AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Walking Benefits: ವಾಕಿಂಗ್ ಮಾಡುವುದರಿಂದ ಏನು ಪ್ರಯೋಜನ? ನಿಮ್ಮ ದಿನಚರಿಯಲ್ಲಿ ಊಟದ ನಂತರ ನಡೆಯುವುದು ಏಕೆ ಉತ್ತಮ? ಇಲ್ಲಿದೆ ಮಾಹಿತಿ

ಪ್ರತಿದಿನ ದಿನಕ್ಕೆ ಸುಮಾರು 10-15 ನಿಮಿಷಗಳ ಕಾಲ ನಡೆಯುವುದರಿಂದ ಹೃದಯಾಘಾತ ಮತ್ತು ಇತರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ? ಈ ಬಗ್ಗೆ ಇಲ್ಲಿದೆ ಮಾಹಿತಿ.

Walking Benefits: ವಾಕಿಂಗ್ ಮಾಡುವುದರಿಂದ ಏನು ಪ್ರಯೋಜನ? ನಿಮ್ಮ ದಿನಚರಿಯಲ್ಲಿ ಊಟದ ನಂತರ ನಡೆಯುವುದು ಏಕೆ ಉತ್ತಮ? ಇಲ್ಲಿದೆ ಮಾಹಿತಿ
ವಾಕಿಂಗ್
ಪ್ರೀತಿ ಭಟ್​, ಗುಣವಂತೆ
| Updated By: ನಯನಾ ರಾಜೀವ್|

Updated on:May 03, 2023 | 3:39 PM

Share

ಒತ್ತಡದ ಜೀವನ ಶೈಲಿ ನಮ್ಮನ್ನು ಹೈರಾಣವಾಗಿಸಿಬಿಟ್ಟಿದೆ. ಇದರಿಂದ ದೇಹದ ಆರೋಗ್ಯ(Health) ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಹಾಗಾಗಿ ಇದರಿಂದ ಮುಕ್ತಿ ಪಡೆಯಲು ಸುಲಭ ಮಾರ್ಗವೆಂದರೆ, ಪ್ರತಿದಿನ ಕೇವಲ ಕೆಲವು 10-15 ನಿಮಿಷ ನಡಿಗೆ ಮಾಡುವುದು. ಇದರಿಂದ ಆರೋಗ್ಯಕರ ಜೀವನಶೈಲಿ(Lifestyle) ನಿಮ್ಮದಾಗುತ್ತದೆ. ನಿಮ್ಮ ದೇಹಕ್ಕೆ ನಿಯಮಿತ ದೈಹಿಕ ವ್ಯಾಯಾಮದ ಮಹತ್ವವನ್ನು ಯಾರೂ ಹೇಳಲು ಸಾಧ್ಯವಿಲ್ಲ. ಇದು ಸಾಮಾನ್ಯ ಜ್ಞಾನ ಅಲ್ಲದೆ ನೀವು ಮಾಡಿ ನೋಡಿದಾಗಲೇ ನಿಮಗೆ ಅರಿವಾಗುವುದು. ಈ ಸಮಯದಲ್ಲಿ ಜನರಲ್ಲಿ ದೀರ್ಘಕಾಲದ ಕಾಯಿಲೆಗಳು ಹೆಚ್ಚುತ್ತಿದ್ದು ನಮ್ಮ ಮುಂದೆಯೇ ಅಂತಹ ಘಟನೆ ನಡೆಯುತ್ತಿವೆ. ಹಾಗಾಗಿ ನಡಿಗೆಯನ್ನು ಗಂಭೀರವಾಗಿ ಪರಿಗಣಿಸಬೇಕು, ವಿಶೇಷವಾಗಿ ಊಟದ ನಂತರ ಮಲಗಬಾರದು. ಊಟವು ಕೆಲವೊಮ್ಮೆ ನಮ್ಮನ್ನು ಸೋಮಾರಿ ಮತ್ತು ನಿಧಾನಗೊಳಿಸಿ ಬಿಡುತ್ತದೆ. ಹಾಗಾಗಿ ನಮ್ಮಲ್ಲಿ ಅಂತಹ ಅಭ್ಯಾಸಗಳಿದ್ದಲ್ಲಿ ನಾವು ಅದನ್ನು ಹೇಗೆ ನಿವಾರಿಸಬಹುದು? ಎಂಬುದಕ್ಕೆ ಇಲ್ಲಿದೆ ಮಾಹಿತಿ.

ಮತ್ತಷ್ಟು ಓದಿ: Lose Weight in Summer: ಬೇಸಿಗೆಯಲ್ಲಿ ದೇಹ ತೂಕ ಇಳಿಸಿಕೊಳ್ಳಲು ಇರುವ ಆರೋಗ್ಯಕರ ಮಾರ್ಗಗಳು

ಕೆಲವು ನಿಮಿಷಗಳ ನಡಿಗೆಯು ನಮ್ಮನ್ನು ಹಲವಾರು ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಬಹುದು. ಊಟದ ನಂತರ ಎರಡು ನಿಮಿಷಗಳ ಕಾಲ ನಡೆಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಟೈಪ್ 2 ಮಧುಮೇಹವನ್ನು ಹೆಚ್ಚಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ.

ವಾಕಿಂಗ್ ಮಧುಮೇಹಕ್ಕೆ ಹೇಗೆ ಪ್ರಯೋಜನಕಾರಿ ಎಂದು ಪೌಷ್ಟಿಕತಜ್ಞ ಲೊವ್ನೀತ್ ಬಾತ್ರಾ ಹಂಚಿಕೊಂಡಿದ್ದಾರೆ. “ಊಟದ ನಂತರ ಗ್ಲುಕೋಸ್ ಬಿಡುಗಡೆಯಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಸಣ್ಣ ಏರಿಕೆಗೆ ಕಾರಣವಾಗುತ್ತದೆ. ಸಣ್ಣ ಸಕ್ಕರೆ ಸ್ಪೈಕ್ಗಳು ಅಸಹಜವಲ್ಲವಾದರೂ, ಮಧುಮೇಹವನ್ನು ನಿರ್ವಹಿಸುವಲ್ಲಿ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ಎಂದಿದ್ದಾರೆ.

ಊಟದ ನಂತರದ ನಡಿಗೆಯ ಪ್ರಯೋಜನಗಳೇನು? -ಪ್ರತಿದಿನ ಸಣ್ಣ ನಡಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. -ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. -ವಾಕಿಂಗ್ ಕೀಲು ನೋವನ್ನು ಕಡಿಮೆ ಮಾಡಲು ಸಹಕಾರಿ. -ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. -ಸ್ನಾಯುಗಳು, ಮೂಳೆಗಳು ಇತ್ಯಾದಿಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. -ರಕ್ತದ ಹರಿವನ್ನು ಹೆಚ್ಚಿಸುತ್ತದೆ. -ಡೋಪಮೈನ್, ಆಕ್ಸಿಟೋಸಿನ್, ಸೆರೊಟೋನಿನ್ ಮತ್ತು ಎಂಡಾರ್ಫಿನ್ಗಳು ಹಾರ್ಮೋನುಗಳನ್ನು ಬಿಡುಗಡೆ ಮಾಡುತ್ತದೆ. -ಕರುಳಿನ ಆರೋಗ್ಯಕ್ಕೂ ಒಳ್ಳೆಯದು. -ದೀರ್ಘಕಾಲದ ಆರೋಗ್ಯಕರ ಜೀವನಶೈಲಿಗೆ ಪ್ರಯೋಜನಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:34 pm, Wed, 3 May 23

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