AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Art Of Yoga: ಅಪಾನವಾಯು ಎಂದರೇನು? ತತ್ವ, ಚಕ್ರಗಳ ಬಗ್ಗೆ ಮಾಹಿತಿ ಇಲ್ಲಿದೆ

Art Of Yoga: ಶ್ವಾಸಕೋಶಗಳು ಮತ್ತು ವಿಸರ್ಜನಾ ವ್ಯವಸ್ಥೆಯ ಮೂಲಕ ದೇಹದಿಂದ ತ್ಯಾಜ್ಯ ಉತ್ಪನ್ನಗಳನ್ನು ತೆಗೆದುಹಾಕುವುದು ಅಪಾನವಾಯುವಿನ ಕೆಲಸವಾಗಿದೆ. ಹೊಟ್ಟೆಯನ್ನು, ಹೊಕ್ಕುಳ ಪ್ರದೇಶದ ಕೆಳಗೆ, ಮತ್ತು ದೊಡ್ಡ ಕರುಳು, ಮೂತ್ರಪಿಂಡಗಳು, ಗುದದ್ವಾರ ಮತ್ತು ಜನನಾಂಗಗಳಿಗೆ ಶಕ್ತಿಯನ್ನು ಒದಗಿಸುತ್ತದೆ.

Art Of Yoga: ಅಪಾನವಾಯು ಎಂದರೇನು? ತತ್ವ, ಚಕ್ರಗಳ ಬಗ್ಗೆ ಮಾಹಿತಿ ಇಲ್ಲಿದೆ
Apanavayu
TV9 Web
| Updated By: ನಯನಾ ರಾಜೀವ್

Updated on: May 19, 2022 | 3:31 PM

Share

ಅಪಾನವಾಯು ಸ್ಥಳ: ಮೂತ್ರಪಿಂಡ

ತತ್ವ: ಭೂಮಿ

ಚಕ್ರ: ಮೂಲಾಧಾರ ಚಕ್ರ

ಸಕ್ರಿಯಗೊಳಿಸುವುದು ಹೇಗೆ: ನೌಲಿ ಕ್ರಿಯಾ, ಅಗ್ನಿಸಾರ ಕ್ರಿಯಾ, ಅಶ್ವಿನಿ ಮುದ್ರ ಹಾಗೂ ಮೂಲಬಂಧ

ಶ್ವಾಸಕೋಶಗಳು ಮತ್ತು ವಿಸರ್ಜನಾ ವ್ಯವಸ್ಥೆಯ ಮೂಲಕ ದೇಹದಿಂದ ತ್ಯಾಜ್ಯ ಉತ್ಪನ್ನಗಳನ್ನು ತೆಗೆದುಹಾಕುವುದು ಅಪಾನವಾಯುವಿನ ಕೆಲಸವಾಗಿದೆ. ಹೊಟ್ಟೆಯನ್ನು, ಹೊಕ್ಕುಳ ಪ್ರದೇಶದ ಕೆಳಗೆ, ಮತ್ತು ದೊಡ್ಡ ಕರುಳು, ಮೂತ್ರಪಿಂಡಗಳು, ಗುದದ್ವಾರ ಮತ್ತು ಜನನಾಂಗಗಳಿಗೆ ಶಕ್ತಿಯನ್ನು ಒದಗಿಸುತ್ತದೆ. ಇದು ದೇಹದಿಂದ ತ್ಯಾಜ್ಯವನ್ನು ಹೊರಹಾಕುವುದಕ್ಕೆ ಸಂಬಂಧಿಸಿದೆ.

