಮದಾಯಕವಾಗಿರಲು ಆಕಾಶ ನೀಲಿ ಬಣ್ಣದ ಬಟ್ಟೆಗಳನ್ನು ಸಹ ಧರಿಸಬಹುದು.  ಇದು ಸೂರ್ಯನ ಕಿರಣಗಳಿಂದ ನಿಮ್ಮನ್ನು ನೀವು ರಕ್ಷಿಸಲು ಸಹಾಯ ಮಾಡುತ್ತದೆ ಮತ್ತು ನಿಮ್ಮನ್ನು ತಂಪಾಗಿರಿಸುತ್ತದೆ.

ಲ್ಯಾವೆಂಡರ್ ಬಣ್ಣ: ಲ್ಯಾವೆಂಡರ್ ಬಣ್ಣದ ಬಟ್ಟೆಗಳು ಬೆಚ್ಚಗಿನ ಹವಾಮಾನಕ್ಕೆ ಸೂಕ್ತವಾಗಿದೆ. ಈ ಮೃದುವಾದ ಬಣ್ಣವು ಶಾಖದ ಪರಿಣಾಮಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ತಿಳಿ ಬೂದು ಬಣ್ಣ: ತಿಳಿ ಬೂದು ಬಣ್ಣದ ಬಟ್ಟೆಗಳನ್ನು ಸಹ ಬೇಸಿಗೆಯಲ್ಲಿ ಧರಿಸಬಹುದು, ಏಕೆಂದರೆ ಇದು ನಿಮ್ಮ ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ, ಇದು ಬೆವರನ್ನು ಹೀರಿಕೊಳ್ಳುತ್ತದೆ. ಜೊತೆಗೆ  ಬೇಸಿಗೆಯಲ್ಲಿ ಈ ಬಣ್ಣದ ಬಟ್ಟೆಗಳು ನಿಮ್ಮ ದೇಹವನ್ನು ಆರಾಮದಾಯಕವಾಗಿರಿಸುತ್ತದೆ.

ತಿಳಿ ಹಳದಿ ಬಣ್ಣ: ತಿಳಿ ಹಳದಿ ಬಣ್ಣದ ಬಟ್ಟೆಗಳು ಬೇಸಿಗೆಯಲ್ಲಿ ಆರಾಮದಾಯಕವಾಗಿರುತ್ತದೆ. ಈ  ಮೃದುವಾದ ಬಣ್ಣವು ನಿಮ್ಮ ದೇಹವನ್ನು ಸೂರ್ಯನ ಕಿರಣಗಳಿಂದ ರಕ್ಷಿಸುತ್ತದೆ, ದೇಹವನ್ನು ಬಿಸಿಯಾಗದಂತೆ ನೋಡಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಬೇಸಿಗೆಯಲ್ಲಿ ದೇಹ ತಂಪಾಗಿರಿಸಲು ಹಣ್ಣುಗಳನ್ನು ಸೇವನೆ ಮಾಡಲೇಬೇಕು

ಬಿಳಿ ಬಣ್ಣದ ಬಟ್ಟೆ: ಬೇಸಿಗೆಯಲ್ಲಿ ಆರಾಮದಾಯಕವಾಗಿರಲು ನೀವು ಬಿಳಿ ಬಣ್ಣದ ಬಟ್ಟೆಗಳನ್ನೂ ಧರಿಸಬಹುದು. ಬಿಳಿ  ಮತ್ತು ತಿಳಿ ಬಣ್ಣದ ಬಟ್ಟೆಗಳು ಸೂರ್ಯನ ಕಿರಣಗಳನ್ನು ಪ್ರತಿಬಿಂಬಿಸುತ್ತವೆ, ಇವು ಕಡಿಮೆ ಶಾಖವನ್ನು ಹೀರಿಕೊಂಡಾಗ, ದೇಹವು ಕಡಿಮೆ ಬಿಸಿಯಾಗಿರುತ್ತದೆ. ಇದು ಬೆವರುವಿಕೆಯನ್ನು ಕಡಿಮೆ ಮಾಡುತ್ತದೆ.

ಬಣ್ಣ ಮಾತ್ರವಲ್ಲ, ಬಟ್ಟೆಯ ಮೆಟಿರಿಯಲ್ ಸಹ ಮುಖ್ಯ ಪಾತ್ರವಹಿಸುತ್ತದೆ. ಹಾಗಾಗಿ ಈ ಸಮಯದಲ್ಲಿ ಹತ್ತಿ ಬಟ್ಟೆಗಳನ್ನು ಧರಿಸುವುದು ಸೂಕ್ತ. ಹತ್ತಿ ಬಟ್ಟೆ ಬೆವರು ಹೀರಿಕೊಳ್ಳುತ್ತವೆ ಮತ್ತು ದೇಹವನ್ನು ತಂಪಾಗಿರಿಸುತ್ತವೆ.  ನೈಲಾನ್, ಸ್ಯಾಟಿನ್, ಸಿಂಥೆಟಿಕ್, ವೆಲ್ವೆಟ್, ಪಾಲಿಯೆಸ್ಟರ್‌ನಂತಹ ಬಟ್ಟೆಗಳನ್ನು ಧರಿಸಿದರೆ, ಇದರಿಂದ ಬೆವರು ಒಣಗುವುದಿಲ್ಲ, ಇದು ಚರ್ಮವನ್ನು ಜಿಗುಟಾಗಿ ಮಾಡುತ್ತದೆ ಮತ್ತು ತುರಿಕೆ, ಕಿರಿಕಿರಿ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಬೇಸಿಗೆಯಲ್ಲಿ ತಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು ಸೂಕ್ತ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್