AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Civil Defense Day: ಸಿವಿಲ್ ಸಿಬ್ಬಂದಿಗಳ ಮಹತ್ವವನ್ನು ಸಾರುವ ದಿನವೇ ಈ ‘ವಿಶ್ವ ನಾಗರಿಕ ರಕ್ಷಣಾ ದಿನ’

ಪ್ರತಿ ವರ್ಷ ಮಾರ್ಚ್ 1 ರಂದು, ಪ್ರಪಂಚದಾದ್ಯಂತ ಜನರು ಜಾಗತಿಕ ಸಿವಿಲ್‌ ಡಿಫೆನ್ಸ್‌ ದಿನಾಚರಣೆ ಅಥವಾ ವಿಶ್ವ ನಾಗರಿಕ ರಕ್ಷಣಾ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ನಾಗರಿಕ ರಕ್ಷಣಾ ಪಡೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆಯಾದರೂ, ಈ ವಿಶ್ವ ನಾಗರಿಕ ರಕ್ಷಣಾ ದಿನದ ಹಿಂದಿನ ಉದ್ದೇಶ ಹಾಗೂ ಮಹತ್ವದ ಬಗೆಗಿನ ಸಂಪೂರ್ಣ ಮಾಹಿತಿಯು ಇಲ್ಲಿದೆ.

World Civil Defense Day: ಸಿವಿಲ್ ಸಿಬ್ಬಂದಿಗಳ ಮಹತ್ವವನ್ನು ಸಾರುವ ದಿನವೇ ಈ 'ವಿಶ್ವ ನಾಗರಿಕ ರಕ್ಷಣಾ ದಿನ'
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 29, 2024 | 2:46 PM

ಕೆಲವೊಮ್ಮೆ ಆಕಸ್ಮಿಕವಾಗಿ ಅವಘಡಗಳು ನಡೆಯುತ್ತವೆ. ಈ ಸಮಯದಲ್ಲಿ ನಮ್ಮನ್ನು ನಾವು ರಕ್ಷಿಸಿಕೊಳ್ಳುವುದು ಎಷ್ಟು ಮುಖ್ಯವೋ, ಬೇರೆಯವರನ್ನು ರಕ್ಷಿಸಿ ಅವರ ಜೀವವನ್ನು ಉಳಿಸುವುದು ಅಷ್ಟೇ ಮುಖ್ಯವಾಗುತ್ತದೆ. ಪ್ರಪಂಚದಲ್ಲಿ ಆಕಸ್ಮಿಕವಾಗಿ ಸಂಭವಿಸುವ ಪ್ರಕೃತಿ ವಿಕೋಪ, ಅಗ್ನಿ ದುರಂತ, ರಸ್ತೆ ಅಪಘಾತ, ಕಟ್ಟಡ ಕುಸಿತ ಹೀಗೆ ಅನಾಹುತಗಳಾದಾಗ ಜನರನ್ನು ರಕ್ಷಿಸುವಲ್ಲಿ ಸಿವಿಲ್ ಡಿಫೆನ್ಸ್ ಸಿಬ್ಬಂದಿಗಳು ತಮ್ಮ ಜೀವವನ್ನೇ ಒತ್ತೆ ಇಡುತ್ತಾರೆ. ಹೀಗಾಗಿ ಜನಸಾಮಾನ್ಯರ ಜೀವ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದವರನ್ನು ಈ ದಿನದಂದು ನೆನಪಿಸಿಕೊಳ್ಳಲಾಗುತ್ತದೆ. ಸಿವಿಲ್ ಸಿಬ್ಬಂದಿಗಳ ಮಹತ್ವವನ್ನು ತಿಳಿಸುವ ಸಲುವಾಗಿ ಹಾಗೂ ನಾಗರಿಕ ರಕ್ಷಣೆಯ ಮಹತ್ವದ ಬಗ್ಗೆ ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ವಿಶ್ವದಾದಂತ್ಯ ವಿಶ್ವ ನಾಗರಿಕ ರಕ್ಷಣಾ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ನಾಗರಿಕ ರಕ್ಷಣಾ ದಿನದ ಇತಿಹಾಸ