ನಮ್ಮ ಜೀರ್ಣಾಂಗ ವ್ಯವಸ್ಥೆಯ ಯಾವುದೇ ಭಾಗದಲ್ಲಿ ವಾಯು ಉತ್ಪತ್ತಿಯಾಗಬಹುದು, ಅಂದರೆ ಹೊಟ್ಟೆಯಿಂದ ಗುದದ್ವಾರದವರೆಗೆ ಎಲ್ಲೂ ಉತ್ಪತ್ತಿಯಾಗಬಹುದು. ಅಷ್ಟೇ ಅಲ್ಲ, ನಾವು ಅಗಿದು ನುಂಗುವ ಆಹಾರದೊಂದಿಗೂ ಕೊಂಚ ಪ್ರಮಾಣದ ಗಾಳಿ ಹೊಟ್ಟೆಯನ್ನು ಸೇರುತ್ತದೆ. ವಾಯು ಎಂಬುದು ಸಂಸ್ಕೃತ ಪದವಾಗಿದ್ದು ಗಾಳಿ ಮತ್ತು ಅಪಾನ ವಾಯು ಎಂದರೆ ದೂರ ಚಲಿಸುವ ಗಾಳಿ. ಅಪಾನ ವಾಯುವು ಭೂಮಿಯ ಅಂಶದೊಂದಿಗೆ ಸಂಪರ್ಕ ಹೊಂದಿದೆ ಮತ್ತು ಮೂಲಾಧಾರ ಚಕ್ರದ ಶಕ್ತಿಯಾಗಿದೆ.

ಮತ್ತಷ್ಟು ಓದಿ

ಅಪಾನ ವಾಯು ಮತ್ತು ಪ್ರಾಣವಾಯು ವಿರುದ್ಧ ಮಾರ್ಗಗಳಲ್ಲಿ ಚಲಿಸುವ ಮೂಲಕ ಒಟ್ಟಿಗೆ ಕೆಲಸ ಮಾಡುತ್ತವೆ. ಅಪಾನ ವಾಯುವು ಭೌತಿಕವಾಗಿ ದೇಹದಲ್ಲಿನ ತ್ಯಾಜ್ಯವನ್ನು ತೆಗೆದುಹಾಕುವುದನ್ನು ನಿಯಂತ್ರಿಸುವ ಶಕ್ತಿಯಾಗಿದೆ. ಜನನಾಂಗಗಳು, ಕರುಳು, ಮೂತ್ರಪಿಂಡಗಳಲ್ಲಿ ಕಾರ್ಯನಿರ್ವಹಿಸುತ್ತದೆ.

ಗರ್ಭಾವಸ್ಥೆಯಲ್ಲಿ ಅಪಾನವಾಯು ತುಂಬಾ ಪ್ರಭಾವಶಾಲಿಯಾಗಿ ಕೆಲಸ ಮಾಡುತ್ತದೆ, ಮಗುವನ್ನು ತಾಯಿ ತನ್ನ ದೇಹದಿಂದ ಹೊರ ಹಾಕುವಾಗ ಇರುವಂತಹ ವಾಯು ಅಪಾನವಾಯು, ಗರ್ಭಿಣಿಯರು ಮೂರನೇ ತಿಂಗಳಿನಿಂದ ಅಪಾನವಾಯುವನ್ನು ಪ್ರಾಕ್ಟೀಸ್ ಮಾಡಲು ಸಲಹೆ ನೀಡಲಾಗುತ್ತದೆ. ತಲೆಯು ಸರಿಯಾಗಿ ಫಿಕ್ಸ್​ ಆದಾಗ ಸಹಜವಾಗಿ ಪ್ರಸವವಾಗುತ್ತದೆ.

ಮತ್ತಷ್ಟು ಓದಿ

ಅಪಾನ ವಾಯುವು ಪ್ರಾಣದ ಐದು ಶಕ್ತಿಯ ಉಪವಿಭಾಗಗಳಲ್ಲಿ ಒಂದಾಗಿದೆ ಮತ್ತು ಇದನ್ನು ಅತ್ಯಂತ ಪ್ರಮುಖವಾದದ್ದು ಎಂದು ಪರಿಗಣಿಸಲಾಗಿದೆ. ಜೀರ್ಣಕ್ರಿಯೆ, ನಿರ್ಮೂಲನೆ ಮತ್ತು ಸಂತಾನೋತ್ಪತ್ತಿಯ ಮೇಲೆ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ, ಇದು ಕೆಳ ಹೊಟ್ಟೆಯ ಪ್ರದೇಶಗಳಲ್ಲಿ ಸಕ್ರಿಯವಾಗಿದೆ.

ಕಮಲಾ ಭಾರಧ್ವಾಜ್ ಕುರಿತು ಮಾಹಿತಿ: ಕಮಲಾ ಭಾರಧ್ವಾಜ್ ಪ್ರಸಿದ್ಧ ಯೋಗ ತಜ್ಞರಾಗಿದ್ದು, ಸತ್ಯವೆನ್ನುವ ಯೋಗ ಕೇಂದ್ರವನ್ನು ಮುನ್ನಡೆಸುತ್ತಿದ್ದಾರೆ. ಯೋಗದಲ್ಲಿ ಎಂಎಸ್​ಸಿ ಮಾಡಿದ್ದು, ಹಾಗೆಯೇ ಯೋಗದಲ್ಲಿಯೇ ಪಿಜಿ ಡಿಪ್ಲೊಮಾ ಓದಿದ್ದಾರೆ.

ಅವರು ಜೈನ್​ ಕಾಲೇಜಿನಲ್ಲಿ ಎಂಬಿಎ ಪೂರೈಸಿದ್ದಾರೆ. ಅವರಿಗೆ 2015ರಲ್ಲಿ ಯೋಗದಲ್ಲಿನ ಸಾಧನೆಗಾಗಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಯೋಗ ಕಲಾಸಾಧಕಿ ಪ್ರಶಸ್ತಿಗೂ ಭಾಜನರಾಗಿದ್ದಾರೆ, ಜ್ಯೋತಿಷ ರತ್ನ ಸೇರಿದಂತೆ ಹಲವು ಕೋರ್ಸ್​ಗಳನ್ನು ಮಾಡಿದ್ದಾರೆ. ಚಕ್ರ ಹಾಗೂ ಯೋಗದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ.ನಂ.9663879672. astroyoga.co.in ಭೇಟಿ ನೀಡಿ, ಉಚಿತವಾಗಿ ನಿಮ್ಮ ಚಕ್ರಗಳ ಬಗ್ಗೆ ತಿಳಿದುಕೊಳ್ಳಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು... ಆಮೇಲೇನಾಯ್ತು?
VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು... ಆಮೇಲೇನಾಯ್ತು?
ಡಿಕೆಶಿ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ: ರಂಗನಾಥ್ ಹೇಳಿದ್ದೇನು ನೋಡಿ
ಡಿಕೆಶಿ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ: ರಂಗನಾಥ್ ಹೇಳಿದ್ದೇನು ನೋಡಿ
ವೃಥಾ ಹೇಳಿಕೆ ನೀಡುವ ಶಾಸಕರ ವಿರುದ್ಧ ಹೈಕಮಾಂಡ್ ಕ್ರಮ ತಗೊಳ್ಳುತ್ತೆ: ಸಚಿವ
ವೃಥಾ ಹೇಳಿಕೆ ನೀಡುವ ಶಾಸಕರ ವಿರುದ್ಧ ಹೈಕಮಾಂಡ್ ಕ್ರಮ ತಗೊಳ್ಳುತ್ತೆ: ಸಚಿವ
ಸರ್ವೆ ವೇಳೆ ಬಿಬಿಎಂಪಿ ಸಿಬ್ಬಂದಿ ಗೂಂಡಾಗಿರಿ: ಮಾಲೀಕನ ಮೇಲೆ ಹಲ್ಲೆಗೆ ಯತ್ನ
ಸರ್ವೆ ವೇಳೆ ಬಿಬಿಎಂಪಿ ಸಿಬ್ಬಂದಿ ಗೂಂಡಾಗಿರಿ: ಮಾಲೀಕನ ಮೇಲೆ ಹಲ್ಲೆಗೆ ಯತ್ನ