1931 ರಲ್ಲಿ ಸರ್ಜನ್ ಜನರಲ್ ಜಾರ್ಜ್ ಸೇಂಟ್ ಪಾಲ್ ಅವರು ಜಿನೀವಾ ವಲಯಗಳ ಸಂಘವನ್ನು ಸ್ಥಾಪಿಸಿದರು. ಆದರೆ ಈ ಸಂಘವು ಐಎಸ್‌ಡಿಒ (ಸಿವಿಲ್ ಡಿಫೆನ್ಸ್ ಅನ್ನು ನಾಗರಿಕ ರಕ್ಷಣೆ) ಆಗಿ ಬದಲಾಯಿತು. ಇತ್ತ ಐಎಸ್‌ಡಿಒ ದ ಪ್ರಸ್ತುತ ಸಂವಿಧಾನವನ್ನು 1972 ರಲ್ಲಿ ಸಂಸ್ಥೆಯ ಸದಸ್ಯ ರಾಜ್ಯಗಳಿಂದ ಅನುಮೋದನೆಯು ಸಿಕ್ಕಿತು. ವಿಶ್ವ ನಾಗರಿಕ ರಕ್ಷಣೆ ಪಡೆ ದಿನವನ್ನು 1990 ರಲ್ಲಿ ಇಂಟರ್‌ನ್ಯಾಷನಲ್ ಸಿವಿಲ್ ಡಿಫೆನ್ಸ್ ಆರ್ಗನೈಸೇಶನ್ ಜಾಗತಿಕ ರಜಾದಿನವೆಂದು ಘೋಷಣೆ ಮಾಡಿತ್ತು. ಆದರೆ ವಿಶ್ವ ನಾಗರಿಕ ಪಡೆ ದಿನವನ್ನು ಅಂತರಾಷ್ಟ್ರೀಯ ನಾಗರಿಕ ರಕ್ಷಣಾ ಸಂಸ್ಥೆ ಆರಂಭಿಸಿದ್ದು, ಹೀಗಾಗಿ ಪ್ರತಿ ವರ್ಷವೂ ಮಾರ್ಚ್ 1 ರಂದು ವಿಶ್ವ ನಾಗರಿಕ ರಕ್ಷಣಾ ದಿನವನ್ನು ಆಚರಣೆ ಮಾಡಲಾಯಿತು.

ಇದನ್ನೂ ಓದಿ: ಮಾರ್ಚ್ ನಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳ ಮಾಹಿತಿ ಇಲ್ಲಿದೆ

ವಿಶ್ವ ನಾಗರಿಕ ರಕ್ಷಣಾ ದಿನದ ಮಹತ್ವ

ನೈಸರ್ಗಿಕ ವಿಕೋಪಗಳಿಂದ ತಮ್ಮನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ನಾಗರಿಕರಿಗೆ ಕಲಿಸುವುದು. ರಾಷ್ಟ್ರೀಯ ವಿಪತ್ತು ತಡೆಗಟ್ಟುವಿಕೆಯಲ್ಲಿ ಸೇವೆಗೈದ ಸಿಬ್ಬಂದಿಗಳ ಸಾಧನೆಗಳನ್ನು ಗೌರವಿಸುವ ದಿನವಾಗಿದೆ. ಈ ದಿನವು ಅಪಘಾತಗಳು, ವಿಪತ್ತುಗಳ ಘಟಿಸಿದಾಗ ತಮ್ಮ ಆತ್ಮರಕ್ಷಣೆ ಮತ್ತು ವಿಪತ್ತು ತಡೆಗಟ್ಟುವಿಕೆಯ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ಈ ದಿನದಂದು ಶಾಲಾ ಕಾಲೇಜುಗಳಲ್ಲಿ ವಿಪತ್ತುಗಳು ಸಂಭಾವಿಸಿದಾಗ ಯಾವ ರೀತಿಯಲ್ಲಿ ರಕ್ಷಿಸಿಕೊಳ್ಳಬಹುದು ಎನ್ನುವ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮಗಳು ನಡೆಯುತ್ತವೆ. ಮಾಹಿತಿ ಕಾರ್ಯಗಾರಗಳು ಹಾಗೂ ರಕ್ಷಣಾ ಸಿಬ್ಬಂದಿಗಳಿಂದ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್